ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ – ಶೀಘ್ರವೇ ಹೊಸ ಕಾರ್ಮಿಕ ಸಂಹಿತೆ

ನವದೆಹಲಿ: ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಮುಂದಿನ ಹಣಕಾಸು ವರ್ಷದಿಂದ ಭಾರತವು 4 ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಈ ಹೊಸ ಸಂಹಿತೆ ಅಡಿಯಲ್ಲಿ ಉದ್ಯೋಗ, ಕೆಲಸದ ಸಂಸ್ಕೃತಿಗೆ ಸಂಬಂಧಿಸಿದ ಹಲವಾರು ಅಂಶಗಳು ಬದಲಾಗಬಹುದು. ಸರ್ಕಾರಿ ಉದ್ಯೋಗಿಗಳಿಗೆ ವಾರದಲ್ಲಿ 5 ದಿನಗಳ ಕೆಲಸ ಇರುತ್ತದೆ. ಆದರೆ ಹೊಸ ಸಂಹಿತೆಯಲ್ಲಿ ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಲು ಅವಕಾಶ ಇರಲಿದೆ. ಆದರೆ 48 ಗಂಟೆಗಳ ಸಾಪ್ತಾಹಿಕ ಕೆಲಸದ ಅವಶ್ಯಕತೆಯನ್ನು ಪೂರೈಸಬೇಕಾಗಿರುವುದರಿಂದ, ನಾಲ್ಕು ದಿನಗಳಲ್ಲಿ 12 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ ಎಂದು ಕಾರ್ಮಿಕ ಇಲಾಖೆ ಸ್ಪಷ್ಟಪಡಿಸಿದೆ.

ಕೈಗೆ ಕಡಿಮೆ ಸಂಬಳ, ಪಿಎಫ್ ಹೆಚ್ಚಳ
ಹೊಸ ಸಂಹಿತೆಗಳು ಜಾರಿಗೆ ಬಂದರೆ, ನೌಕರರ ಕೈಗೆ ಸಿಗುವ ಸಂಬಳದ ಮೊತ್ತ ಕಡಿಮೆಯಾಗಲಿದ್ದು, ಭವಿಷ್ಯನಿಧಿ ಖಾತೆಗೆ (ಪಿಎಫ್) ಜಮಾ ಆಗುವ ಮೊತ್ತ ಹೆಚ್ಚಳವಾಗಲಿದೆ. ಎಲ್ಲ ಬಗೆಯ ಭತ್ಯೆಗಳು ನೌಕರರ ಒಟ್ಟು ವೇತನದ ಶೇಕಡ 50ರಷ್ಟನ್ನು ಮೀರುವಂತಿಲ್ಲ. ಅಂದರೆ ಒಟ್ಟು ಸಂಬಳದಲ್ಲಿ ಶೇಕಡ 50ರಷ್ಟು ಭಾಗವು ಮೂಲ ವೇತನ ಆಗಿರಬೇಕು. ಪಿಎಫ್ ಖಾತೆಗೆ ವರ್ಗಾವಣೆ ಆಗುವ ಮೊತ್ತವನ್ನು ನೌಕರರ ಮೂಲವೇತನದ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ.

ಉದ್ಯೋಗಿಯ ವೇತನ ತಿಂಗಳಿಗೆ 50,000 ರೂ. ಆಗಿದ್ದರೆ, ಅವರ ಮೂಲ ವೇತನ 25,000 ರೂ. ಆಗಬಹುದು. ಉಳಿದ 25,000 ರೂ. ಭತ್ಯೆಗಳಿಗೆ ಪರಿಗಣಿಸಲಾಗುವುದು.

ಕೇಂದ್ರ ಸರ್ಕಾರವು ಈಗಾಗಲೇ ನಾಲ್ಕು ಕಾರ್ಮಿಕ ಸಂಹಿತೆಗಳ ಅಡಿಯಲ್ಲಿ ನಿಯಮಗಳನ್ನು ಅಂತಿಮಗೊಳಿಸಿದೆ. ಈಗ ಏನಿದ್ದರೂ ರಾಜ್ಯಗಳು ತಮ್ಮ ಭಾಗದಲ್ಲಿ ನಿಯಮಗಳನ್ನು ರೂಪಿಸಬೇಕಾಗಿದೆ. 2021ರ ಫೆಬ್ರವರಿಯಲ್ಲಿ ಈ ಸಂಹಿತೆಗಳಿಗೆ ಕರಡು ನಿಯಮಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಪೂರ್ಣಗೊಳಿಸಿದೆ. ಇವುಗಳಿಗೆ ಸಂಬಂಧಿಸಿದ ಬಹುತೇಕ ರಾಜ್ಯ ಸರ್ಕಾರಗಳು ಅಧಿಸೂಚನೆಯಲ್ಲಿ ಪ್ರಕಟಿಸಿವೆ. ಹೀಗಾಗಿ 2022-23ನೇ ಹಣಕಾಸು ವರ್ಷದಲ್ಲಿ ಕಾಯ್ದೆಗಳು ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ದೇಶದ 13 ರಾಜ್ಯಗಳು ಕರಡು ನಿಯಮಗಳನ್ನು ಮೊದಲೇ ಪ್ರಕಟಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

Spread the love
  • Related Posts

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    You Missed

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 6 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 21 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 6 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 16 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!