ಇಂದು 21 ನೇ ಕಾರ್ಗಿಲ್ ವಿಜಯ್ ದಿವಸ್ ದೇಶಕ್ಕಾಗಿ ತನ್ನ ಪ್ರಾಣ ಪಣಕ್ಕಿಟ್ಟು ಹುತಾತ್ಮರಾದ ವೀರ ಯೋಧರಿಗೆ ನಮನ

ನವದೆಹಲಿ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ 21ರ ಸಂಭ್ರಮ ಇಂದು . ಇಪ್ಪತ್ತೊಂದು ವರ್ಷಗಳ ಹಿಂದೆ ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ.


ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು ಕಡೆಯಿಂದ ಅಂದಿನ ಪ್ರಧಾನಿ ವಾಜಪೇಯಿ ತೋರಿದ ಸ್ನೇಹ ಹಸ್ತಕ್ಕೆ ಕೈಚಾಚಿ ಇನ್ನೊಂದು ಕಡೆಯಿಂದ ಭಾರತದ ಬೆನ್ನಿಗೇ ಇರಿಯಿತು. ಅತ್ತ ಲಾಹೋರಿನಲ್ಲಿ ನವಾಜ್‌ ಶರೀಫ್‌, ಪ್ರಧಾನಿ ವಾಜಪೇಯಿ ಅವರ ಕೈಕುಲುಕುತ್ತಿರುವಾಗ ಇತ್ತ ಗಡಿ ಭಾಗದಲ್ಲಿ ತನ್ನ ಸೇನೆಯನ್ನು ಜಮಾಗೊಳಿಸಿ, ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕಿ ಕುಳಿತಿತ್ತು. ಸ್ನೇಹ ಹಸ್ತ ಚಾಚುತ್ತಾ ಭಾರತ ಎಲ್ಲೋ ಒಂದು ಬದಿಯಲ್ಲಿ ಪಾಕಿಸ್ತಾನವನ್ನು ನಂಬಿ ಮೈಮರೆತಿತ್ತು.

ವಿಶ್ವಕ್ಕೆ ಶಾಂತಿ ಸಾರಿದ ರಾಷ್ಟ್ರ ನಮ್ಮದು. ಆದರೆ ಪಕ್ಕದ ರಾಷ್ಟ್ರ ನಮ್ಮ ಮೇಲೆ ಆಕ್ರಮಣ ಮಾಡಲು ಬರಬಹುದು ಎಂದು ಊಹಿಸಿಕೊಳ್ಳುವುದಕ್ಕೂ ಮುಂಚೆಯೇ ಪರಿಸ್ಥಿತಿ ಕೈಮೀರಿ ಹೋಗಿತ್ತು. ವಾಜಪೇಯಿ ಸರಕಾರದ ವೈಫಲ್ಯವಿದು ಅಂತಾ ಸರಕಾರದ ಮೇಲೆ ಪ್ರತಿಪಕ್ಷ ಗಳು ಮುಗಿಬಿದ್ದವು. ಕೆಲವೊಂದಷ್ಟು ಜನ ಇನ್ನೂ ಮುಂದಕ್ಕೆ ಹೋಗಿ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಟ್ಟು ಬಿಡಿ ಎಂದರು. ಆಗಷ್ಟೇ ಅಧಿಕಾರಕ್ಕೆ ಬಂದಿದ್ದ ವಾಜಪೇಯಿ ರಾಜಿನಾಮೆ ನೀಡಬೇಕೆಂಬ ಒತ್ತಡವಿದ್ದರೂ ಯಾವುದಕ್ಕೂ ಬಗ್ಗದೇ ಸೇನೆಗೆ ವಾಜಪೇಯಿ ಶಕ್ತಿ ತುಂಬಿದರು.

ಪ್ರಧಾನಿಯ ಆದೇಶ ಬಂದ ತಕ್ಷ ಣ ಸೇನೆ ತನ್ನ ಕಾರ್ಯಾಚರಣೆಯನ್ನು ಅತ್ಯಂತ ಕ್ಲಿಷ್ಟಕರ ಸನ್ನಿವೇಶದಲ್ಲಿ ಪ್ರಾರಂಭಿಸಿತು. ಇತ್ತ ಉಕ್ಕಿನ ಮನುಷ್ಯಅಡ್ವಾಣಿ ತಕ್ಷ ಣವೇ ಇಸ್ರೇಲ್‌ಗೆ ತೆರಳಿ ಮದ್ದುಗುಂಡು ಹಾಗು ಅಗತ್ಯ ಸೇನಾ ನೆರವು ಪಡೆದುಕೊಂಡು ಬಂದರು. ಯುದ್ಧ ನಡೆಯುತ್ತಿದ್ದ ಸ್ಥಳದ ಪರಿಸ್ಥಿತಿಯ ಅವಲೋಕನ ನಡೆಸಿ ಅತ್ಯಂತ ಕೆಟ್ಟ ಹವಾಮಾನ, ಕೈಯಲ್ಲಿರುವ ಕಳಪೆ ಸಾಮಾಗ್ರಿಗಳು, ವೈರಿಪಡೆಯ ಅತ್ಯಾಧುನಿಕ ಆಯುಧಗಳ ನಡುವೆಯೂ ನಮ್ಮ ಸೇನೆ ಧೃತಿಗೆಡದೆ ಆಪರೇಷನ್‌ ವಿಜಯ್‌ ಮೂಲಕ ಹೋರಾಟ ನಡೆಸುತ್ತಾ ಒಂದೊಂದೇ ಸ್ಥಳವನ್ನು ವಾಪಸ್ಸು ಪಡೆಯಿತು.

74 ದಿನಗಳ ಕಾಲ ನಡೆದ ಯುದ್ಧದಲ್ಲಿ ದಿನಕ್ಕೆ 15 ಕೋಟಿಯಂತೆ ಸುಮಾರು 1100 ಕೋಟಿಗಳಷ್ಟು ಹಣ ವ್ಯಯಿಸಲಾಗಿತ್ತು. ಖರ್ಚಾದ ಹಣವಿರಲಿ, ಆದರೆ ದೇಶ ಅದೆಷ್ಟೋ ಯುವ ಸೇನಾನಿಗಳನ್ನು ಕಳೆದುಕೊಂಡಿತ್ತು. ನಮ್ಮವರು 527, ಪಾಕಿಸ್ತಾನದವರು 696 ಜನ ಸಾವಿಗೀಡಾದರು. ಜುಲೈ 26ರಂದು ಕಾರ್ಗಿಲ್‌ನ ಕೊನೆಯ ಠಾಣೆಯನ್ನು ಭಾರತೀಯ ಸೇನೆ ವಶಪಡಿಸಿಕೊಂಡು ಗೆಲುವು ಘೋಷಿಸಿತು. ಅದುವೇ ಕಾರ್ಗಿಲ್‌ ವಿಜಯ ದಿವಸ.

ಅಂದು ಭಾರತ ಪಾಕಿಸ್ತಾನದ ಒಳಗೆ ಹೋಗಿ ಯುದ್ಧ ಮಾಡಿರಲಿಲ್ಲ. ಅಂತಾರಾಷ್ಟ್ರೀಯ ಗಡಿರೇಖೆ ಉಲ್ಲಂಘಿಸಿರಲಿಲ್ಲ. ಅಷ್ಟು ಅಚ್ಚುಕಟ್ಟಾಗಿ ಯುದ್ಧ ಗೆದ್ದಿತ್ತು. ಸೇನೆಯಲ್ಲಿ ಮದ್ದು ಗುಂಡುಗಳಿರದಿದ್ದರೂ ಯೋಧರ ಆತ್ಮವಿಶ್ವಾಸ ಕಾರ್ಗಿಲ್‌ನ ಎತ್ತರದ ಬೆಟ್ಟಗುಡ್ಡಗಳನ್ನೂ ಮೀರಿಸುವಂತಿತ್ತು. ಹೀಗೆ ಪಾಕಿಸ್ತಾನಕ್ಕೆ ನಮ್ಮ ಯೋಧರು ಪಾಠ ಕಲಿಸಿ 20 ವರ್ಷ ಇಂದಿಗೆ ಕಳೆದಿದೆ. ವಿಜಯದ ಸಂಕೇತವಾಗಿ ಹುತಾತ್ಮರಿಗೆ ನಮನಗಳನ್ನು ಸಲ್ಲಿಸಲು ಜುಲೈ 26ನ್ನು ಕಾರ್ಗಿಲ್‌ ವಿಜಯ ದಿವಸ ಎಂದು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಹುತಾತ್ಮ ಯೋಧರಿಗೆ ನಮನಗಳು.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 66 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 61 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 228 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 83 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 159 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ