ಬೆಂಗಳೂರು ಗಲಭೆಯಲ್ಲಿ ಮೂವರ ಬಲಿ! 100ಕ್ಕೂ ಅಧಿಕ ಗಲಭೆಕೋರರ ಬಂಧನ! ಬೆಂಗಳೂರಿನ ಕೆಲವೆಡೆ ಕರ್ಫ್ಯೂ ಜಾರಿ

ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ​ ಶ್ರೀನಿವಾಸ್​ ಅವರ ಮನೆ ಮೇಲೆ ಕಲ್ಲು ತೂರಾಟ,ಬೆಂಕಿ ಹಚ್ಚಿದ ಪ್ರಕರಣವು ಉದ್ವಿಘ್ನತೆಗೆ ತಿರುಗಿದ್ದು, ಹಿಂಸಾಚಾರಕ್ಕೆ ತಿರುಗಿದ ಈ ಘಟನೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ.

ಶಾಸಕರ ಸಂಬಂಧಿಯೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಸ್ಥಾಪಕರಾದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿರುವ ಆರೋಪಮಾಡಿ ಪುಂಡರ ತಂಡ ಪೂರ್ವ ನಿಯೋಜಿತ ಕೃತ್ಯನಡೆಸಿ ಸಿಕ್ಕ ಸಿಕ್ಕಲ್ಲಿ ಕಲ್ಲು ತೂರಾಟ ನಡೆಸಿ ಕೆಲವು ಮನೆಗಳಿಗೆ, ಸರಕಾರಿ ವಾಹನಗಳಿಗೆ, ಅಂಗಡಿಗಳಿಗೆ, ಪತ್ರಕರ್ತರ ವಾಹನಗಳ ಮೇಲೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.

ಪತ್ರಕರ್ತರು, ಜನಪ್ರತಿನಿಧಿಗಳ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ ಪುಂಡರ ತಂಡ ಪೋಲೀಸರ ಮೇಲೂ ಹಲ್ಲೆ ನಡೆಸಿ ದಾಂದಲೆ ನಡೆಸಿದ್ದಾರೆ.

ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದಾನೆ ಎನ್ನಲಾದ ಆರೋಪಿ ನವೀನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಈ ಸಂಬಂಧ ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದ್ದು, ನವೀನ್‌ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಘಟನೆ ಸಂಬಂಧ 147 ಆರೋಪಿಗಳನ್ನು ಬಂಧಿಸಲಾಗಿದ್ದು, ಕೆಲ ಸಂಘಟನೆಗೆ ಸೇರಿದವರೆಂದು ತಿಳಿದು ಬಂದಿದೆ. ಪೊಲೀಸರ ಹಾಗೂ ಉದ್ರಿಕ್ತ ಗಲಭೆಕೋರರ ನಡುವೆ ನಡೆದ ಚಕಮಕಿಯಲ್ಲಿ ಪೊಲೀಸ್​ ಫೈರಿಂಗ್​ ಮೂವರು ಬಲಿಯಾಗಿದ್ದಾರೆನ್ನಲಾಗಿದ್ದು, ಪೊಲೀಸರ ಗುಂಡೇಟು ತಿಂದು ಗಾಯಗೊಂಡಿರುವ ಕೆಲ ಆರೋಪಿಗಳು ಚಿಕಿತ್ಸೆ ಪಡೆಯದೆ ಎಸ್ಕೇಪ್ ಆಗಿದ್ದಾರೆ.

50ಕ್ಕೂ ಅಧಿಕ ಬೈಕ್, 06ಕಾರು, ಪೋಲೀಸ್ ವಾಹನವನ್ನು ಸುಟ್ಟು ಭಸ್ಮಗೊಳಿಸಿದ ಪುಂಡರು

ಇನ್ನು ಘಟನೆಯಲ್ಲಿ 80ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 120,307,195,148 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೇವರ ಜೀವನಹಳ್ಳಿ ಮತ್ತು ಕೆ.ಜೆ.ಹಳ್ಳಿ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಿ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು ಜನ ಜೀವನ ಅಸ್ಥವ್ಯಸ್ಥವಾಗಿದೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ