ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ – ಶೀಘ್ರವೇ ಹೊಸ ಕಾರ್ಮಿಕ ಸಂಹಿತೆ

ನವದೆಹಲಿ: ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಮುಂದಿನ ಹಣಕಾಸು ವರ್ಷದಿಂದ ಭಾರತವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಹೊಸ ಸಂಹಿತೆ ಅಡಿಯಲ್ಲಿ ಉದ್ಯೋಗ, ಕೆಲಸದ ಸಂಸ್ಕೃತಿಗೆ ಸಂಬಂಧಿಸಿದ ಹಲವಾರು ಅಂಶಗಳು ಬದಲಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ವಾರದಲ್ಲಿ 5 ದಿನಗಳ ಕೆಲಸ ಇರುತ್ತದೆ. ಆದರೆ ಹೊಸ ಸಂಹಿತೆಯಲ್ಲಿ ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಲು ಅವಕಾಶ ಇರಲಿದೆ. ಆದರೆ 48 ಗಂಟೆಗಳ ಸಾಪ್ತಾಹಿಕ ಕೆಲಸದ ಅವಶ್ಯಕತೆಯನ್ನು ಪೂರೈಸಬೇಕಾಗಿರುವುದರಿಂದ, ನಾಲ್ಕು ದಿನಗಳಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ ಎಂದು ಕಾರ್ಮಿಕ ಇಲಾಖೆ ಸ್ಪಷ್ಟಪಡಿಸಿದೆ.

ಕೈಗೆ ಕಡಿಮೆ ಸಂಬಳ, ಪಿಎಫ್ ಹೆಚ್ಚಳ
ಹೊಸ ಸಂಹಿತೆಗಳು ಜಾರಿಗೆ ಬಂದರೆ, ನೌಕರರ ಕೈಗೆ ಸಿಗುವ ಸಂಬಳದ ಮೊತ್ತ ಕಡಿಮೆಯಾಗಲಿದ್ದು, ಭವಿಷ್ಯನಿಧಿ ಖಾತೆಗೆ (ಪಿಎಫ್) ಜಮಾ ಆಗುವ ಮೊತ್ತ ಹೆಚ್ಚಳವಾಗಲಿದೆ. ಎಲ್ಲ ಬಗೆಯ ಭತ್ಯೆಗಳು ನೌಕರರ ಒಟ್ಟು ವೇತನದ ಶೇಕಡ 50ರಷ್ಟನ್ನು ಮೀರುವಂತಿಲ್ಲ. ಅಂದರೆ ಒಟ್ಟು ಸಂಬಳದಲ್ಲಿ ಶೇಕಡ 50ರಷ್ಟು ಭಾಗವು ಮೂಲ ವೇತನ ಆಗಿರಬೇಕು. ಪಿಎಫ್ ಖಾತೆಗೆ ವರ್ಗಾವಣೆ ಆಗುವ ಮೊತ್ತವನ್ನು ನೌಕರರ ಮೂಲವೇತನದ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ.

ಉದ್ಯೋಗಿಯ ವೇತನ ತಿಂಗಳಿಗೆ 50,000 ರೂ. ಆಗಿದ್ದರೆ, ಅವರ ಮೂಲ ವೇತನ 25,000 ರೂ. ಆಗಬಹುದು. ಉಳಿದ 25,000 ರೂ. ಭತ್ಯೆಗಳಿಗೆ ಪರಿಗಣಿಸಲಾಗುವುದು.

ಕೇಂದ್ರ ಸರ್ಕಾರವು ಈಗಾಗಲೇ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ನಿಯಮಗಳನ್ನು ಅಂತಿಮಗೊಳಿಸಿದೆ. ಈಗ ಏನಿದ್ದರೂ ರಾಜ್ಯಗಳು ತಮ್ಮ ಭಾಗದಲ್ಲಿ ನಿಯಮಗಳನ್ನು ರೂಪಿಸಬೇಕಾಗಿದೆ. 2021ರ ಫೆಬ್ರವರಿಯಲ್ಲಿ ಈ ಸಂಹಿತೆಗಳಿಗೆ ಕರಡು ನಿಯಮಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಪೂರ್ಣಗೊಳಿಸಿದೆ. ಇವುಗಳಿಗೆ ಸಂಬಂಧಿಸಿದ ಬಹುತೇಕ ರಾಜ್ಯ ಸರ್ಕಾರಗಳು ಅಧಿಸೂಚನೆಯಲ್ಲಿ ಪ್ರಕಟಿಸಿವೆ. ಹೀಗಾಗಿ 2022-23ನೇ ಹಣಕಾಸು ವರ್ಷದಲ್ಲಿ ಕಾಯ್ದೆಗಳು ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ದೇಶದ 13 ರಾಜ್ಯಗಳು ಕರಡು ನಿಯಮಗಳನ್ನು ಮೊದಲೇ ಪ್ರಕಟಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Spread the love
  • Related Posts

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಉಜಿರೆ: ಉಜಿರೆಯ ಮಾಡ ಕಾಂಪ್ಲೆಕ್ಸ್‌ನಲ್ಲಿ ಕಳೆದ ಹಲವು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ, ಗ್ರಾಹಕರ ನಂಬಿಕೆಗೆ ಹೆಸರುವಾಸಿಯಾದ ಮತ್ತು ಸದಾ ನಗುಮುಖದ ಸೇವೆ ನೀಡುತ್ತಿರುವ ಸುಧಾಕರ ಆಚಾರ್ಯ ಅವರ ಮಾಲಕತ್ವದ ಶುಭ ಜ್ಯುವೆಲ್ಲರ್ಸ್ & ವರ್ಕ್ಸ್ ವತಿಯಿಂದ ಗ್ರಾಹಕರಿಗಾಗಿ “ಶುಭ-ಗೋಲ್ಡ್” ಯೋಜನೆ ಆರಂಭಗೊಂಡಿದೆ.…

    Spread the love

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಗುರುವಾಯನಕೆರೆ: ನೀಟ್, ಜೆಇಇ ಮೈನ್ಸ್ ಮತ್ತು ಅಡ್ವಾನ್ಸ್, ಸಿಇಟಿ, ಬಿಎಸ್ಸಿ ಅಗ್ರಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಉದ್ದೇಶಿಸಿರುವ ವಿದ್ಯಾರ್ಥಿಗಳಿಗೆ ಒಂದು ಸ್ವರ್ಣಾವಕಾಶ. ನೂರಾರು ವಿದ್ಯಾರ್ಥಿಗಳನ್ನು ಜಗತ್ತಿನ ಶ್ರೇಷ್ಠ ಏಮ್ಸ್, ಜಿಸ್ಟ್ರಾರ್, ಐಐಟಿ, ಐಐಐಟಿ, ಎನ್ ಐಐಟಿ ಹಾಗೂ ಉತ್ಕೃಷ್ಟ…

    Spread the love

    You Missed

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 134 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 36 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 79 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 113 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 47 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 625 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು