ಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ ದೇಶಕ್ಕಾಗಿ ತನ್ನ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ವೀರ ಯೋಧರಿಗೆ ನಮನ

ನವದೆಹಲಿ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ 21ರ ಸಂಭ್ರಮ ಇಂದು . ಇಪ್ಪತ್ತೊಂದು ವರ್ಷಗಳ ಹಿಂದೆ ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ.


ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು ಕಡೆಯಿಂದ ಅಂದಿನ ಪ್ರಧಾನಿ ವಾಜಪೇಯಿ ತೋರಿದ ಸ್ನೇಹ ಹಸ್ತಕ್ಕೆ ಕೈಚಾಚಿ ಇನ್ನೊಂದು ಕಡೆಯಿಂದ ಭಾರತದ ಬೆನ್ನಿಗೇ ಇರಿಯಿತು. ಅತ್ತ ಲಾಹೋರಿನಲ್ಲಿ ನವಾಜ್‌ ಶರೀಫ್‌, ಪ್ರಧಾನಿ ವಾಜಪೇಯಿ ಅವರ ಕೈಕುಲುಕುತ್ತಿರುವಾಗ ಇತ್ತ ಗಡಿ ಭಾಗದಲ್ಲಿ ತನ್ನ ಸೇನೆಯನ್ನು ಜಮಾಗೊಳಿಸಿ, ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕಿ ಕುಳಿತಿತ್ತು. ಸ್ನೇಹ ಹಸ್ತ ಚಾಚುತ್ತಾ ಭಾರತ ಎಲ್ಲೋ ಒಂದು ಬದಿಯಲ್ಲಿ ಪಾಕಿಸ್ತಾನವನ್ನು ನಂಬಿ ಮೈಮರೆತಿತ್ತು.

ವಿಶ್ವಕ್ಕೆ ಶಾಂತಿ ಸಾರಿದ ರಾಷ್ಟ್ರ ನಮ್ಮದು. ಆದರೆ ಪಕ್ಕದ ರಾಷ್ಟ್ರ ನಮ್ಮ ಮೇಲೆ ಆಕ್ರಮಣ ಮಾಡಲು ಬರಬಹುದು ಎಂದು ಊಹಿಸಿಕೊಳ್ಳುವುದಕ್ಕೂ ಮುಂಚೆಯೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ವಾಜಪೇಯಿ ಸರಕಾರದ ವೈಫಲ್ಯವಿದು ಅಂತಾ ಸರಕಾರದ ಮೇಲೆ ಪ್ರತಿಪಕ್ಷ ಗಳು ಮುಗಿಬಿದ್ದವು. ಕೆಲವೊಂದಷ್ಟು ಜನ ಇನ್ನೂ ಮುಂದಕ್ಕೆ ಹೋಗಿ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಟ್ಟು ಬಿಡಿ ಎಂದರು. ಆಗಷ್ಟೇ ಅಧಿಕಾರಕ್ಕೆ ಬಂದಿದ್ದ ವಾಜಪೇಯಿ ರಾಜಿನಾಮೆ ನೀಡಬೇಕೆಂಬ ಒತ್ತಡವಿದ್ದರೂ ಯಾವುದಕ್ಕೂ ಬಗ್ಗದೇ ಸೇನೆಗೆ ವಾಜಪೇಯಿ ಶಕ್ತಿ ತುಂಬಿದರು.

ಪ್ರಧಾನಿಯ ಆದೇಶ ಬಂದ ತಕ್ಷ ಣ ಸೇನೆ ತನ್ನ ಕಾರ್ಯಾಚರಣೆಯನ್ನು ಅತ್ಯಂತ ಕ್ಲಿಷ್ಟಕರ ಸನ್ನಿವೇಶದಲ್ಲಿ ಪ್ರಾರಂಭಿಸಿತು. ಇತ್ತ ಉಕ್ಕಿನ ಮನುಷ್ಯಅಡ್ವಾಣಿ ತಕ್ಷ ಣವೇ ಇಸ್ರೇಲ್‌ಗೆ ತೆರಳಿ ಮದ್ದುಗುಂಡು ಹಾಗು ಅಗತ್ಯ ಸೇನಾ ನೆರವು ಪಡೆದುಕೊಂಡು ಬಂದರು. ಯುದ್ಧ ನಡೆಯುತ್ತಿದ್ದ ಸ್ಥಳದ ಪರಿಸ್ಥಿತಿಯ ಅವಲೋಕನ ನಡೆಸಿ ಅತ್ಯಂತ ಕೆಟ್ಟ ಹವಾಮಾನ, ಕೈಯಲ್ಲಿರುವ ಕಳಪೆ ಸಾಮಾಗ್ರಿಗಳು, ವೈರಿಪಡೆಯ ಅತ್ಯಾಧುನಿಕ ಆಯುಧಗಳ ನಡುವೆಯೂ ನಮ್ಮ ಸೇನೆ ಧೃತಿಗೆಡದೆ ಆಪರೇಷನ್‌ ವಿಜಯ್‌ ಮೂಲಕ ಹೋರಾಟ ನಡೆಸುತ್ತಾ ಒಂದೊಂದೇ ಸ್ಥಳವನ್ನು ವಾಪಸ್ಸು ಪಡೆಯಿತು.

74 ದಿನಗಳ ಕಾಲ ನಡೆದ ಯುದ್ಧದಲ್ಲಿ ದಿನಕ್ಕೆ 15 ಕೋಟಿಯಂತೆ ಸುಮಾರು 1100 ಕೋಟಿಗಳಷ್ಟು ಹಣ ವ್ಯಯಿಸಲಾಗಿತ್ತು. ಖರ್ಚಾದ ಹಣವಿರಲಿ, ಆದರೆ ದೇಶ ಅದೆಷ್ಟೋ ಯುವ ಸೇನಾನಿಗಳನ್ನು ಕಳೆದುಕೊಂಡಿತ್ತು. ನಮ್ಮವರು 527, ಪಾಕಿಸ್ತಾನದವರು 696 ಜನ ಸಾವಿಗೀಡಾದರು. ಜುಲೈ 26ರಂದು ಕಾರ್ಗಿಲ್‌ನ ಕೊನೆಯ ಠಾಣೆಯನ್ನು ಭಾರತೀಯ ಸೇನೆ ವಶಪಡಿಸಿಕೊಂಡು ಗೆಲುವು ಘೋಷಿಸಿತು. ಅದುವೇ ಕಾರ್ಗಿಲ್‌ ವಿಜಯ ದಿವಸ.

ಅಂದು ಭಾರತ ಪಾಕಿಸ್ತಾನದ ಒಳಗೆ ಹೋಗಿ ಯುದ್ಧ ಮಾಡಿರಲಿಲ್ಲ. ಅಂತಾರಾಷ್ಟ್ರೀಯ ಗಡಿರೇಖೆ ಉಲ್ಲಂಘಿಸಿರಲಿಲ್ಲ. ಅಷ್ಟು ಅಚ್ಚುಕಟ್ಟಾಗಿ ಯುದ್ಧ ಗೆದ್ದಿತ್ತು. ಸೇನೆಯಲ್ಲಿ ಮದ್ದು ಗುಂಡುಗಳಿರದಿದ್ದರೂ ಯೋಧರ ಆತ್ಮವಿಶ್ವಾಸ ಕಾರ್ಗಿಲ್‌ನ ಎತ್ತರದ ಬೆಟ್ಟಗುಡ್ಡಗಳನ್ನೂ ಮೀರಿಸುವಂತಿತ್ತು. ಹೀಗೆ ಪಾಕಿಸ್ತಾನಕ್ಕೆ ನಮ್ಮ ಯೋಧರು ಪಾಠ ಕಲಿಸಿ 20 ವರ್ಷ ಇಂದಿಗೆ ಕಳೆದಿದೆ. ವಿಜಯದ ಸಂಕೇತವಾಗಿ ಹುತಾತ್ಮರಿಗೆ ನಮನಗಳನ್ನು ಸಲ್ಲಿಸಲು ಜುಲೈ 26ನ್ನು ಕಾರ್ಗಿಲ್‌ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಹುತಾತ್ಮ ಯೋಧರಿಗೆ ನಮನಗಳು.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 6 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 9 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 7 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    • By admin
    • July 15, 2026
    • 15 views
    ಬಿ.ಟಿ. ರಂಜನ್ ವಾರ್ಷಿಕ ಪ್ರಶಸ್ತಿಗೆ ಅರವಿಂದ ಹೆಬ್ಬಾರ್ ಮುಂಡಾಜೆ ಆಯ್ಕೆ

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 9 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 15 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.