ಇಂದಿನ ರಾಶಿಫಲ ಯಾರಿಗೆ ಶುಭ ಯಾರಿಗೆ ಆಶುಭ ಫಲ!

ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ
ದಕ್ಷಿಣಾಯನ ಪುಣ್ಯಕಾಲ
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಬುಧವಾರ, ವಿಶಾಖ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:30 ರಿಂದ 2:05
ಗುಳಿಕಕಾಲ: ಬೆಳಗ್ಗೆ 10:55 ರಿಂದ 12:30
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:20

ಮೇಷ

ಅನಾವಶ್ಯಕ ಖರ್ಚು ಸಂಭವಿಸಬಹುದು. ಮಾನಸಿಕ ಉದ್ವೇಗದಿಂದ ಉದ್ಯೋಗದಲ್ಲಿ ತೊಡಕು. ಅಜೀರ್ಣ ಮುಂತಾದ ತೊಂದರೆ ಬಂದೊದಗಬಹುದು. ನೀರು ಆಹಾರದ ವಿಷಯದಲ್ಲಿ ಜಾಗೃತೆ ಅಗತ್ಯ.

ವೃಷಭ

ಮದುವೆ ಮಂಗಳಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ನೌಕರಸ್ಥರಿಗೆ ಬಡ್ತಿಯೊಂದಿಗೆ ಉದ್ಯೋಗದಲ್ಲಿ ಬದಲಾವಣೆ. ಆರ್ಥಿಕ ಅನುಕೂಲತೆ ಒದಗಿಬರುವುದು. ಬಂಧುಗಳಿಂದ ಅಶುಭ ಸಮಾಚಾರ ಸಿಗಲಿದೆ.

ಮಿಥುನ

ಹಿರಿಯರೊಂದಿಗೆ ಶಾಂತತೆಯಿಂದ ವ್ಯವಹರಿಸುವುದು ಉತ್ತಮ. ವೃಥಾ ಖರ್ಚು. ಸಾಮಾಜಿಕ ಕಾರ್ಯಗಳಲ್ಲಿ ಹೊಂದಾಣಿಕೆ ಅವಶ್ಯ. ಕಿವಿ, ಗಂಟಲು ನೋವುಗಳು ನಿಮ್ಮನ್ನು ಪೀಡಿಸುವ ಸಾಧ್ಯತೆ.

ಕಟಕ

ವ್ಯವಹಾರಗಳಲ್ಲಿ ಉತ್ತಮ ಪ್ರಗತಿಯಿಂದಾಗಿ ಉತ್ತಮ ಆದಾಯ. ಪ್ರತಿಯೊಂದು ವಿಷಯದಲ್ಲೂ ನೀವು ತೆಗೆದುಕೊಳ್ಳುವ ನಿರ್ಧಾರವೇ ಸರಿಯಾಗಿರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ನಿರೀಕ್ಷೆ.

ಸಿಂಹ

ಆರ್ಥಿಕ ಪ್ರಗತಿ ಉತ್ತಮಗೊಂಡು ಸಂತೋಷ ಮೂಡುವುದು. ಶತ್ರುಗಳ ವಿರುದ್ಧ ಜಯ. ಬಹಳ ದಿನಗಳ ಸಮಸ್ಯೆಗಳು ಪರಿಹಾರವಾಗಿ ನಿರಾಳತೆ ತಲೆದೋರುವುದು. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.

ಕನ್ಯಾ

ಸಂಕಷ್ಟಗಳು ಪರಿಹಾರವಾಗಲಿವೆ. ಹಿಂದಿನ ಕೆಲಸಗಳಿಗೆ ಪುನಃ ಚಾಲನೆ ದೊರೆತು ಪ್ರಗತಿ ಪಥದಲ್ಲಿ ಸಾಗುವವು. ದುಡುಕುತನದಿಂದಾಗಿ ಉದ್ವೇಗಗೊಳ್ಳುವುದರಿಂದ ಸಮಸ್ಯೆಗಳು ತಲೆದೋರಬಹುದು. ದುರ್ಗಾಸ್ತೋತ್ರ ಪಠಿಸಿ.

ತುಲಾ

ಕೆಲಸ–ಕಾರ್ಯಗಳಲ್ಲಿ ಮಂದಗತಿ. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ. ಹೊಸ ಕೆಲಸಗಳನ್ನು ಪ್ರಾರಂಭಿಸುವುದು ಬೇಡ. ಅಪವಾದಕ್ಕೆ ತುತ್ತಾಗುವ ಸಾಧ್ಯತೆ ಇದ್ದು ಧೃತಿಗೆಡಬೇಕಾಗಿಲ್ಲ.

ವೃಶ್ಚಿಕ

ಕಣ್ಣು ಅಥವಾ ತಲೆನೋವು ತೀವ್ರವಾಗಿ ಕಾಡುವ ಸಾಧ್ಯತೆ. ವೃಥಾ ವಾದವಿವಾದದಿಂದಾಗಿ ಅನಗತ್ಯ ವೈರತ್ವ ಉಂಟಾಗಬಹುದು. ಅಯೋಗ್ಯರೊಂದಿಗೆ ಯಾವುದೇ ಕಾರಣಕ್ಕೂ ವ್ಯವಹಾರ ಬೇಡ.

ಧನು

ಆರ್ಥಿಕ ಸುಧಾರಣೆ. ಧಾರ್ಮಿಕ ಕಾರ್ಯಗಳಿಗೆ ಖರ್ಚುಮಾಡುವ ಸಾಧ್ಯತೆ ಇದ್ದು ಕೈಗೊಳ್ಳುವ ಕಾರ್ಯದಲ್ಲಿ ಯಶಸ್ಸು ಸಾಧಿಸಿ ಕೀರ್ತಿ ಸಂಪಾದನೆ. ಧೈರ್ಯದಿಂದ ಎದುರಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಮಕರ

ಸ್ವಂತ ಉದ್ಯೋಗಿಗಳು ಹಾಗೂ ನೌಕರಿಯಲ್ಲಿರುವವರು ತಮ್ಮ ನಡೆ ನುಡಿ, ಕೆಲಸಗಳ ಬಗ್ಗೆ ಜಾಗ್ರತೆಯಿಂದಿರುವುದು ಸೂಕ್ತ. ಚಿಕ್ಕ ತಪ್ಪಿಗೂ ಮಹತ್ತರ ದಂಡ ತೆರಬೇಕಾದೀತು. ಉತ್ತಮ ಅವಕಾಶಗಳು ಬಂದೊದಗುವವು.

ಕುಂಭ

ಅಶುಭ ಸ್ವಪ್ನಗಳಿಂದಾಗಿ ಮಾನಸಿಕ ಚಂಚಲತೆ. ನಿರಾಸೆಯಿಂದಾಗಿ ದುಃಖದ ಅನುಭವ. ಸಂಗಾತಿಯ ಆರೋಗ್ಯದ ಬಗ್ಗೆ ಗಮನವಿರಲಿ. ಬೇರೆಯವರ ಅಪಹಾಸ್ಯಕ್ಕೆ ಒಳಗಾಗುವ ಸಾಧ್ಯತೆ. ಈಶ್ವರನ ಆರಾಧನೆ ಮಾಡಿ.

ಮೀನ

ಆದಾಯ ಮತ್ತು ಉಳಿಕೆಗಳಲ್ಲಿ ಪ್ರಗತಿಯಿರುವುದು. ಆರೋಗ್ಯದಲ್ಲಿ ಸುಧಾರಣೆ. ಸಂಬಂಧಿಗಳಲ್ಲಿ ವಂಶವೃದ್ಧಿಯ ಶುಭ ಸಂದೇಶ ಕೇಳಲಿದ್ದೀರಿ. ನಿಂತುಹೋದ ಕೆಲಸಗಳಿಗೆ ಮರುಚಾಲನೆ ದೊರೆಯುವ ಸಾಧ್ಯತೆ.

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 3 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 10 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 12 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ