2021-22ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ: ದಾಖಲೆ ಮಟ್ಟದಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ

ಬೆಂಗಳೂರು: 2021-22ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award 2021) ಈ ಬಾರಿ ದಾಖಲೆ ಮಟ್ಟದಲ್ಲಿ ಅರ್ಜಿ ಸಲ್ಲಿಕೆಯಾಗಿವೆ. ಇದೇ ಮೊದಲ ಭಾರಿಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದರಿಂದ ಜನರ ಸ್ಪಂದನೆ ಹೆಚ್ಚಾಗಿದೆ.

ಆನ್ ಲೈನ್ ಹಾಗೂ ಆಫ್ ಲೈನ್ (Online) ಎರಡರಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ್ದರಿಂದ 28.857 ಜನರು ಆನ್ ಲೈನ್ ಮೂಲಕ ಪ್ರಶಸ್ತಿಗೆ ಶಿಫಾರಸ್ಸು ಮಾಡಿದ್ದಾರೆ ಕಳೆದ 3 ವರ್ಷಗಳ ಪೈಕಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಜನರ ಸ್ಪಂದನೆ ಹೆಚ್ಚಾಗಿದೆ. ಸೇವಾಸಿಂಧು ಮೂಲಕ ಸಾಧಕರನ್ನು ಗುರುತಿಸುವ ಅವಕಾಶಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದ್ದು, 2021-22 ನೇ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿಗಳ ಸಲ್ಲಿಕೆಯಾಗಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕವಾಗಿ 1450 ಅರ್ಜಿಗಳು ಹಾಗೂ `ಸೇವಾ ಸಿಂಧು’ ಮೂಲಕ 4770 ಹೆಸರುಗಳು ಬಂದಿದ್ದು ಅವುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಸಾಧಕರ ಅರ್ಜಿಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ (Kannada And Culture Minister V Sunil Kumar) ಮಾಹಿತಿ ನೀಡಿದ್ದಾರೆ.

ಆನ್‌ಲೈನ್‌ ಪ್ರಯೋಗ ಇದೇ ಮೊದಲ ಬಾರಿಗೆ ಮಾಡಲಾಗಿದ್ದು,ಇದು ಅತ್ಯಂತ ಪಾರದರ್ಶಕ ಹಾಗೂ ಪ್ರಜಾಪ್ರಭುತ್ವ ಸಿದ್ಧಾಂತಗಳಿಗೆ ಅನುಗುಣವಾಗಿ ನಡೆಯುತ್ತಿರುವುದು ವಿಶೇಷವಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೂ ಸೇವಾ ಸಿಂಧು ಪೋರ್ಟಲ್ ಅನ್ನು ಪ್ರವೇಶಿಸಬಹುದಾಗಿದೆ, ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಗಳ ಹೆಸರನ್ನು ಕಳುಹಿಸಲು ಅಕ್ಟೋಬರ್ 15 ನೇ ತಾರೀಖಿನವರೆಗೂ ಅವಕಾಶ ಕಲ್ಪಿಸಲಾಗಿತ್ತು.

ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ 1ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿಯ ಗೌರವಧನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.

Spread the love
  • Related Posts

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಬಾರಿ ಮಳೆ ಹಿನ್ನೆಲೆಯಲ್ಲಿ 30/08/2025ನೇ ಶುಕ್ರವಾರ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದೆ. Spread the love

    Spread the love

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಸಕಲೇಶಪುರ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಕಲೇಶಪುರ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಪರಮ ಪೂಜ್ಯ ಶ್ರೀ ಡಾ.ಡಿ ವಿರೇಂದ್ರ…

    Spread the love

    You Missed

    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • August 29, 2025
    • 295 views
    ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    • By admin
    • August 29, 2025
    • 51 views
    ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    • By admin
    • August 28, 2025
    • 324 views
    ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ

    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    • By admin
    • August 28, 2025
    • 56 views
    ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    • By admin
    • August 27, 2025
    • 117 views
    ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ

    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ ಆಯ್ಕೆ

    • By admin
    • August 25, 2025
    • 52 views
    ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ