ಎತ್ತಿನಹೊಳೆ ಯೋಜನೆಗೆ ಕೇಂದ್ರದಿಂದ ಗ್ರೀನ್ ಸಿಗ್ನಲ್: 277 ಎಕರೆ ಅರಣ್ಯ ಬಳಕೆಗೆ ಷರತ್ತುಬದ್ಧ ಅನುಮತಿ

ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಹಾಗೂ ತುಮಕೂರು ಜಿಲ್ಲೆಗಳ 277 ಎಕರೆ ಅರಣ್ಯ ಬಳಸಲು ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು ತಾತ್ವಿಕ ಅನುಮೋದನೆ ನೀಡಿದೆ.

oplus_18

ಈ ಬಗ್ಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಅರಣ್ಯ ಸಂರಕ್ಷಣಾ ವಿಭಾಗ) ಮಾಹಿತಿ ನೀಡಿದ್ದು, ಯೋಜನೆ ಮುಂದುವರಿಸಲು 34 ಷರತ್ತುಗಳನ್ನು ವಿಧಿಸಿದೆ. ಈ ಬೆಳವಣಿಗೆ ಬಳಿಕ ಸಚಿವಾಲಯದ ತಕರಾರಿನ ಕಾರಣದಿಂದ ವರ್ಷದಿಂದ ಸ್ಥಗಿತಗೊಂಡಿದ್ದ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಮತ್ತೆ ಚಾಲನೆ ಸಿಗಲಿದೆ.

ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೆ ತಾಕೀತು

ಈಗಾಗಲೇ ಅರಣ್ಯ ಪ್ರದೇಶದಲ್ಲಿ ಒಪ್ಪಿಗೆ ಇಲ್ಲದೇ ಕಾಮಗಾರಿ ನಡೆಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುಬೇಕು. ಕಾಮಗಾರಿ ನಡೆಸಿದ ಸ್ಥಳದ ಮೌಲ್ಯದ ಆರು ಪಟ್ಟು ಮೌಲ್ಯವನ್ನು ದಂಡದ ರೂಪದಲ್ಲಿ ಪಾವತಿಸಬೇಕು. ಪರಿಸರ ಸಂರಕ್ಷಣೆ ಗಮನದಲ್ಲಿಟ್ಟುಕೊಂಡು ಕಾಮಗಾರಿ ನಡೆಸಬೇಕು ಎಂದು ಕೇಂದ್ರ ಹೇಳಿದೆ.ಅರಣ್ಯ ಭೂಮಿಯ ಪ್ರಮಾಣಕ್ಕೆ ಸಮನಾಗಿ ಅರಣ್ಯೇತರ ಭೂಮಿಯಲ್ಲಿ ಬೆಳೆಸಬೇಕು. ಪರಿಹಾರ ಅರಣ್ಯೀಕರಣಕ್ಕಾಗಿ ಗುರುತಿಸಲಾದ ಅರಣ್ಯೇತರ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾವಣೆ ಮತ್ತು ಮ್ಯುಟೇಷನ್ ಮಾಡಬೇಕು, ಅದರ ವಿವರಗಳನ್ನು ಸಲ್ಲಿಸಬೇಕು.ಅರಣ್ಯೇತರ ಭೂಮಿಯನ್ನು ರಾಜ್ಯ ಅರಣ್ಯ ಇಲಾಖೆಯ ಹೆಸರಿಗೆ ವರ್ಗಾವಣೆ ಮತ್ತು ಮ್ಯುಟೇಷನ್ ಮಾಡಿದ ನಂತರ, ರಾಜ್ಯ ಸರ್ಕಾರವು ಅದನ್ನು ಭಾರತೀಯ ಅರಣ್ಯ ಕಾಯಿದೆ 1927ರ ಸೆಕ್ಷನ್ 29 ಅಡಿಯಲ್ಲಿ ಅಥವಾ ಸ್ಥಳೀಯ ಅರಣ್ಯ ಕಾಯಿದೆಯ ಅಡಿಯಲ್ಲಿ ಸಂರಕ್ಷಿತ ಅರಣ್ಯ ಎಂದು ಅಧಿಸೂಚಿಸಬೇಕು. ನಂತರವೇ ಅರಣ್ಯ ಭೂಮಿಯನ್ನು ಬಳಕೆದಾರ ಏಜೆನ್ಸಿಗೆ ಹಸ್ತಾಂತರಿಸಬೇಕು.

ಬಳಕೆದಾರ ಏಜೆನ್ಸಿ ಪರಿಹಾರ ಅರಣ್ಯೀಕರಣವನ್ನು ಬೆಳೆಸುವ ಮತ್ತು ನಿರ್ವಹಿಸುವ ವೆಚ್ಚವನ್ನು ಅರಣ್ಯೇತರ ಭೂಮಿಯ ಸಮಾನ ಪ್ರಮಾಣಕ್ಕೆ ಪ್ರಸ್ತುತ ದಿನಗೂಲಿ ದರದಲ್ಲಿ CAMPA ಖಾತೆಗೆ ಆನ್‌ಲೈನ್‌ನಲ್ಲಿ ಜಮಾ ಮಾಡಬೇಕು. ಈ ಯೋಜನೆಯಲ್ಲಿ CA ಪ್ರದೇಶದ ಗಡಿ ನಿರ್ಧಾರ, ಬೇಲಿ, ನೀರುಣಿಸುವ ವ್ಯವಸ್ಥೆ, SMC ಕೆಲಸಗಳು ಮತ್ತು ಮುಂದಿನ ವರ್ಷಗಳ ವೆಚ್ಚ ಏರಿಕೆಗೆ ಸೂಕ್ತ ಬದುಕುಳಿಕೆಯ ವೆಚ್ಚವನ್ನು ಸೇರಿಸಬೇಕು, ಇದನ್ನು 10 ವರ್ಷಗಳವರೆಗೆ ನಿರ್ವಹಿಸಬೇಕು.

ಮರಗಳನ್ನು ಕಡಿಯುವ ವೆಚ್ಚವನ್ನು ಬಳಕೆದಾರ ಏಜೆನ್ಸಿಯು ರಾಜ್ಯ ಅರಣ್ಯ ಇಲಾಖೆಗೆ ಜಮಾ ಮಾಡಬೇಕು. ಅರಣ್ಯ ಭೂಮಿಯಲ್ಲಿ ಯಾವುದೇ ಕಾರ್ಮಿಕ ಶಿಬಿರ ಸ್ಥಾಪಿಸುವಂತಿಲ್ಲ. ಯೋಜನೆಯ ಕಾಮಗಾರಿಗಾಗಿ ಅರಣ್ಯ ಪ್ರದೇಶದ ಒಳಗೆ ಹೊಸ ರಸ್ತೆ ಅಥವಾ ಹಾದಿಗಳನ್ನು ನಿರ್ಮಿಸುವಂತಿಲ್ಲ. ಅರಣ್ಯ ಭೂಮಿಯನ್ನು ಯೋಜನೆಯಲ್ಲಿ ತಿಳಿಸಲಾದ ಉದ್ದೇಶಕ್ಕೆ ಮಾತ್ರ ಬಳಸಬೇಕು. ಬೇರೆ ಯಾವುದೇ ಉದ್ದೇಶಕ್ಕೆ ಬಳಸುವಂತಿಲ್ಲ.

ಯೋಜನೆಗಾಗಿ ಬಳಸುವ ಒಟ್ಟು ಅರಣ್ಯ ಭೂಮಿಯ ಪ್ರಮಾಣ 111.0277 ಹೆಕ್ಟೇರ್ ಅನ್ನು ಮೀರಬಾರದು. ಅಕ್ಕಪಕ್ಕದ ಪ್ರದೇಶದ ಸಸ್ಯ ಮತ್ತು ಪ್ರಾಣಿ ಜೀವಿಗಳಿಗೆ ಯಾವುದೇ ಹಾನಿ ಉಂಟುಮಾಡುವಂತಿಲ್ಲ. ರಾಜ್ಯ ಸರ್ಕಾರವು ಅರಣ್ಯ ಅನುಮೋದನೆಯ ಷರತ್ತುಗಳ ಅನುಸರಣೆಯನ್ನು ಪ್ರತಿ ವರ್ಷ ಡಿಸೆಂಬರ್ 31ರಂದು ವರದಿ ಸಲ್ಲಿಸಬೇಕು.

ಮರಗಳನ್ನು ಕಡಿಯುವುದು ಅನಿವಾರ್ಯವಾಗಿದ್ದಲ್ಲಿ ಮಾತ್ರ ಮತ್ತು ರಾಜ್ಯ ಅರಣ್ಯ ಇಲಾಖೆಯ ಕಟ್ಟುನಿಟ್ಟು ಮೇಲ್ವಿಚಾರಣೆಯಲ್ಲಿ ಮಾತ್ರ ಮಾಡಬೇಕು. ಈ ಷರತ್ತುಗಳಲ್ಲಿ ಯಾವುದಾದರೂ ಒಂದು ಉಲ್ಲಂಘನೆಯಾದಲ್ಲಿ ಅದು ನಿಯಮ 1980 ಉಲ್ಲಂಘನೆ ಎಂದು ಪರಿಗಣಿಸಲಾಗುವುದು ಮತ್ತು ಕಾಯಿದೆ ಪ್ರಕಾರ ಕ್ರಮ ತೆಗೆಯಲಾಗುವುದು ಎಂದು ಎಚ್ಚರಿಸಿದೆ.

Spread the love
  • Related Posts

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    🖊️• ಬರಹ: ರಾಜೇಶ್ ಎಂ ಕಾನರ್ಪ ಮಂಗಗಳ ಕೈಯಲ್ಲಿ ಕುರುಕುರೇ ಪ್ಯಾಕೇಟ್!!! ಪ್ರೀತಿಯ ಹೆಸರಿನಲ್ಲಿ ವಾನರಗಳಿಗೆ ವಿಷವಿಕ್ಕುತ್ತಿರುವ ಮನುಜಕುಲ??? ವಾನರಗಳಿಗೆ ಪ್ಯಾಕೆಟ್‌ ತಿಂಡಿ ಬೇಡ, ಪ್ರಕೃತಿಯ ಆಹಾರ ಬೇಕು!!! ಪ್ರಕೃತಿಯ ಮಡಿಲಲ್ಲಿ ಸ್ವತಂತ್ರವಾಗಿ ಬದುಕಬೇಕಾದ ವಾನರಗಳು ಇಂದು ಮನುಷ್ಯರ ಕೈಯಲ್ಲಿರುವ ಕುರುಕುರೆ,…

    Spread the love

    You Missed

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 4 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 10 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 12 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 15 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ