ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ
ದಕ್ಷಿಣಾಯನ ಪುಣ್ಯಕಾಲ
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಬುಧವಾರ, ವಿಶಾಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20

ಮೇಷ

ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ.

ವೃಷಭ

ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದ ಅಶುಭ ಸಮಾಚಾರ ಸಿಗಲಿದೆ.

ಮಿಥುನ

ಹಿರಿಯರೊಂದಿಗೆ ಶಾಂತತೆಯಿಂದ ವ್ಯವಹರಿಸುವುದು ಉತ್ತಮ. ವೃಥಾ ಖರ್ಚು. ಸಾಮಾಜಿಕ ಕಾರ್ಯಗಳಲ್ಲಿ ಹೊಂದಾಣಿಕೆ ಅವಶ್ಯ. ಕಿವಿ, ಗಂಟಲು ನೋವುಗಳು ನಿಮ್ಮನ್ನು ಪೀಡಿಸುವ ಸಾಧ್ಯತೆ.

ಕಟಕ

ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯಿಂದಾಗಿ ಉತ್ತಮ ಆದಾಯ. ಪ್ರತಿಯೊಂದು ವಿಷಯದಲ್ಲೂ ನೀವು ತೆಗೆದುಕೊಳ್ಳುವ ನಿರ್ಧಾರವೇ ಸರಿಯಾಗಿರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ.

ಸಿಂಹ

ಆರ್ಥಿಕ ಪ್ರಗತಿ ಉತ್ತಮಗೊಂಡು ಸಂತೋಷ ಮೂಡುವುದು. ಶತ್ರುಗಳ ವಿರುದ್ಧ ಜಯ. ಬಹಳ ದಿನಗಳ ಸಮಸ್ಯೆಗಳು ಪರಿಹಾರವಾಗಿ ನಿರಾಳತೆ ತಲೆದೋರುವುದು. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.

ಕನ್ಯಾ

ಸಂಕಷ್ಟಗಳು ಪರಿಹಾರವಾಗಲಿವೆ. ಹಿಂದಿನ ಕೆಲಸಗಳಿಗೆ ಪುನಃ ಚಾಲನೆ ದೊರೆತು ಪ್ರಗತಿ ಪಥದಲ್ಲಿ ಸಾಗುವವು. ದುಡುಕುತನದಿಂದಾಗಿ ಉದ್ವೇಗಗೊಳ್ಳುವುದರಿಂದ ಸಮಸ್ಯೆಗಳು ತಲೆದೋರಬಹುದು. ದುರ್ಗಾಸ್ತೋತ್ರ ಪಠಿಸಿ.

ತುಲಾ

ಕೆಲಸ–ಕಾರ್ಯಗಳಲ್ಲಿ ಮಂದಗತಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ. ಹೊಸ ಕೆಲಸಗಳನ್ನು ಪ್ರಾರಂಭಿಸುವುದು ಬೇಡ. ಅಪವಾದಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಧೃತಿಗೆಡಬೇಕಾಗಿಲ್ಲ.

ವೃಶ್ಚಿಕ

ಕಣ್ಣು ಅಥವಾ ತಲೆನೋವು ತೀವ್ರವಾಗಿ ಕಾಡುವ ಸಾಧ್ಯತೆ. ವೃಥಾ ವಾದವಿವಾದದಿಂದಾಗಿ ಅನಗತ್ಯ ವೈರತ್ವ ಉಂಟಾಗಬಹುದು. ಅಯೋಗ್ಯರೊಂದಿಗೆ ಯಾವುದೇ ಕಾರಣಕ್ಕೂ ವ್ಯವಹಾರ ಬೇಡ.

ಧನು

ಆರ್ಥಿಕ ಸುಧಾರಣೆ. ಧಾರ್ಮಿಕ ಕಾರ್ಯಗಳಿಗೆ ಖರ್ಚುಮಾಡುವ ಸಾಧ್ಯತೆ ಇದ್ದು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಸಾಧಿಸಿ ಕೀರ್ತಿ ಸಂಪಾದನೆ. ಧೈರ್ಯದಿಂದ ಎದುರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಮಕರ

ಸ್ವಂತ ಉದ್ಯೋಗಿಗಳು ಹಾಗೂ ನೌಕರಿಯಲ್ಲಿರುವವರು ತಮ್ಮ ನಡೆ ನುಡಿ, ಕೆಲಸಗಳ ಬಗ್ಗೆ ಜಾಗ್ರತೆಯಿಂದಿರುವುದು ಸೂಕ್ತ. ಚಿಕ್ಕ ತಪ್ಪಿಗೂ ಮಹತ್ತರ ದಂಡ ತೆರಬೇಕಾದೀತು. ಉತ್ತಮ ಅವಕಾಶಗಳು ಬಂದೊದಗುವವು.

ಕುಂಭ

ಅಶುಭ ಸ್ವಪ್ನಗಳಿಂದಾಗಿ ಮಾನಸಿಕ ಚಂಚಲತೆ. ನಿರಾಸೆಯಿಂದಾಗಿ ದುಃಖದ ಅನುಭವ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಬೇರೆಯವರ ಅಪಹಾಸ್ಯಕ್ಕೆ ಒಳಗಾಗುವ ಸಾಧ್ಯತೆ. ಈಶ್ವರನ ಆರಾಧನೆ ಮಾಡಿ.

ಮೀನ

ಆದಾಯ ಮತ್ತು ಉಳಿಕೆಗಳಲ್ಲಿ ಪ್ರಗತಿಯಿರುವುದು. ಆರೋಗ್ಯದಲ್ಲಿ ಸುಧಾರಣೆ. ಸಂಬಂಧಿಗಳಲ್ಲಿ ವಂಶವೃದ್ಧಿಯ ಶುಭ ಸಂದೇಶ ಕೇಳಲಿದ್ದೀರಿ. ನಿಂತುಹೋದ ಕೆಲಸಗಳಿಗೆ ಮರುಚಾಲನೆ ದೊರೆಯುವ ಸಾಧ್ಯತೆ.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 22 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ