ಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ ದೇಶಕ್ಕಾಗಿ ತನ್ನ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ವೀರ ಯೋಧರಿಗೆ ನಮನ

ನವದೆಹಲಿ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ 21ರ ಸಂಭ್ರಮ ಇಂದು . ಇಪ್ಪತ್ತೊಂದು ವರ್ಷಗಳ ಹಿಂದೆ ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ.


ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು ಕಡೆಯಿಂದ ಅಂದಿನ ಪ್ರಧಾನಿ ವಾಜಪೇಯಿ ತೋರಿದ ಸ್ನೇಹ ಹಸ್ತಕ್ಕೆ ಕೈಚಾಚಿ ಇನ್ನೊಂದು ಕಡೆಯಿಂದ ಭಾರತದ ಬೆನ್ನಿಗೇ ಇರಿಯಿತು. ಅತ್ತ ಲಾಹೋರಿನಲ್ಲಿ ನವಾಜ್‌ ಶರೀಫ್‌, ಪ್ರಧಾನಿ ವಾಜಪೇಯಿ ಅವರ ಕೈಕುಲುಕುತ್ತಿರುವಾಗ ಇತ್ತ ಗಡಿ ಭಾಗದಲ್ಲಿ ತನ್ನ ಸೇನೆಯನ್ನು ಜಮಾಗೊಳಿಸಿ, ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕಿ ಕುಳಿತಿತ್ತು. ಸ್ನೇಹ ಹಸ್ತ ಚಾಚುತ್ತಾ ಭಾರತ ಎಲ್ಲೋ ಒಂದು ಬದಿಯಲ್ಲಿ ಪಾಕಿಸ್ತಾನವನ್ನು ನಂಬಿ ಮೈಮರೆತಿತ್ತು.

ವಿಶ್ವಕ್ಕೆ ಶಾಂತಿ ಸಾರಿದ ರಾಷ್ಟ್ರ ನಮ್ಮದು. ಆದರೆ ಪಕ್ಕದ ರಾಷ್ಟ್ರ ನಮ್ಮ ಮೇಲೆ ಆಕ್ರಮಣ ಮಾಡಲು ಬರಬಹುದು ಎಂದು ಊಹಿಸಿಕೊಳ್ಳುವುದಕ್ಕೂ ಮುಂಚೆಯೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ವಾಜಪೇಯಿ ಸರಕಾರದ ವೈಫಲ್ಯವಿದು ಅಂತಾ ಸರಕಾರದ ಮೇಲೆ ಪ್ರತಿಪಕ್ಷ ಗಳು ಮುಗಿಬಿದ್ದವು. ಕೆಲವೊಂದಷ್ಟು ಜನ ಇನ್ನೂ ಮುಂದಕ್ಕೆ ಹೋಗಿ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಟ್ಟು ಬಿಡಿ ಎಂದರು. ಆಗಷ್ಟೇ ಅಧಿಕಾರಕ್ಕೆ ಬಂದಿದ್ದ ವಾಜಪೇಯಿ ರಾಜಿನಾಮೆ ನೀಡಬೇಕೆಂಬ ಒತ್ತಡವಿದ್ದರೂ ಯಾವುದಕ್ಕೂ ಬಗ್ಗದೇ ಸೇನೆಗೆ ವಾಜಪೇಯಿ ಶಕ್ತಿ ತುಂಬಿದರು.

ಪ್ರಧಾನಿಯ ಆದೇಶ ಬಂದ ತಕ್ಷ ಣ ಸೇನೆ ತನ್ನ ಕಾರ್ಯಾಚರಣೆಯನ್ನು ಅತ್ಯಂತ ಕ್ಲಿಷ್ಟಕರ ಸನ್ನಿವೇಶದಲ್ಲಿ ಪ್ರಾರಂಭಿಸಿತು. ಇತ್ತ ಉಕ್ಕಿನ ಮನುಷ್ಯಅಡ್ವಾಣಿ ತಕ್ಷ ಣವೇ ಇಸ್ರೇಲ್‌ಗೆ ತೆರಳಿ ಮದ್ದುಗುಂಡು ಹಾಗು ಅಗತ್ಯ ಸೇನಾ ನೆರವು ಪಡೆದುಕೊಂಡು ಬಂದರು. ಯುದ್ಧ ನಡೆಯುತ್ತಿದ್ದ ಸ್ಥಳದ ಪರಿಸ್ಥಿತಿಯ ಅವಲೋಕನ ನಡೆಸಿ ಅತ್ಯಂತ ಕೆಟ್ಟ ಹವಾಮಾನ, ಕೈಯಲ್ಲಿರುವ ಕಳಪೆ ಸಾಮಾಗ್ರಿಗಳು, ವೈರಿಪಡೆಯ ಅತ್ಯಾಧುನಿಕ ಆಯುಧಗಳ ನಡುವೆಯೂ ನಮ್ಮ ಸೇನೆ ಧೃತಿಗೆಡದೆ ಆಪರೇಷನ್‌ ವಿಜಯ್‌ ಮೂಲಕ ಹೋರಾಟ ನಡೆಸುತ್ತಾ ಒಂದೊಂದೇ ಸ್ಥಳವನ್ನು ವಾಪಸ್ಸು ಪಡೆಯಿತು.

74 ದಿನಗಳ ಕಾಲ ನಡೆದ ಯುದ್ಧದಲ್ಲಿ ದಿನಕ್ಕೆ 15 ಕೋಟಿಯಂತೆ ಸುಮಾರು 1100 ಕೋಟಿಗಳಷ್ಟು ಹಣ ವ್ಯಯಿಸಲಾಗಿತ್ತು. ಖರ್ಚಾದ ಹಣವಿರಲಿ, ಆದರೆ ದೇಶ ಅದೆಷ್ಟೋ ಯುವ ಸೇನಾನಿಗಳನ್ನು ಕಳೆದುಕೊಂಡಿತ್ತು. ನಮ್ಮವರು 527, ಪಾಕಿಸ್ತಾನದವರು 696 ಜನ ಸಾವಿಗೀಡಾದರು. ಜುಲೈ 26ರಂದು ಕಾರ್ಗಿಲ್‌ನ ಕೊನೆಯ ಠಾಣೆಯನ್ನು ಭಾರತೀಯ ಸೇನೆ ವಶಪಡಿಸಿಕೊಂಡು ಗೆಲುವು ಘೋಷಿಸಿತು. ಅದುವೇ ಕಾರ್ಗಿಲ್‌ ವಿಜಯ ದಿವಸ.

ಅಂದು ಭಾರತ ಪಾಕಿಸ್ತಾನದ ಒಳಗೆ ಹೋಗಿ ಯುದ್ಧ ಮಾಡಿರಲಿಲ್ಲ. ಅಂತಾರಾಷ್ಟ್ರೀಯ ಗಡಿರೇಖೆ ಉಲ್ಲಂಘಿಸಿರಲಿಲ್ಲ. ಅಷ್ಟು ಅಚ್ಚುಕಟ್ಟಾಗಿ ಯುದ್ಧ ಗೆದ್ದಿತ್ತು. ಸೇನೆಯಲ್ಲಿ ಮದ್ದು ಗುಂಡುಗಳಿರದಿದ್ದರೂ ಯೋಧರ ಆತ್ಮವಿಶ್ವಾಸ ಕಾರ್ಗಿಲ್‌ನ ಎತ್ತರದ ಬೆಟ್ಟಗುಡ್ಡಗಳನ್ನೂ ಮೀರಿಸುವಂತಿತ್ತು. ಹೀಗೆ ಪಾಕಿಸ್ತಾನಕ್ಕೆ ನಮ್ಮ ಯೋಧರು ಪಾಠ ಕಲಿಸಿ 20 ವರ್ಷ ಇಂದಿಗೆ ಕಳೆದಿದೆ. ವಿಜಯದ ಸಂಕೇತವಾಗಿ ಹುತಾತ್ಮರಿಗೆ ನಮನಗಳನ್ನು ಸಲ್ಲಿಸಲು ಜುಲೈ 26ನ್ನು ಕಾರ್ಗಿಲ್‌ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಹುತಾತ್ಮ ಯೋಧರಿಗೆ ನಮನಗಳು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 334 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 302 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ