17 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜಿ.ಕಲ್ಪನಾರನ್ನು ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀವತ್ಸ ಕೃಷ್ಣರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

ಅಮ್ಲನ್ ಆದಿತ್ಯ ಬಿಸ್ವಾಸ್‌ರನ್ನು ಐಎಂಎ ವಿಶೇಷ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ‌. ಮುನೀಶ್ ಮೌದ್ಗಿಲ್‌ರನ್ನು ಭೂ‌ ಮಾಪನ ಹಾಗೂ ಭೂ ದಾಖಲೆ ಇಲಾಖೆ ಆಯುಕ್ತರಾಗಿ ವರ್ಗಾಯಿಸಲಾಗಿದೆ. ಶಿವಯೋಗಿ ಕಳಸದ್‌ರನ್ನು ಕೃಷಿ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಅನ್ಬು ಕುಮಾರ್‌ ಅವರನ್ನು ಕೆಎಸ್‌ಆರ್‌ಟಿಸಿ ಎಂಡಿಯಾಗಿ ವರ್ಗಾಯಿಸಲಾಗಿದೆ. ಎನ್.ವಿ.ಪ್ರಸಾದ್‌ರನ್ನು ಸಾರಿಗೆ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ಜಿ. ಸತ್ಯವತಿಯನ್ನು ಬಿಎಂಟಿಸಿ ಎಂಡಿಯಾಗಿ ವರ್ಗಾಯಿಸಲಾಗಿದೆ. ಜೊತೆಗೆ ಕೆಪಿಎಸ್​​ಸಿ ಕಾರ್ಯದರ್ಶಿಯಾಗಿಯೂ ಮುಂದುವರಿಯಲಿದ್ದಾರೆ. ರೇಜು ಎಂ.ಟಿ. ಮಹಿಳಾ‌ ಮತ್ತು ಮಕ್ಕಳ ‌ಕಲ್ಯಾಣ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾವಣೆ ‌ಮಾಡಲಾಗಿದೆ. ದೀಪಾ.ಎಂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆಯ ಎಂಡಿಯಾಗಿ ವರ್ಗಾಯಿಸಲಾಗಿದೆ. ಪಲ್ಲವಿ ಅಕುರಾತಿ ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರಾಗಿ ವರ್ಗಾವಣೆಯಾಗಿದ್ದಾರೆ.


ವೆಂಕಟೇಶ ಕುಮಾರ್​​ಗೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ. ರಾಕೇಶ್ ಕುಮಾರ್‌ರನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿ ವರ್ಗಾಯಿಸಲಾಗಿದೆ. ರವೀಂದ್ರ ಪಿ.ಎನ್.ರನ್ನು ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ) ವರ್ಗಾವಣೆ ಮಾಡಲಾಗಿದೆ. ಅವಿನಾಶ್ ಮೆನಮ್ ರಾಜೇಂದ್ರನ್ ರನ್ನು ರಾಮನಗರ ಜಿಲ್ಲೆಯ ಡಿಸಿಯಾಗಿ ವರ್ಗಾಯಿಸಲಾಗಿದೆ. ಚಂದ್ರಶೇಖರ ನಾಯಕರನ್ನು ರಾಯಚೂರು ಜಿಲ್ಲೆಯ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ವಿಜಯ ಮಹಂತೇಶ್ ಬಿ.ಡಿ ವಿಜಯಪುರ ಡಿಸಿಯಾಗಿ ವರ್ಗಾವಣೆಯಾಗಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ