ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ

ನಮ್ಮ ಭಾರತ ದೇಶವು ವೇದಧರ್ಮಗಳ ತವರೂರು. ಮೌಲ್ಯಯುತ ಸಂಸ್ಕೃತಿಯ ನೆಲೆ ಬೀಡು. ಇಲ್ಲಿ ಹಲವಾರು ಸಾಧುಸಂತರು, ಪುಣ್ಯ ಪುರುಷರು, ದಾರ್ಶನಿಕರು, ಸಮಾಜ ಸುಧಾರಕರು ಜನ್ಮವೆತ್ತಿದ್ದಾರೆ. ಭಾರತ ಮಾತೆಯು ತನ್ನ ಪುಣ್ಯ ಗರ್ಭದಲ್ಲಿ ಅಸಂಖ್ಯಾತ ಅವತಾರ ಪುರುಷರಿಗೆ ಜನ್ಮ ನೀಡಿ ಸಾಧುಸಂತರನ್ನು, ಪುಣ್ಯ ಪುರುಷರನ್ನು ಸಂರಕ್ಷಿಸಿ ಭಾರತೀಯ ಸಂಸ್ಕೃತಿಯನ್ನು ಬೆಳಗಿಸಿದೆ. ಸತ್ಯ, ಧರ್ಮ, ನ್ಯಾಯ, ನೀತಿ, ಅಹಿಂಸೆ, ಸದಾಚಾರಗಳ ಮೂಲತತ್ವ, ಜನಮನದಲ್ಲಿ ಮೂಡಿಸಿದೆ. `ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿ ಬಡವರ, ದಿನ ದಲಿತರ, ಶೋಷಿತರ, ನೊಂದವರ ಕಣ್ಣೀರನ್ನು ಒರಸಿ, ಎಲ್ಲರ ಕಣ್ಣ ತೆರೆಸಿ ಅವತಾರ ಪುರುಷ ಎನಿಸಿಕೊಂಡ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ ಜಯಂತಿಯ ಶುಭಾಶಯಗಳು.

ಚತುರ್ವರ್ಣ ವ್ಯವಸ್ಥೆಯು ಭಾರತದ ಸಾಮಾಜಿಕ ಮತ್ತು ಅರ್ಥ ವ್ಯವಸ್ಥೆಗೆ ಬಾಧಕವೆಂದು ಕಂಡಾಗ ಇವುಗಳ ನಿರ್ಮೂಲನೆಗಾಗಿ ಮತ್ತು ಏಕತೆಗಾಗಿ ದೇಶಾದ್ಯಂತ ಒಂದು ಚಳವಳಿಯು ಉಂಟಾಯಿತು. ಮಾನವನಲ್ಲಿರುವಂತಹ ಜ್ಞಾನವೇ ಆತನ ಶಕ್ತಿಯಾಗಬೇಕು ಹೊರತು ಆತನ ಜಾತಿಯಲ್ಲ ಎಂಬ ಅರಿವನ್ನು ಭಾರತದಾದ್ಯಂತ ಪಸರಿಸಿದ ಮಹಾನ್ ಶಕ್ತಿ ಶ್ರೀ ನಾರಾಯಣ ಗುರುಗಳು.

ಒಂದೇ ಜಾತಿ ಒಂದೇ ಮತ ಒಂದೇ ದೇವರು: ವರ್ಣ ತಾರತಮ್ಯದ ಬಲಿಷ್ಠ ಬಾಹುಗಳು ಅಪ್ಪಿಕೊಂಡ ಕಾಲದಲ್ಲಿ ವಿವಿಧ ಸ್ತರಗಳಲ್ಲಿ ಹೋಳಾಗುತ್ತಿದ್ದ ಕಾಲಘಟ್ಟದಲ್ಲಿ, ಅಸ್ಪೃಶ್ಯತೆ, ಸ್ತ್ರೀ ಶೋಷಣೆ, ಜಾತಿ ಭೇದ, ಲಿಂಗ ಭೇದ ಎಂಬ ಸಾಮಾಜಿಕ ಪಿಡುಗುಗಳು ತಾಂಡವವಾಡುತ್ತಿದ್ದ ಸಂದರ್ಭದಲ್ಲಿ ಜನರಲ್ಲಿ ಐಕ್ಯಮತವನ್ನು ಮೂಡಿಸಿ ಎಲ್ಲ ವರ್ಣದವರನ್ನು ಒಂದೆಡೆ ಸೇರುವಂತೆ ಪ್ರೇರಣೆಯಾದರು. ಹಿಂದೂ ಧರ್ಮದ ಪುನರುಜ್ಜೀವನವನ್ನು ಎಲ್ಲ ಜಾತಿಯ ಜನರು ಒಂದೆಡೆ ಸೇರಿ ದೇವರನ್ನು ಪೂಜಿಸುವುದು, ಸಾಮಾಜಿಕ ಸಮಾನತೆ ಮತ್ತು ಜಾಗತಿಕವಾಗಿ ಸಹೋದರತ್ವವನ್ನು ಬೆಳೆಸಲು ಶ್ರೀ ಗುರುಗಳು ಪ್ರೇರಣೆಯಾದರು. ಅದ್ವೈತಾಚಾರ್ಯ ಆದಿಶಂಕರರ ದೇವರೊಬ್ಬನೇ ನಾಮ ಹಲವು ಎಂಬ ತತ್ವಗಳನ್ನು ಒಂದೇ ಜಾತಿ ಒಂದೇ ಮತ ಒಂದೇ ದೇವರು(ಒರು ಜಾತಿ ಒರು ಮತಂ ಒರು ದೈವಂ, ಮನುಷ್ಯನು) ಎಂಬ ಘೋಷವಾಕ್ಯದೊಂದಿಗೆ ಸಂತನೆನೆಸಿಕೊಂಡರು.

1855 ಆಗಸ್ಟ್ 28ರಂದು ಆಗಿನ ತಿರುವಾಂಕೂರು ಈಗಿನ ತಿರುವನಂತಪುರದ ಚೆಂಪಳಾಂತಿಯಲ್ಲಿ ‘ಈಳವ’ ಕುಟುಂಬದಲ್ಲಿ ಮದನ್ ಆಸನ್ ಮತ್ತು ಕುಟ್ಟಿಯಮ್ಮ ದಂಪತಿಗಳ ಪುತ್ರರಾಗಿ ಜನಿಸಿದರು. ಪೂರ್ವ ಶಿಕ್ಷಣವನ್ನು ಚೆಂಪಳಾಂತಿ ಮೂತಪಿಳ್ಳೈ ಅವರಲ್ಲಿ ಪಡೆದರು, ಈ ಸಮಯದಲ್ಲಿ ತಾಯಿಯನ್ನು ಅಗಲಿದರು. ತನ್ನ 21ನೇ ವಯಸ್ಸಿನಲ್ಲಿ ತಿರುವಾಂಕೂರಿನ ರಾಜಧಾನಿಗೆ ಆಗಮಿಸಿದ ನಾರಾಯಣರು ರಾಮನ್ ಪಿಳ್ಳೆ ಆಸನ್ ಇವರಿಂದ ಸಂಸ್ಕೃತ ಅಧ್ಯಯನವನ್ನು ಆರಂಭಿಸಿದರು, ಉಪನಿಷತ್ತು, ಸಾಹಿತ್ಯ, ತರ್ಕಶಾಸ್ತ್ರ ವಾಕ್ಚಾತುರ್ಯ ಪಾರಂಗತನಾಗಿ ತನ್ನ ಹಳ್ಳಿಗೆ ಹಿಂತಿರುಗಿದ ಇವರು ಹಳ್ಳಿಯಲ್ಲಿ ಸ್ಥಳೀಯ ಮಕ್ಕಳಿಗೆ ವಿದ್ಯಾಭ್ಯಾಸವನ್ನು ನೀಡಲು ಆರಂಭಿಸಿದರು. ವೈವಾಹಿಕ ಜೀವನವನ್ನು ಆರಂಭಿಸಿದ ಇವರು ಸಾಂಸಾರಿಕ ಜೀವನದಿಂದ ವಿಮುಖರಾಗಿ ಸಾಮಾಜಿಕ ಜೀವನ ಮತ್ತು ಸಮಾಜದ ಪುನರ್ರಚನೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟರು.

ಶ್ರೀ ನಾರಾಯಣ ಗುರು ಮತ್ತು ಧಾರ್ಮಿಕ ಕ್ರಾಂತಿ:

ಮನೆಯನ್ನು ತ್ಯಜಿಸಿ ಸಂಚಾರಿಯಾದ ಗುರುಗಳು ಕೇರಳ ಮತ್ತು ತಮಿಳುನಾಡಿನಾದ್ಯಂತ ಸಂಚರಿಸಿದರು. ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಯನ್ನು ಮಾಡಿದ ಚಟ್ಟಂಬಿ ಸ್ವಾಮಿಕಳ್ ರನ್ನು ಭೇಟಿ ಮಾಡಿದ ಗುರುಗಳು ಮುಂದೆ ಅಯ್ಯಾವುಸ್ವಾಮಿಕಳ್ ಇವರಿಂದ ಧ್ಯಾನ ಮತ್ತು ಯೋಗವನ್ನು ಕಲಿತರು. ತಿರುವಾಂಕೂರಿನ ಅರಿವುಪ್ಪುರಂನಲ್ಲಿ ನದಿನೀರಿನಿಂದ ತೆಗೆದ ಶಿಲೆಯನ್ನೇ ಶಿವನೆಂದು ಪೂಜಿಸಿದರೆ, ಮುಂದೆ ಇದು ‘ಅರಿವುಪ್ಪುರಂ ಪ್ರತಿಷ್ಟೆ’ ಎಂದು ಜನಜನಿತಗೊಂಡಿತು. ಇದನ್ನು ಪ್ರಶ್ನಿಸಿದ ಮೇಲ್ವರ್ಗದ ಜನರಿಗೆ ‘ಇವನು ಬ್ರಾಹ್ಮಣ ಶಿವನಲ್ಲ, ಇವನು ಈಳವ ಶಿವ’ ನೆಂದು ಸೆಡ್ಡುಹೊಡೆದರು, ಮುಂದೆ ಇದು ಜಾತೀಯವನ್ನು ವಿರೋಧಿಸುವ ಮಹಾ ಘೋಷಣೆಯಾಯಿತು. ಆ ಸ್ಥಳದಲ್ಲಿ ಮುಂದೆ ದೇವಾಲಯ ನಿರ್ಮಾಣವಾಯಿತು, ಈಗಲೂ ಇದು ಪ್ರಸಿದ್ಧ ಪ್ರವಾಸಿತಾಣವಾಗಿದೆ. ಮುಂದೆ ಪದ್ಮನಾಭನ್ ಪಲ್ಪು ಇವರಿಂದ ಮೇ 15 1903 ರಲ್ಲಿ ‘ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ’ (SNDP Yogam) ಪ್ರಾರಂಭಗೊಂಡಿತು ಶ್ರೀ ನಾರಾಯಣ ಗುರುಗಳು ಇದರ ಸಂಸ್ಥಾಪಕ ಅಧ್ಯಕ್ಷರಾದರು.

ಧಾರ್ಮಿಕ ಸಾಧನೆ ಮತ್ತು ಸಾಹಿತ್ಯದ ಪ್ರೌಢಿಮೆ:

1904 ರಲ್ಲಿ ‘ಶಿವಗಿರಿ’ಯಲ್ಲಿ ಕೆಳ ವರ್ಗದ ಮಕ್ಕಳ ಉಚಿತ ಶಿಕ್ಷಣವನ್ನು ಆರಂಭಿಸಿದರು ಯಾವುದೇ ಜಾತಿ ಭೇದವಿಲ್ಲದೆ ಶೋಷಣೆಗೆ ಒಳಗಾದ, ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಸಂತೈಸಿದರು. 1912ರಲ್ಲಿ ಶ್ರೀ ಶಾರದಾ ಮಠವನ್ನು ನಿರ್ಮಿಸಿದರು ಮತ್ತು ತ್ರಿಶೂರು,ಕಣ್ಣೂರು,ಅಂಚುತೆಂಗು, ತಲಶ್ಶೇರಿ, ಕೋಯಿಕೋಡ್, ಮಂಗಳೂರಿನಲ್ಲೂ ದೇವಾಲಯಗಳನ್ನು ಪ್ರತಿಷ್ಠಾಪಿಸಿದರು. ಪಕ್ಕದ ಸಿಲೋನ್(ಶ್ರೀ ಲಂಕಾ) ದೇಶದಲ್ಲಿ ಸಂಚರಿಸಿ ಅಲ್ಲಿಯೂ ಕೂಡ ಮಂದಿರವನ್ನು ನಿರ್ಮಿಸಿದ್ದಾರೆ.

ಗುರುಗಳು 45ಕ್ಕೂ ಅಧಿಕ ಧಾರ್ಮಿಕ ಸಾಹಿತ್ಯಗಳನ್ನು ಹೊರತಂದಿದ್ದಾರೆ. ಹೆಚ್ಚು ಮಲಯಾಳಿ ಭಾಷೆಯ ಸಾಹಿತ್ಯವನ್ನು ಹೊರತಂದರೆ ಸಂಸ್ಕೃತ ಮತ್ತು ತಮಿಳು ಭಾಷೆಯಲ್ಲಿಯೂ ಸಾಹಿತ್ಯಗಳನ್ನು ರಚಿಸಿದ್ದಾರೆ. ‘ಆತ್ಮೋಪದೇಶ ಶತಕಂ’ ಸ್ತೋತ್ರ ಮತ್ತು ‘ದೈವ ದಶಕಂ’ ಎಂಬ ದೇವರ ಸ್ತೋತ್ರಗಳನ್ನು ರಚಿಸಿದ್ದಾರೆ. ತಿರುವಳ್ಳುವರ್ ರಚಿಸಿರುವ ‘ತಿರುಕುರಳ್’ ‘ಈಶಾವಾಸ್ಯ ಉಪನಿಷತ್’ ಮತ್ತು ‘ಒಳಿವಿಲ್ ಒಡುಕಮ್’ ಭಾಷಾಂತರ ಗೊಳಿಸಿದ್ದಾರೆ.

ಈ ಕ್ರಾಂತಿಯು ಕ್ಷಿಪ್ರವಾಗಿ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಹಾಯಕವಾಯಿತು. ಜನರ ಮಧ್ಯೆ ಒಮ್ಮತವನ್ನು ತರಲು ಗುರುಗಳು ನಡೆಸಿದ ಹೋರಾಟವು ಫಲವನ್ನು ನೀಡಿತು. ಇವರ ಈ ಹೋರಾಟದಲ್ಲಿ ಪಾಲ್ಗೊಂಡ ಹಲವರು ಅನುಯಾಯಿಗಳಾದರು. ಇಪ್ಪತ್ತರ ಶತಮಾನದಲ್ಲಿ ಭಾರತದಾದ್ಯಂತ ಸಾಮಾಜಿಕ ಬದಲಾವಣೆಗೆ ಹೆಚ್ಚು ಒತ್ತು ನೀಡಿ ಎಲ್ಲಾ ಜನರು ಒಗ್ಗೂಡುವಂತೆ ಮಾಡಿತು. ನಾರಾಯಣ ಗುರುಗಳ ಸಿದ್ಧಾಂತಕ್ಕೆ ಮಾರುಹೋಗಿ, ಸ್ವತ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ್ದ ಮಹಾತ್ಮ ಗಾಂಧೀಜಿಯವರು ಕೂಡಾ ಮಾರ್ಗದರ್ಶನವನ್ನು ಪಡೆದಿದ್ದರು.

Spread the love
  • Related Posts

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಕನ್ಯಾಡಿ: ಸೇವಾ ಭಾರತಿ ಕನ್ಯಾಡಿ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರಾದ ಎಸ್.ಬಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಕೃಷಿ ಕಾರ್ಮಿಕರು…

    Spread the love

    You Missed

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 18 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 7 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 24 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 31 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 80 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 35 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ!