ಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ ದೇಶಕ್ಕಾಗಿ ತನ್ನ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ವೀರ ಯೋಧರಿಗೆ ನಮನ

ನವದೆಹಲಿ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ 21ರ ಸಂಭ್ರಮ ಇಂದು . ಇಪ್ಪತ್ತೊಂದು ವರ್ಷಗಳ ಹಿಂದೆ ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ.


ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು ಕಡೆಯಿಂದ ಅಂದಿನ ಪ್ರಧಾನಿ ವಾಜಪೇಯಿ ತೋರಿದ ಸ್ನೇಹ ಹಸ್ತಕ್ಕೆ ಕೈಚಾಚಿ ಇನ್ನೊಂದು ಕಡೆಯಿಂದ ಭಾರತದ ಬೆನ್ನಿಗೇ ಇರಿಯಿತು. ಅತ್ತ ಲಾಹೋರಿನಲ್ಲಿ ನವಾಜ್‌ ಶರೀಫ್‌, ಪ್ರಧಾನಿ ವಾಜಪೇಯಿ ಅವರ ಕೈಕುಲುಕುತ್ತಿರುವಾಗ ಇತ್ತ ಗಡಿ ಭಾಗದಲ್ಲಿ ತನ್ನ ಸೇನೆಯನ್ನು ಜಮಾಗೊಳಿಸಿ, ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕಿ ಕುಳಿತಿತ್ತು. ಸ್ನೇಹ ಹಸ್ತ ಚಾಚುತ್ತಾ ಭಾರತ ಎಲ್ಲೋ ಒಂದು ಬದಿಯಲ್ಲಿ ಪಾಕಿಸ್ತಾನವನ್ನು ನಂಬಿ ಮೈಮರೆತಿತ್ತು.

ವಿಶ್ವಕ್ಕೆ ಶಾಂತಿ ಸಾರಿದ ರಾಷ್ಟ್ರ ನಮ್ಮದು. ಆದರೆ ಪಕ್ಕದ ರಾಷ್ಟ್ರ ನಮ್ಮ ಮೇಲೆ ಆಕ್ರಮಣ ಮಾಡಲು ಬರಬಹುದು ಎಂದು ಊಹಿಸಿಕೊಳ್ಳುವುದಕ್ಕೂ ಮುಂಚೆಯೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ವಾಜಪೇಯಿ ಸರಕಾರದ ವೈಫಲ್ಯವಿದು ಅಂತಾ ಸರಕಾರದ ಮೇಲೆ ಪ್ರತಿಪಕ್ಷ ಗಳು ಮುಗಿಬಿದ್ದವು. ಕೆಲವೊಂದಷ್ಟು ಜನ ಇನ್ನೂ ಮುಂದಕ್ಕೆ ಹೋಗಿ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಟ್ಟು ಬಿಡಿ ಎಂದರು. ಆಗಷ್ಟೇ ಅಧಿಕಾರಕ್ಕೆ ಬಂದಿದ್ದ ವಾಜಪೇಯಿ ರಾಜಿನಾಮೆ ನೀಡಬೇಕೆಂಬ ಒತ್ತಡವಿದ್ದರೂ ಯಾವುದಕ್ಕೂ ಬಗ್ಗದೇ ಸೇನೆಗೆ ವಾಜಪೇಯಿ ಶಕ್ತಿ ತುಂಬಿದರು.

ಪ್ರಧಾನಿಯ ಆದೇಶ ಬಂದ ತಕ್ಷ ಣ ಸೇನೆ ತನ್ನ ಕಾರ್ಯಾಚರಣೆಯನ್ನು ಅತ್ಯಂತ ಕ್ಲಿಷ್ಟಕರ ಸನ್ನಿವೇಶದಲ್ಲಿ ಪ್ರಾರಂಭಿಸಿತು. ಇತ್ತ ಉಕ್ಕಿನ ಮನುಷ್ಯಅಡ್ವಾಣಿ ತಕ್ಷ ಣವೇ ಇಸ್ರೇಲ್‌ಗೆ ತೆರಳಿ ಮದ್ದುಗುಂಡು ಹಾಗು ಅಗತ್ಯ ಸೇನಾ ನೆರವು ಪಡೆದುಕೊಂಡು ಬಂದರು. ಯುದ್ಧ ನಡೆಯುತ್ತಿದ್ದ ಸ್ಥಳದ ಪರಿಸ್ಥಿತಿಯ ಅವಲೋಕನ ನಡೆಸಿ ಅತ್ಯಂತ ಕೆಟ್ಟ ಹವಾಮಾನ, ಕೈಯಲ್ಲಿರುವ ಕಳಪೆ ಸಾಮಾಗ್ರಿಗಳು, ವೈರಿಪಡೆಯ ಅತ್ಯಾಧುನಿಕ ಆಯುಧಗಳ ನಡುವೆಯೂ ನಮ್ಮ ಸೇನೆ ಧೃತಿಗೆಡದೆ ಆಪರೇಷನ್‌ ವಿಜಯ್‌ ಮೂಲಕ ಹೋರಾಟ ನಡೆಸುತ್ತಾ ಒಂದೊಂದೇ ಸ್ಥಳವನ್ನು ವಾಪಸ್ಸು ಪಡೆಯಿತು.

74 ದಿನಗಳ ಕಾಲ ನಡೆದ ಯುದ್ಧದಲ್ಲಿ ದಿನಕ್ಕೆ 15 ಕೋಟಿಯಂತೆ ಸುಮಾರು 1100 ಕೋಟಿಗಳಷ್ಟು ಹಣ ವ್ಯಯಿಸಲಾಗಿತ್ತು. ಖರ್ಚಾದ ಹಣವಿರಲಿ, ಆದರೆ ದೇಶ ಅದೆಷ್ಟೋ ಯುವ ಸೇನಾನಿಗಳನ್ನು ಕಳೆದುಕೊಂಡಿತ್ತು. ನಮ್ಮವರು 527, ಪಾಕಿಸ್ತಾನದವರು 696 ಜನ ಸಾವಿಗೀಡಾದರು. ಜುಲೈ 26ರಂದು ಕಾರ್ಗಿಲ್‌ನ ಕೊನೆಯ ಠಾಣೆಯನ್ನು ಭಾರತೀಯ ಸೇನೆ ವಶಪಡಿಸಿಕೊಂಡು ಗೆಲುವು ಘೋಷಿಸಿತು. ಅದುವೇ ಕಾರ್ಗಿಲ್‌ ವಿಜಯ ದಿವಸ.

ಅಂದು ಭಾರತ ಪಾಕಿಸ್ತಾನದ ಒಳಗೆ ಹೋಗಿ ಯುದ್ಧ ಮಾಡಿರಲಿಲ್ಲ. ಅಂತಾರಾಷ್ಟ್ರೀಯ ಗಡಿರೇಖೆ ಉಲ್ಲಂಘಿಸಿರಲಿಲ್ಲ. ಅಷ್ಟು ಅಚ್ಚುಕಟ್ಟಾಗಿ ಯುದ್ಧ ಗೆದ್ದಿತ್ತು. ಸೇನೆಯಲ್ಲಿ ಮದ್ದು ಗುಂಡುಗಳಿರದಿದ್ದರೂ ಯೋಧರ ಆತ್ಮವಿಶ್ವಾಸ ಕಾರ್ಗಿಲ್‌ನ ಎತ್ತರದ ಬೆಟ್ಟಗುಡ್ಡಗಳನ್ನೂ ಮೀರಿಸುವಂತಿತ್ತು. ಹೀಗೆ ಪಾಕಿಸ್ತಾನಕ್ಕೆ ನಮ್ಮ ಯೋಧರು ಪಾಠ ಕಲಿಸಿ 20 ವರ್ಷ ಇಂದಿಗೆ ಕಳೆದಿದೆ. ವಿಜಯದ ಸಂಕೇತವಾಗಿ ಹುತಾತ್ಮರಿಗೆ ನಮನಗಳನ್ನು ಸಲ್ಲಿಸಲು ಜುಲೈ 26ನ್ನು ಕಾರ್ಗಿಲ್‌ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಹುತಾತ್ಮ ಯೋಧರಿಗೆ ನಮನಗಳು.

Spread the love
  • Related Posts

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಬೆಳ್ತಂಗಡಿ: ಹಲವು ಶೈಕ್ಷಣಿಕ ದಾಖಲೆಗಳ ಮೂಲಕ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾದ ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣ ಇಂದು ಹೊಸ ವಿಷಯಕ್ಕೆ ಗಮನ ಸೆಳೆಯಿತು. ಏಪ್ರಿಲ್ 10 ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರ…

    Spread the love

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಕನ್ಯಾಡಿ: ಸೇವಾ ಭಾರತಿ ಕನ್ಯಾಡಿ ವತಿಯಿಂದ ಕರ್ನಾಟಕ ಸರ್ಕಾರದ ಅಸಂಘಟಿತ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಮಿಕ ಆಯುಕ್ತರಾದ ಎಸ್.ಬಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ ಕೃಷಿ ಕಾರ್ಮಿಕರು…

    Spread the love

    You Missed

    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    • By admin
    • April 10, 2026
    • 26 views
    ಎಕ್ಸೆಲ್ ಕಾಲೇಜಿನ ವಿದ್ಯಾಸಾಗರ ಕ್ಯಾಂಪಸ್ ನಲ್ಲಿ ಸರಸ್ವತಿ ಗೋ ಮಂದಿರ ಲೋಕಾರ್ಪಣೆ

    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    • By admin
    • April 10, 2026
    • 7 views
    ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ವಿಶೇಷ ಯೋಜನೆಗಳ ಬೇಡಿಕೆ & ಬೆನ್ನುಹುರಿ ಸಂತ್ರಸ್ತರ ಕಲ್ಯಾಣಕ್ಕಾಗಿ ಸೇವಾಭಾರತಿ ಕನ್ಯಾಡಿಯ ವತಿಯಿಂದ ಮನವಿ

    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    • By admin
    • April 9, 2026
    • 26 views
    ಎಕ್ಸೆಲ್ ಪಿಯು ಕಾಲೇಜು ದ್ವಿತೀಯ ಪಿಯುಸಿ ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    • By admin
    • April 9, 2026
    • 34 views
    ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

    • By admin
    • April 7, 2026
    • 89 views
    ಖಾಸಗಿ ವೈದ್ಯಕೀಯ ಕಾಲೇಜುಗಳೊಂದಿಗೆ MOU: ಕರ್ನಾಟಕ ಸರ್ಕಾರದ ಹೊಸ ಮಾರ್ಗಸೂಚಿ

     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ! 

    • By admin
    • April 7, 2026
    • 37 views
     ಒಂದು ಕಿಡಿ ಬೆಂಕಿ , ಒಂದು ಹಿಡಿ ಮಣ್ಣು, ಒಂದು ಕಾಡಿನ ಅಂತ್ಯ!