ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ
ದಕ್ಷಿಣಾಯನ ಪುಣ್ಯಕಾಲ
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಬುಧವಾರ, ವಿಶಾಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20

ಮೇಷ

ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ.

ವೃಷಭ

ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದ ಅಶುಭ ಸಮಾಚಾರ ಸಿಗಲಿದೆ.

ಮಿಥುನ

ಹಿರಿಯರೊಂದಿಗೆ ಶಾಂತತೆಯಿಂದ ವ್ಯವಹರಿಸುವುದು ಉತ್ತಮ. ವೃಥಾ ಖರ್ಚು. ಸಾಮಾಜಿಕ ಕಾರ್ಯಗಳಲ್ಲಿ ಹೊಂದಾಣಿಕೆ ಅವಶ್ಯ. ಕಿವಿ, ಗಂಟಲು ನೋವುಗಳು ನಿಮ್ಮನ್ನು ಪೀಡಿಸುವ ಸಾಧ್ಯತೆ.

ಕಟಕ

ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯಿಂದಾಗಿ ಉತ್ತಮ ಆದಾಯ. ಪ್ರತಿಯೊಂದು ವಿಷಯದಲ್ಲೂ ನೀವು ತೆಗೆದುಕೊಳ್ಳುವ ನಿರ್ಧಾರವೇ ಸರಿಯಾಗಿರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ.

ಸಿಂಹ

ಆರ್ಥಿಕ ಪ್ರಗತಿ ಉತ್ತಮಗೊಂಡು ಸಂತೋಷ ಮೂಡುವುದು. ಶತ್ರುಗಳ ವಿರುದ್ಧ ಜಯ. ಬಹಳ ದಿನಗಳ ಸಮಸ್ಯೆಗಳು ಪರಿಹಾರವಾಗಿ ನಿರಾಳತೆ ತಲೆದೋರುವುದು. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.

ಕನ್ಯಾ

ಸಂಕಷ್ಟಗಳು ಪರಿಹಾರವಾಗಲಿವೆ. ಹಿಂದಿನ ಕೆಲಸಗಳಿಗೆ ಪುನಃ ಚಾಲನೆ ದೊರೆತು ಪ್ರಗತಿ ಪಥದಲ್ಲಿ ಸಾಗುವವು. ದುಡುಕುತನದಿಂದಾಗಿ ಉದ್ವೇಗಗೊಳ್ಳುವುದರಿಂದ ಸಮಸ್ಯೆಗಳು ತಲೆದೋರಬಹುದು. ದುರ್ಗಾಸ್ತೋತ್ರ ಪಠಿಸಿ.

ತುಲಾ

ಕೆಲಸ–ಕಾರ್ಯಗಳಲ್ಲಿ ಮಂದಗತಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ. ಹೊಸ ಕೆಲಸಗಳನ್ನು ಪ್ರಾರಂಭಿಸುವುದು ಬೇಡ. ಅಪವಾದಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಧೃತಿಗೆಡಬೇಕಾಗಿಲ್ಲ.

ವೃಶ್ಚಿಕ

ಕಣ್ಣು ಅಥವಾ ತಲೆನೋವು ತೀವ್ರವಾಗಿ ಕಾಡುವ ಸಾಧ್ಯತೆ. ವೃಥಾ ವಾದವಿವಾದದಿಂದಾಗಿ ಅನಗತ್ಯ ವೈರತ್ವ ಉಂಟಾಗಬಹುದು. ಅಯೋಗ್ಯರೊಂದಿಗೆ ಯಾವುದೇ ಕಾರಣಕ್ಕೂ ವ್ಯವಹಾರ ಬೇಡ.

ಧನು

ಆರ್ಥಿಕ ಸುಧಾರಣೆ. ಧಾರ್ಮಿಕ ಕಾರ್ಯಗಳಿಗೆ ಖರ್ಚುಮಾಡುವ ಸಾಧ್ಯತೆ ಇದ್ದು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಸಾಧಿಸಿ ಕೀರ್ತಿ ಸಂಪಾದನೆ. ಧೈರ್ಯದಿಂದ ಎದುರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಮಕರ

ಸ್ವಂತ ಉದ್ಯೋಗಿಗಳು ಹಾಗೂ ನೌಕರಿಯಲ್ಲಿರುವವರು ತಮ್ಮ ನಡೆ ನುಡಿ, ಕೆಲಸಗಳ ಬಗ್ಗೆ ಜಾಗ್ರತೆಯಿಂದಿರುವುದು ಸೂಕ್ತ. ಚಿಕ್ಕ ತಪ್ಪಿಗೂ ಮಹತ್ತರ ದಂಡ ತೆರಬೇಕಾದೀತು. ಉತ್ತಮ ಅವಕಾಶಗಳು ಬಂದೊದಗುವವು.

ಕುಂಭ

ಅಶುಭ ಸ್ವಪ್ನಗಳಿಂದಾಗಿ ಮಾನಸಿಕ ಚಂಚಲತೆ. ನಿರಾಸೆಯಿಂದಾಗಿ ದುಃಖದ ಅನುಭವ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಬೇರೆಯವರ ಅಪಹಾಸ್ಯಕ್ಕೆ ಒಳಗಾಗುವ ಸಾಧ್ಯತೆ. ಈಶ್ವರನ ಆರಾಧನೆ ಮಾಡಿ.

ಮೀನ

ಆದಾಯ ಮತ್ತು ಉಳಿಕೆಗಳಲ್ಲಿ ಪ್ರಗತಿಯಿರುವುದು. ಆರೋಗ್ಯದಲ್ಲಿ ಸುಧಾರಣೆ. ಸಂಬಂಧಿಗಳಲ್ಲಿ ವಂಶವೃದ್ಧಿಯ ಶುಭ ಸಂದೇಶ ಕೇಳಲಿದ್ದೀರಿ. ನಿಂತುಹೋದ ಕೆಲಸಗಳಿಗೆ ಮರುಚಾಲನೆ ದೊರೆಯುವ ಸಾಧ್ಯತೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 62 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️