ಚಳಿಗಾಲದ ನಂತರ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ! : ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರಿಂದ ಎಚ್ಚರಿಕೆ!

ಬೆಂಗಳೂರು: ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಸಂಖ್ಯೆ ಕಡಿಮೆಯಾದಂತೆ ಚಳಿಗಾಲದ ನಂತರ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳಬಹುದೆಂದು ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಆದಾಗ್ಯೂ, ಎರಡನೇ ಅಲೆಯನ್ನು ಪ್ರತಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ನೋಡಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾದರೂ ಎಲ್ಲ ರಾಜ್ಯಗಳಲ್ಲಿ ಇದೇ ರೀತಿಯಲ್ಲಿ ಇರಲಿದೆ ಎಂದು ಹೇಳಲಾಗದು. ಕರ್ನಾಟಕದಲ್ಲಿ ಮೊದಲ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವಾಗ ಎರಡನೇ ಅಲೆ ಬಗ್ಗೆ ಹೇಳಲಾಗದು ಎಂದು ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಹಾಗೂ ಕೋವಿಡ್ ನಿರ್ವಹಣೆ ಸಲಹೆಗಾರ ಡಾ. ಡಾ.ಗಿರಿಧರ ಬಾಬು ಹೇಳಿದ್ದಾರೆ.

ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ನೀತಿ ಆಯೋಗ ಇತ್ತೀಚಿಗೆ ಉಲ್ಲೇಖಿಸಿತ್ತು.

ಆದಾಗ್ಯೂ, ದೇಶಾದ್ಯಂತ ನೋಡಿದಾಗ ಸೆಪ್ಟೆಂಬರ್ ಮೊದಲ ವಾರದಲ್ಲಿ ಹೆಚ್ಚಾಗಿದ ಸೋಂಕು, ಇದೀಗ ಇಳಿಕೆಯಾಗಿದೆ. ಈ ಸಂಖ್ಯೆಯನ್ನು ಎಲ್ಲಾ ರಾಜ್ಯಗಳಲ್ಲೂ ಒಟ್ಟುಗೂಡಿಸಿ ಯೋಚಿಸಬೇಕಾಗಿದೆ ಎಂದು ಐಸಿಎಂಆರ್ ಸದಸ್ಯ ಹಾಗೂ ವೆಲ್ಲೂರಿನ ಕ್ರಿಸ್ಟಿಯನ್ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾ. ಜಾಕಬ್ ಜಾನ್ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಇದೀಗ ಪ್ರಕರಣಗಳ ಸಂಖ್ಯೆ ಹೆಚ್ಚಿಲ್ಲದ ಜಿಲ್ಲೆಗಳು ಮತ್ತು ವಲಯಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಅಲ್ಲಿಯೂ ಸಹ ನಿಧಾನಗತಿಯಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದೆ ಎಂದು ಡಾ. ಗಿರಿಧರ್ ಬಾಬು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಈ ಮಧ್ಯೆ ಮೊದಲ ಅಲೆ ಡಿಸೆಂಬರ್ ಮಾಸಾಂತ್ಯದವರೆಗೂ ಇರಲಿದೆ ಅನಿಸುತ್ತಿದೆ. ಡಿಸೆಂಬರ್ ನಂತರ ಇದು ಕಡಿಮೆಯಾಗಲು ಆರಂಭಿಸಲಿದೆ. ಈ ಕುಸಿತ ಕಂಡುಬರುವ ಹೊತ್ತಿಗೆ, ಎರಡನೇ ಅಲೆ ಬೀಸಿದ್ದರೂ ಸಹ, ಇದು ಹೆಚ್ಚು ಸಮಸ್ಯೆಗೆ ಕಾರಣವಾಗುವುದಿಲ್ಲ, ಮರಣ ಪ್ರಮಾಣ ಮತ್ತು ಪ್ರಕರಣಗಳ ಸಂಖ್ಯೆಯಲ್ಲಿ ಕನಿಷ್ಠ ಪ್ರಮಾಣದಲ್ಲಿ ಹೆಚ್ಚಳ ಆಗಬಹುದು ಎಂದು ತಜ್ಞರ ಅಭಿಪ್ರಾಯವಾಗಿದೆ

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 14 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು