ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ
ದಕ್ಷಿಣಾಯನ ಪುಣ್ಯಕಾಲ
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಬುಧವಾರ, ವಿಶಾಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20

ಮೇಷ

ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ.

ವೃಷಭ

ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದ ಅಶುಭ ಸಮಾಚಾರ ಸಿಗಲಿದೆ.

ಮಿಥುನ

ಹಿರಿಯರೊಂದಿಗೆ ಶಾಂತತೆಯಿಂದ ವ್ಯವಹರಿಸುವುದು ಉತ್ತಮ. ವೃಥಾ ಖರ್ಚು. ಸಾಮಾಜಿಕ ಕಾರ್ಯಗಳಲ್ಲಿ ಹೊಂದಾಣಿಕೆ ಅವಶ್ಯ. ಕಿವಿ, ಗಂಟಲು ನೋವುಗಳು ನಿಮ್ಮನ್ನು ಪೀಡಿಸುವ ಸಾಧ್ಯತೆ.

ಕಟಕ

ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯಿಂದಾಗಿ ಉತ್ತಮ ಆದಾಯ. ಪ್ರತಿಯೊಂದು ವಿಷಯದಲ್ಲೂ ನೀವು ತೆಗೆದುಕೊಳ್ಳುವ ನಿರ್ಧಾರವೇ ಸರಿಯಾಗಿರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ.

ಸಿಂಹ

ಆರ್ಥಿಕ ಪ್ರಗತಿ ಉತ್ತಮಗೊಂಡು ಸಂತೋಷ ಮೂಡುವುದು. ಶತ್ರುಗಳ ವಿರುದ್ಧ ಜಯ. ಬಹಳ ದಿನಗಳ ಸಮಸ್ಯೆಗಳು ಪರಿಹಾರವಾಗಿ ನಿರಾಳತೆ ತಲೆದೋರುವುದು. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.

ಕನ್ಯಾ

ಸಂಕಷ್ಟಗಳು ಪರಿಹಾರವಾಗಲಿವೆ. ಹಿಂದಿನ ಕೆಲಸಗಳಿಗೆ ಪುನಃ ಚಾಲನೆ ದೊರೆತು ಪ್ರಗತಿ ಪಥದಲ್ಲಿ ಸಾಗುವವು. ದುಡುಕುತನದಿಂದಾಗಿ ಉದ್ವೇಗಗೊಳ್ಳುವುದರಿಂದ ಸಮಸ್ಯೆಗಳು ತಲೆದೋರಬಹುದು. ದುರ್ಗಾಸ್ತೋತ್ರ ಪಠಿಸಿ.

ತುಲಾ

ಕೆಲಸ–ಕಾರ್ಯಗಳಲ್ಲಿ ಮಂದಗತಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ. ಹೊಸ ಕೆಲಸಗಳನ್ನು ಪ್ರಾರಂಭಿಸುವುದು ಬೇಡ. ಅಪವಾದಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಧೃತಿಗೆಡಬೇಕಾಗಿಲ್ಲ.

ವೃಶ್ಚಿಕ

ಕಣ್ಣು ಅಥವಾ ತಲೆನೋವು ತೀವ್ರವಾಗಿ ಕಾಡುವ ಸಾಧ್ಯತೆ. ವೃಥಾ ವಾದವಿವಾದದಿಂದಾಗಿ ಅನಗತ್ಯ ವೈರತ್ವ ಉಂಟಾಗಬಹುದು. ಅಯೋಗ್ಯರೊಂದಿಗೆ ಯಾವುದೇ ಕಾರಣಕ್ಕೂ ವ್ಯವಹಾರ ಬೇಡ.

ಧನು

ಆರ್ಥಿಕ ಸುಧಾರಣೆ. ಧಾರ್ಮಿಕ ಕಾರ್ಯಗಳಿಗೆ ಖರ್ಚುಮಾಡುವ ಸಾಧ್ಯತೆ ಇದ್ದು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಸಾಧಿಸಿ ಕೀರ್ತಿ ಸಂಪಾದನೆ. ಧೈರ್ಯದಿಂದ ಎದುರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಮಕರ

ಸ್ವಂತ ಉದ್ಯೋಗಿಗಳು ಹಾಗೂ ನೌಕರಿಯಲ್ಲಿರುವವರು ತಮ್ಮ ನಡೆ ನುಡಿ, ಕೆಲಸಗಳ ಬಗ್ಗೆ ಜಾಗ್ರತೆಯಿಂದಿರುವುದು ಸೂಕ್ತ. ಚಿಕ್ಕ ತಪ್ಪಿಗೂ ಮಹತ್ತರ ದಂಡ ತೆರಬೇಕಾದೀತು. ಉತ್ತಮ ಅವಕಾಶಗಳು ಬಂದೊದಗುವವು.

ಕುಂಭ

ಅಶುಭ ಸ್ವಪ್ನಗಳಿಂದಾಗಿ ಮಾನಸಿಕ ಚಂಚಲತೆ. ನಿರಾಸೆಯಿಂದಾಗಿ ದುಃಖದ ಅನುಭವ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಬೇರೆಯವರ ಅಪಹಾಸ್ಯಕ್ಕೆ ಒಳಗಾಗುವ ಸಾಧ್ಯತೆ. ಈಶ್ವರನ ಆರಾಧನೆ ಮಾಡಿ.

ಮೀನ

ಆದಾಯ ಮತ್ತು ಉಳಿಕೆಗಳಲ್ಲಿ ಪ್ರಗತಿಯಿರುವುದು. ಆರೋಗ್ಯದಲ್ಲಿ ಸುಧಾರಣೆ. ಸಂಬಂಧಿಗಳಲ್ಲಿ ವಂಶವೃದ್ಧಿಯ ಶುಭ ಸಂದೇಶ ಕೇಳಲಿದ್ದೀರಿ. ನಿಂತುಹೋದ ಕೆಲಸಗಳಿಗೆ ಮರುಚಾಲನೆ ದೊರೆಯುವ ಸಾಧ್ಯತೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ