ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ
ದಕ್ಷಿಣಾಯನ ಪುಣ್ಯಕಾಲ
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಬುಧವಾರ, ವಿಶಾಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20

ಮೇಷ

ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ.

ವೃಷಭ

ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದ ಅಶುಭ ಸಮಾಚಾರ ಸಿಗಲಿದೆ.

ಮಿಥುನ

ಹಿರಿಯರೊಂದಿಗೆ ಶಾಂತತೆಯಿಂದ ವ್ಯವಹರಿಸುವುದು ಉತ್ತಮ. ವೃಥಾ ಖರ್ಚು. ಸಾಮಾಜಿಕ ಕಾರ್ಯಗಳಲ್ಲಿ ಹೊಂದಾಣಿಕೆ ಅವಶ್ಯ. ಕಿವಿ, ಗಂಟಲು ನೋವುಗಳು ನಿಮ್ಮನ್ನು ಪೀಡಿಸುವ ಸಾಧ್ಯತೆ.

ಕಟಕ

ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯಿಂದಾಗಿ ಉತ್ತಮ ಆದಾಯ. ಪ್ರತಿಯೊಂದು ವಿಷಯದಲ್ಲೂ ನೀವು ತೆಗೆದುಕೊಳ್ಳುವ ನಿರ್ಧಾರವೇ ಸರಿಯಾಗಿರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ.

ಸಿಂಹ

ಆರ್ಥಿಕ ಪ್ರಗತಿ ಉತ್ತಮಗೊಂಡು ಸಂತೋಷ ಮೂಡುವುದು. ಶತ್ರುಗಳ ವಿರುದ್ಧ ಜಯ. ಬಹಳ ದಿನಗಳ ಸಮಸ್ಯೆಗಳು ಪರಿಹಾರವಾಗಿ ನಿರಾಳತೆ ತಲೆದೋರುವುದು. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.

ಕನ್ಯಾ

ಸಂಕಷ್ಟಗಳು ಪರಿಹಾರವಾಗಲಿವೆ. ಹಿಂದಿನ ಕೆಲಸಗಳಿಗೆ ಪುನಃ ಚಾಲನೆ ದೊರೆತು ಪ್ರಗತಿ ಪಥದಲ್ಲಿ ಸಾಗುವವು. ದುಡುಕುತನದಿಂದಾಗಿ ಉದ್ವೇಗಗೊಳ್ಳುವುದರಿಂದ ಸಮಸ್ಯೆಗಳು ತಲೆದೋರಬಹುದು. ದುರ್ಗಾಸ್ತೋತ್ರ ಪಠಿಸಿ.

ತುಲಾ

ಕೆಲಸ–ಕಾರ್ಯಗಳಲ್ಲಿ ಮಂದಗತಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ. ಹೊಸ ಕೆಲಸಗಳನ್ನು ಪ್ರಾರಂಭಿಸುವುದು ಬೇಡ. ಅಪವಾದಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಧೃತಿಗೆಡಬೇಕಾಗಿಲ್ಲ.

ವೃಶ್ಚಿಕ

ಕಣ್ಣು ಅಥವಾ ತಲೆನೋವು ತೀವ್ರವಾಗಿ ಕಾಡುವ ಸಾಧ್ಯತೆ. ವೃಥಾ ವಾದವಿವಾದದಿಂದಾಗಿ ಅನಗತ್ಯ ವೈರತ್ವ ಉಂಟಾಗಬಹುದು. ಅಯೋಗ್ಯರೊಂದಿಗೆ ಯಾವುದೇ ಕಾರಣಕ್ಕೂ ವ್ಯವಹಾರ ಬೇಡ.

ಧನು

ಆರ್ಥಿಕ ಸುಧಾರಣೆ. ಧಾರ್ಮಿಕ ಕಾರ್ಯಗಳಿಗೆ ಖರ್ಚುಮಾಡುವ ಸಾಧ್ಯತೆ ಇದ್ದು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಸಾಧಿಸಿ ಕೀರ್ತಿ ಸಂಪಾದನೆ. ಧೈರ್ಯದಿಂದ ಎದುರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಮಕರ

ಸ್ವಂತ ಉದ್ಯೋಗಿಗಳು ಹಾಗೂ ನೌಕರಿಯಲ್ಲಿರುವವರು ತಮ್ಮ ನಡೆ ನುಡಿ, ಕೆಲಸಗಳ ಬಗ್ಗೆ ಜಾಗ್ರತೆಯಿಂದಿರುವುದು ಸೂಕ್ತ. ಚಿಕ್ಕ ತಪ್ಪಿಗೂ ಮಹತ್ತರ ದಂಡ ತೆರಬೇಕಾದೀತು. ಉತ್ತಮ ಅವಕಾಶಗಳು ಬಂದೊದಗುವವು.

ಕುಂಭ

ಅಶುಭ ಸ್ವಪ್ನಗಳಿಂದಾಗಿ ಮಾನಸಿಕ ಚಂಚಲತೆ. ನಿರಾಸೆಯಿಂದಾಗಿ ದುಃಖದ ಅನುಭವ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಬೇರೆಯವರ ಅಪಹಾಸ್ಯಕ್ಕೆ ಒಳಗಾಗುವ ಸಾಧ್ಯತೆ. ಈಶ್ವರನ ಆರಾಧನೆ ಮಾಡಿ.

ಮೀನ

ಆದಾಯ ಮತ್ತು ಉಳಿಕೆಗಳಲ್ಲಿ ಪ್ರಗತಿಯಿರುವುದು. ಆರೋಗ್ಯದಲ್ಲಿ ಸುಧಾರಣೆ. ಸಂಬಂಧಿಗಳಲ್ಲಿ ವಂಶವೃದ್ಧಿಯ ಶುಭ ಸಂದೇಶ ಕೇಳಲಿದ್ದೀರಿ. ನಿಂತುಹೋದ ಕೆಲಸಗಳಿಗೆ ಮರುಚಾಲನೆ ದೊರೆಯುವ ಸಾಧ್ಯತೆ.

Spread the love
  • Related Posts

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಸನ್ನಿಧಿಯಲ್ಲಿ ಗಣಪನ ಅಲಂಕಾರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ…

    Spread the love

    You Missed

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 5 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 8 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 14 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 27 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 13 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 17 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ