ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಇವರ ಮಾರ್ಗದರ್ಶನದಲ್ಲಿ ತೇರಪಂಥ್ ಸಭಾಭವನದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ ನಡೆಯಿತು.
ಶಿಬಿರವನ್ನು ಆರಕ್ಷಕ ನಿರೀಕ್ಷಕರಾದ ವನರಾಜ್ ವಿ.ಸಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, “ಮದ್ಯಪಾನವು ವ್ಯಕ್ತಿಯ ಆರೋಗ್ಯ, ಕುಟುಂಬ ಮತ್ತು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಯುವಜನತೆ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಇಂತಹ ಮದ್ಯವರ್ಜನ ಶಿಬಿರಗಳು ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ,” ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ ಎಂದು ಹೇಳಿದರು.
ಶಿಬಿರದಲ್ಲಿ ಭಾಗವಹಿಸಿದವರಿಗೆ ಮದ್ಯಪಾನದ ದುಷ್ಪರಿಣಾಮಗಳು, ಕುಟುಂಬದ ಮೇಲೆ ಬೀರುವ ಪರಿಣಾಮಗಳು ಹಾಗೂ ವ್ಯಸನಮುಕ್ತ ಜೀವನದ ಅಗತ್ಯತೆ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರೇಖಾ ಸುರೇಶ್, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕರಾದ ಗೌರೀಶ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಧೀರ್ ಎಸ್.ಎಲ್, ವರ್ತಕ ಸಂಘದ ಅಧ್ಯಕ್ಷರಾದ ಮಧು ಕುಮಾರ್, ಚಂದ್ರ ಶೇಖರ ಹಾನುಬಾಳು, ಹರೀಶ್ ಹಾನುಬಾಳು, HR ಸುರೇಶ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಗಿರೀಶ್ ಮಂಜುನಾಥ್, ನಲ್ಲುಲ್ಲಿ ಈರಪ್ಪ, ಮಹೇಶ್ ಹೆತ್ತೂರು, ಸಮಿತಿಯ ಉಪಾಧ್ಯಕ್ಷರಾದ ಶ್ರೀನಿವಾಸ, ಬಲ್ಕಿಸ್ ರಾಣಿ, ಪತ್ರಕರ್ತರಾದ ಯೋಗೇಶ್, ಯೋಜನಾಧಿಕಾರಿ ರಾಜೇಶ್ ಎಂ ಕಾನರ್ಪ, ಮುಖೇಶ್, ನಂದಕುಮಾರ್, ಫಿಲೋಮಿನಾ ಡಿಸೋಜ, ಮೋಹಿನಿ, ಚಿರಂತ್, ಶೌರ್ಯವಿಪತ್ತು ನಿರ್ವಹಣಾ ಘಟಕದ ಮದುವರನ್, ಪ್ರಸನ್ನ, ರಮೇಶ್, ಮಂಜುನಾಥ್, ರಾಮು, ಷಣ್ಮುಖ, ಹರೀಶ್ ಲೀಲಾವತಿ, ಗುರು ಪ್ರಕಾಶ್, ದಿವ್ಯ , ಧನ್ಯ , ಕುಮಾರಿ, ಶ್ಯಾಮಲಾ, ಹಾಗೂ ಸೇವಾ ಪ್ರತಿನಿಧಿಯವರು, ಮೊದಲಾದವರು ಉಪಸ್ಥಿತರಿದ್ದರು





