![](https://kalanirnayanews.com/wp-content/uploads/2020/07/1590597003451-1.jpg)
ಮಂಗಳೂರು: ರಾಜ್ಯ ಸರಕಾರವು ಕರಾವಳಿಯ 5 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
![](https://kalanirnayanews.com/wp-content/uploads/2020/08/Screenshot_2020_0824_200535-749x1024.png)
ವರ್ಗಾವಣೆಯಾಗಿರುವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗಳು.
🔹ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕ್ ಜಿ. ಯವರನ್ನು ಪುತ್ತೂರು ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಪುತ್ತೂರಿನಲ್ಲಿ ಚೆಲುವಯ್ಯ ಅವರು ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
🔸ಉಡುಪಿ ನಗರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸದಾಶಿವ ರಾಮಪ್ಪ ಗವರೋಜರನ್ನು ಕುಂದಾಪುರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
🔹ಕುಂದಾಪುರ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹರೀಶ್ ಆರ್ ರನ್ನು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
🔸ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೌನೇಶ್ ರನ್ನು ಚಿಕ್ಕಮಗಳೂರು ನಗರ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.
🔹ಉತ್ತರ ಕನ್ನಡ ಜಿಲ್ಲೆಯ ಡಿ.ಎಸ್.ಬಿ ತಟ್ಟಿಹಳ್ಳಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಶ್ರೀ ಶಾನಭಾಗರನ್ನು ಶಿರಸಿ ಹೊಸಮಾರುಕಟ್ಟೆ ಠಾಣೆ (ಅಪರಾಧ ವಿಭಾಗ) ಕ್ಕೆ ವರ್ಗಾವಣೆ ಮಾಡಲಾಗಿದೆ.
![](https://103.180.45.14/kalanirnaya1/wp-content/uploads/2020/08/IMG_20200823_130420-compressed.jpg)