ಬೆಂಗಳೂರು ಗಲಭೆಯಲ್ಲಿ ಮೂವರ ಬಲಿ! 100ಕ್ಕೂ ಅಧಿಕ ಗಲಭೆಕೋರರ ಬಂಧನ! ಬೆಂಗಳೂರಿನ ಕೆಲವೆಡೆ ಕರ್ಫ್ಯೂ ಜಾರಿ

ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ,ಬೆಂಕಿ ಹಚ್ಚಿದ ಪ್ರಕರಣವು ಉದ್ವಿಘ್ನತೆಗೆ ತಿರುಗಿದ್ದು, ಹಿಂಸಾಚಾರಕ್ಕೆ ತಿರುಗಿದ ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.

ಶಾಸಕರ ಸಂಬಂಧಿಯೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪಮಾಡಿ ಪುಂಡರ ತಂಡ ಪೂರ್ವ ನಿಯೋಜಿತ ಕೃತ್ಯನಡೆಸಿ ಸಿಕ್ಕ ಸಿಕ್ಕಲ್ಲಿ ಕಲ್ಲು ತೂರಾಟ ನಡೆಸಿ ಕೆಲವು ಮನೆಗಳಿಗೆ, ಸರಕಾರಿ ವಾಹನಗಳಿಗೆ, ಅಂಗಡಿಗಳಿಗೆ, ಪತ್ರಕರ್ತರ ವಾಹನಗಳ ಮೇಲೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.

ಪತ್ರಕರ್ತರು, ಜನಪ್ರತಿನಿಧಿಗಳ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ ಪುಂಡರ ತಂಡ ಪೋಲೀಸರ ಮೇಲೂ ಹಲ್ಲೆ ನಡೆಸಿ ದಾಂದಲೆ ನಡೆಸಿದ್ದಾರೆ.

ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎನ್ನಲಾದ ಆರೋಪಿ ನವೀನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ನವೀನ್‌ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಘಟನೆ ಸಂಬಂಧ 147 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲ ಸಂಘಟನೆಗೆ ಸೇರಿದವರೆಂದು ತಿಳಿದು ಬಂದಿದೆ. ಪೊಲೀಸರ ಹಾಗೂ ಉದ್ರಿಕ್ತ ಗಲಭೆಕೋರರ ನಡುವೆ ನಡೆದ ಚಕಮಕಿಯಲ್ಲಿ ಪೊಲೀಸ್​ ಫೈರಿಂಗ್​ ಮೂವರು ಬಲಿಯಾಗಿದ್ದಾರೆನ್ನಲಾಗಿದ್ದು, ಪೊಲೀಸರ ಗುಂಡೇಟು ತಿಂದು ಗಾಯಗೊಂಡಿರುವ ಕೆಲ ಆರೋಪಿಗಳು ಚಿಕಿತ್ಸೆ ಪಡೆಯದೆ ಎಸ್ಕೇಪ್ ಆಗಿದ್ದಾರೆ.

50ಕ್ಕೂ ಅಧಿಕ ಬೈಕ್, 06ಕಾರು, ಪೋಲೀಸ್ ವಾಹನವನ್ನು ಸುಟ್ಟು ಭಸ್ಮಗೊಳಿಸಿದ ಪುಂಡರು

ಇನ್ನು ಘಟನೆಯಲ್ಲಿ 80ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 120,307,195,148 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೇವರ ಜೀವನಹಳ್ಳಿ ಮತ್ತು ಕೆ.ಜೆ.ಹಳ್ಳಿ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    • By admin
    • July 13, 2026
    • 5 views
    ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    • By admin
    • July 12, 2026
    • 10 views
    ನಾರಾವಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಹಳೆಕೋಟೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ತಲಾ ರೂ.2 ಕೋಟಿ; ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಕೃತಜ್ಞತೆ.

    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    • By admin
    • July 12, 2026
    • 19 views
    ಬಳಂಜ- ಸುದೆಗುಂಡಿ ಸಂಪರ್ಕ ರಸ್ತೆ ಕಾಂಕ್ರೀಟಿಕರಣ: ಶಾಸಕ ಹರೀಶ್ ಪೂಂಜಾರವರಿಂದ ಶಿಲಾನ್ಯಾಸ:

    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    • By admin
    • July 12, 2026
    • 38 views
    ಎತ್ತಿನಹೊಳೆ ಯೋಜನೆಯ ಪೈಪ್‌ಲೈನ್ ಸ್ಫೋಟಗೊಂಡು ನೂರು ಅಡಿ ಎತ್ತರಕ್ಕೆ ಚಿಮ್ಮಿದ ನೀರು

    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    • By admin
    • July 12, 2026
    • 87 views
    ವಿದ್ಯಾರ್ಥಿಗಳಿಗೆ ನೇಜಿ ನಾಟಿ ಪ್ರಾತ್ಯಕ್ಷಿಕೆ: ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ

    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

    • By admin
    • July 11, 2026
    • 37 views
    ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ