ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ

ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ ಹೇಳಿದರು.

ದಿಶಾಭಾರತ್ ವತಿಯಿಂದ 77 ನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಲಾಗುತ್ತಿರುವ ನನ್ನ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶ್ರೀನಿವಾಸ್ ಬಳ್ಳಿ, ಭಾರತಕ್ಕೆ ಯುಗಯುಗಾಂತರ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ನಿರಂತರವಾಗಿ ಪರಕೀಯರ ಆಕ್ರಮಣದ ನಂತರವೂ ಭಾರತ ಗಟ್ಟಿಯಾಗಿ ನಿಂತಿರುವುದು ಅದರ ನೈಜ ಶಕ್ತಿಯನ್ನು ತೋರಿಸಿದೆ. ಈಗ ದೇಶಕ್ಕೊಂದು ದಿಶೆ ಬೇಕಾಗಿದೆ ಹಾಗಿದ್ದಾಗ ಮಾತ್ರ ಅದು ಉಳಿಯಲಿದೆ. ಸದ್ಯ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಹಜವಾಗಿ ಸುಂದರವಾಗಿರುವ ದೇಶವನ್ನು ಹಾಳು ಮಾಡುವ ಉದ್ದೇಶ ಸಹ ಹಲವರಿಗೆ. ಆದರೆ ಭಾರತ ಭಾರತವಾಗಿಯೇ ಉಳಿದಿದೆ. ಇಡೀ ಭಾರತ ಮೇಲೆ ಇತರ ದೇಶಗಳು ಆಕ್ರಮಣ ಮಾಡಿದರೂ ಹಿಮ್ಮೆಟಿಸಿದ ಕೀರ್ತಿ ಭಾರತಕ್ಕಿದೆ ಎಂದು ಹೇಳಿದರು. ಆಹಾರದ ವಿಷಯದಲ್ಲಿ ಸ್ವಾಲಂಭಿಯಾಗಿರುವ ಭಾರತ ಕೋಟ್ಯಂತರ ಕ್ವಿಂಟಲ್ ಅಕ್ಕಿಯನ್ನು ಇತರ ದೇಶಗಳಿಗೆ ಒದಗಿಸುತ್ತಿದ್ದೇವೆ. ಕೊರೋನಾ ಸಮಯದಲ್ಲಿ ಲಸಿಕೆ ಬೇಡಿಕೆಯನ್ನು ಜಗತ್ತಿಗೆ ಪೂರೈಸಿದೆ. ಡಿಜಿಟಲ್ ಕ್ರಾಂತಿಯಾಗಿರುವುದು ಸಹ ನಮ್ಮ ಭಾರತದಲ್ಲಿ. ಮುಂದುವರೆದ ದೇಶಗಳ ಮದ್ಯೆ ಭಾರತ ತಲೆ ಎತ್ತಿ ನಿಂತಿದೆ. ಚಂದ್ರಯಾನ ಮಂಗಳಯಾನ ಆದಿತ್ಯಯಾನವನ್ನು ಪೂರೈಸಿ ಹಲವು ಮುಂದುವರೆದ ದೇಶಗಳ ಮಧ್ಯೆ ತಲೆ ಘನತೆ ಮೆರೆದಿದೆ ಎಂದರು. ಹಿತಮಿತವಾಗಿ ಆಹಾರ ಸ್ವೀಕರಿಸುವಿಕೆ ನಮ್ಮ ಸಮಸ್ಕೃತಿಯಲ್ಲಿಯೇ ಇದೆ. ಯೋಗದ ವಿಷಯದಲ್ಲಿ ಭಾರತ ವಿಶ್ವ ಗುರುವಾಗಿದೆ. ನಮಗೆ ದೊಡ್ಡ ಗುರು ಪರಂಪರೆ ಸಹ ಬೆನ್ನೆಲುಬಾಗಿ ಇದೆ. ಸದ್ಯ ಈ ದೇಶಕ್ಕೊಂದು ದಿಶೆ ಬೇಕಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ದಿಶೆ ತೋರಿಸುವ ಅಗತ್ಯವಿದೆ. ಅರಿವನ್ನು ತೋರಿಸಬೇಕಿದೆ. ಆ ಕೆಲಸವನ್ನು ದಿಶಾ ಭಾರತ್ ಸಂಸ್ಥೆ ಮಾಡುತ್ತಿದೆ. ಕಳೆದ 20 ವರ್ಷಗಳಿಂದ ಸಾಕಷ್ಟು ಯುವಕರನ್ನು ಜಾಗೃತಿಗೊಳಿಸುವ ಕಾರ್ಯ ಮಾಡುತ್ತಿದೆ. ಮೈ ಭಾರತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಂದುವರೆಸಿರುವುದು ಅದರ ಬದ್ಧತೆಗೆ ಸಾಕ್ಷಿಯಾಗಿದೆ. ಹಾಗಾಗಿ ಇಂತಹ ಕಾರ್ಯಕ್ರಮ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಶ್ರೀನಿವಾಸ್ ಬಳ್ಳಿ ಹೇಳಿದರು.

ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿಯ ಇತಿಹಾಸದ ಪ್ರೊಫೆಸರ್ ಡಾ. ವಿ ಅನುರಾಧ ಮಾತನಾಡಿ ಅನಾದಿ ಕಾಲದಲ್ಲಿ 16 ಸಾವಿರ ಮೈಲಿ ದೂರದಿಂದ ಭಾರತಕ್ಕೆ ಬಂದು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದರು. ದಂತ, ನರ, ಮನಸ್ಸಿನ ವಿಜ್ಞಾನದ ಕುರಿತು ಅಭ್ಯಾಸ ಮಾಡುತ್ತಿದ್ದರು. ನೌಕಾಯಾನ ಶಾಸ್ತ್ರ, ಅಗ್ನಿಯ ಕುರಿತ ಅಧಯ್ಯನ ಸೇರಿ ಯಾವುದೇ ಜ್ಞಾನ ಪರಂಪರೆಯನ್ನು ಸರಿಯಾಗಿ ನೋಡಿದರೆ ಅದರ ಮೂಲ ಭಾರತದಿಂದಲೇ ಆರಂಭವಾಗುತ್ತದೆ. ಈ ನಿಟ್ಟಿನಲ್ಲಿ ಭಾರತೀಯತೆಯನ್ನು ಯುವಕರಲ್ಲಿ ಪ್ರಚುರಪಡಿಸಲು ದಿಶಾ ಭಾರತ ಸಾಕಷ್ಟು ಶ್ರಮಿಸುತ್ತಿದ್ದು, ಇನ್ನಷ್ಟು ಒಳ್ಳೆಯ ಕೆಲಸಗಳು ಸಂಸ್ಥೆಯಿಂದಾಗಲಿ ಎಂದು ಹಾರೈಸಿದರು.ಏನಿದು ಮೈ ಭಾರತ್ ಆನ್ಲೈನ್ ಕ್ಯಾಂಪೇನ್?ಮೈ ಭಾರತ್ ಆನ್ಲೈನ್ ಕ್ಯಾಂಪೇನ್ ಆಗಸ್ಟ್ 01 ರಿಂದ ಆಗಸ್ಟ್ 15 ರವರೆಗೆ ನಡೆಯಲಿದ್ದು ವಿವಿಧ ಸ್ಪರ್ಧೆಗಳು, ವಿವಿಧ ಉಪನ್ಯಾಸಗಳನ್ನು ಇದು ಹೊಂದಿರಲಿದೆ. ವಿದ್ಯಾರ್ಥಿ ಹಾಗೂ ಯುವ ಸಮೂಹದಲ್ಲಿ ದೇಶಭಕ್ತಿಯನ್ನು ಮೂಡಿಸುವ ಸಲುವಾಗಿ ಕಳೆದ ಐದು ವರ್ಷಗಳಿಂದ ದಿಶಾಭಾರತ್ ಮೈ ಭಾರತ್ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 100 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ