ಜುಲೈ 22-2020; ಬುಧವಾರ: ಇಂದಿನ ರಾಶಿ ಭವಿಷ್ಯ ಇಂದು ಯಾವ ರಾಶಿಯವರಿಗೆ ಶುಭ ಯಾರಿಗೆ ಆಶುಭ ವೀಕ್ಷಿಸಿ

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ದಕ್ಷಿಣಾಯನ ಪುಣ್ಯಕಾಲ,
ವಸಂತ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದ್ವಿತೀಯಾ ತಿಥಿ,
ಬುಧವಾರ, ಆಶ್ಲೇಷ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:54 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:42 ರಿಂದ 9:18

ಮೇಷ

ಉದ್ಯೋಗದ ವಿಷಯದಲ್ಲಿ ಭಾಗ್ಯೋದಯದ ವಾರ್ತೆಯನ್ನು ಕೇಳಲಿದ್ದೀರಿ. ಮಿತ್ರರ ಔದಾರ್ಯವು ದೊರಕುವುದು. ಆರ್ಥಿಕ ಅಭಿವೃದ್ಧಿ ಕಾಣುವಿರಿ. ಬಂಧುಗಳೊಂದಿಗೆ ಅತಿಯಾದ ಜಿಗುಟುತನದಿಂದಾಗಿ ವಿರಸ.

ವೃಷಭ

ವ್ಯವಹಾರದಲ್ಲಿ ಹೊಸ ಯೋಜನೆಯನ್ನು ಪ್ರಾರಂಭಿಸುವ ಸಾಧ್ಯತೆ. ಹತ್ತಿ, ಬಟ್ಟೆ ವ್ಯಾಪಾರದಿಂದ ಅಧಿಕ ಲಾಭವನ್ನು ಹೊಂದುವಿರಿ. ಗುತ್ತಿಗೆ ಕೆಲಸ ನಿರ್ವಹಣೆಗಾಗಿ ಯಂತ್ರೋಪಕರಣಗಳನ್ನು ಖರೀದಿಸುವ ಸಾಧ್ಯತೆ.

ಮಿಥುನ

ಗಣಿಗಾರಿಕೆ, ಕಲ್ಲು ಕೆಲಸಗಾರರಿಗೆ ಬೇಡಿಕೆ ಹೆಚ್ಚಿ ಉತ್ತಮ ಆದಾಯ ದೊರಕಲಿದೆ. ಸರ್ಕಾರದಿಂದ ಬರಬೇಕಾದ ಸಹಾಯಧನ ದೊರಕುವ ಸಾಧ್ಯತೆ. ಬಹುದಿನಗಳ ವ್ಯಾಜ್ಯಗಳು ರಾಜಿ ಸಂಧಾನದ ಮೂಲಕ ಕೊನೆಗೊಳ್ಳುವುದು.

ಕಟಕ

ಉದ್ಯೋಗದಲ್ಲಿ ಪ್ರಗತಿ. ಬಟ್ಟೆ, ಶೃಂಗಾರ ಸಾಮಗ್ರಿಗಳ ವ್ಯಾಪಾರಸ್ಥರು, ಪ್ರಸಾದನ ಕಲಾವಿದರುಗಳಿಗೆ ಹೆಚ್ಚಿನ ಆದಾಯ. ಮಹಿಳಾ ರಾಜಕಾರಣಿಗಳಿಗೆ ಗೌರವ ಪ್ರತಿಷ್ಠೆಗಳು ಪ್ರಾಪ್ತವಾಗುವವು.

ಸಿಂಹ

ಭೂಮಿ ಖರಿದಿ ಸಾಧ್ಯತೆ ಕಂಡುಬರುತ್ತಿದೆ. ಪತ್ರ ವ್ಯವಹಾರ ನಡೆಸುವಾಗ ಯೋಚಿಸಿ ಮುಂದುವರಿಯುವುದು ಉತ್ತಮ. ನಾನಾ ಮೂಲಗಳಿಂದ ಸಂಪದಭಿವೃದ್ಧಿಯನ್ನು ಕಾಣಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.

ಕನ್ಯಾ

ಸ್ಟೀಲ್, ಕಬ್ಬಿಣ ಮುಂತಾದ ಲೋಹಗಳ ವ್ಯಾಪಾರಸ್ಥರು ವಿಶೇಷ ಲಾಭ ಹೊಂದಲಿದ್ದೀರಿ. ವಿಶೇಷ ಕೆಲಸದ ನಿಮಿತ್ತ ದೂರದ ಪ್ರಯಾಣ ಸಾಧ್ಯತೆ. ಮಂಗಳ ಕಾರ್ಯಗಳ ಸಲುವಾಗಿ ಮಾತುಕತೆ ನಡೆಸಲಿದ್ದೀರಿ.

ತುಲಾ

ವಿದ್ಯಾರ್ಥಿಗಳಿಗೆ ಅತಿಯಾದ ಒತ್ತಡದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ. ತಾಳ್ಮೆ ಮತ್ತು ಬುದ್ಧಿಮತ್ತೆಯಿಂದಾಗಿ ಯಶಸ್ಸನ್ನು ಹೊಂದುವಿರಿ. ಆಹಾರಧಾನ್ಯಗಳ ವ್ಯಾಪಾರಿಗಳಿಗೆ ಉತ್ತಮ ಆದಾಯ.

ವೃಶ್ಚಿಕ

ಕ್ರೀಡೆ ಮುಂತಾದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಸ್ವಲ್ಪಮಟ್ಟಿನ ಹಿನ್ನಡೆ. ಉಪಾಧ್ಯಾಯರು, ಉಪನ್ಯಾಸಕರುಗಳಿಗೆ ಸನ್ಮಾನ, ಗೌರವಗಳು ಪ್ರಾಪ್ತವಾಗಲಿದೆ. ಅಲಂಕಾರಿಕ ವಸ್ತುಗಳ ಖರೀದಿ ಸಾಧ್ಯತೆ.

ಧನು

ಸ್ಥಿರಾಸ್ತಿಯನ್ನು ಖರೀದಿ ಮಾಡುವ ಸಾಧ್ಯತೆ. ವಿದ್ಯುತ್, ಬೆಂಕಿ ಮುಂತಾದವುಗಳ ಜೊತೆ ಕೆಲಸ ಮಾಡುವವರು ಅತ್ಯಂತ ಜಾಗರೂಕರಾಗಿರುವುದು ಒಳಿತು. ವಿವಿಧ ಮೂಲಗಳಿಂದ ಆದಾಯವು ಹರಿದುಬರಲಿದೆ.

ಮಕರ

ವೈದ್ಯ ವೃತ್ತಿಯಲ್ಲಿರುವವರಿಗೆ, ವಾಣಿಜ್ಯ ಬೆಳೆಗಳ ದಲ್ಲಾಳಿಗಳಿಗೆ ಉತ್ತಮ ಆದಾಯ. ಅರಣ್ಯಾಧಿಕಾರಿಗಳಿಗೆ ಅನಿರೀಕ್ಷಿತ ವರಮಾನ ದೊರಕಲಿದೆ. ಕ್ರೀಡಾಪಟುಗಳಿಗೆ ಯಶಸ್ಸಿನ ಮೆಟ್ಟಿಲು ದೊರಕುವುದು.

ಕುಂಭ

ಉದ್ಯೋಗದಲ್ಲಿ ಯಶಸ್ಸು ಮತ್ತು ಖ್ಯಾತಿ ದೊರಕುವುದು. ಮಕ್ಕಳಿಗೆ ಅದೃಷ್ಟ ಒದಗಿ ಬರುವುದು. ಷೇರುಪೇಟೆ ವಹಿವಾಟುದಾರರಿಗೆ ವ್ಯವಹಾರದಲ್ಲಿ ಹೆಚ್ಚಳವಾಗುವ ಸಾಧ್ಯತೆ.

ಮೀನ

ದೊಡ್ಡ ದೊಡ್ಡ ಸಾಹಸಿ ಕಾರ್ಯಗಳನ್ನು ಕೈಗೊಳ್ಳಲಿದ್ದೀರಿ. ಖರೀದಿ ವ್ಯವಹಾರದಲ್ಲಿ ತೊಡಕುಂಟಾಗಿ ದುಂದು ವೆಚ್ಚವನ್ನು ಭರಿಸಬೇಕಾದೀತು. ಮನೆಯವರೊಂದಿಗೆ ವಿರಸವುಂಟಾಗುವ ಸಾಧ್ಯತೆ ಕಂಡುಬರುತ್ತಿದೆ.

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

    ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 33 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 78 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 192 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ