ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ

ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ ಹೇಳಿದರು.

ದಿಶಾಭಾರತ್ ವತಿಯಿಂದ 77 ನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಲಾಗುತ್ತಿರುವ ನನ್ನ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶ್ರೀನಿವಾಸ್ ಬಳ್ಳಿ, ಭಾರತಕ್ಕೆ ಯುಗಯುಗಾಂತರ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ನಿರಂತರವಾಗಿ ಪರಕೀಯರ ಆಕ್ರಮಣದ ನಂತರವೂ ಭಾರತ ಗಟ್ಟಿಯಾಗಿ ನಿಂತಿರುವುದು ಅದರ ನೈಜ ಶಕ್ತಿಯನ್ನು ತೋರಿಸಿದೆ. ಈಗ ದೇಶಕ್ಕೊಂದು ದಿಶೆ ಬೇಕಾಗಿದೆ ಹಾಗಿದ್ದಾಗ ಮಾತ್ರ ಅದು ಉಳಿಯಲಿದೆ. ಸದ್ಯ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಹಜವಾಗಿ ಸುಂದರವಾಗಿರುವ ದೇಶವನ್ನು ಹಾಳು ಮಾಡುವ ಉದ್ದೇಶ ಸಹ ಹಲವರಿಗೆ. ಆದರೆ ಭಾರತ ಭಾರತವಾಗಿಯೇ ಉಳಿದಿದೆ. ಇಡೀ ಭಾರತ ಮೇಲೆ ಇತರ ದೇಶಗಳು ಆಕ್ರಮಣ ಮಾಡಿದರೂ ಹಿಮ್ಮೆಟಿಸಿದ ಕೀರ್ತಿ ಭಾರತಕ್ಕಿದೆ ಎಂದು ಹೇಳಿದರು. ಆಹಾರದ ವಿಷಯದಲ್ಲಿ ಸ್ವಾಲಂಭಿಯಾಗಿರುವ ಭಾರತ ಕೋಟ್ಯಂತರ ಕ್ವಿಂಟಲ್ ಅಕ್ಕಿಯನ್ನು ಇತರ ದೇಶಗಳಿಗೆ ಒದಗಿಸುತ್ತಿದ್ದೇವೆ. ಕೊರೋನಾ ಸಮಯದಲ್ಲಿ ಲಸಿಕೆ ಬೇಡಿಕೆಯನ್ನು ಜಗತ್ತಿಗೆ ಪೂರೈಸಿದೆ. ಡಿಜಿಟಲ್ ಕ್ರಾಂತಿಯಾಗಿರುವುದು ಸಹ ನಮ್ಮ ಭಾರತದಲ್ಲಿ. ಮುಂದುವರೆದ ದೇಶಗಳ ಮದ್ಯೆ ಭಾರತ ತಲೆ ಎತ್ತಿ ನಿಂತಿದೆ. ಚಂದ್ರಯಾನ ಮಂಗಳಯಾನ ಆದಿತ್ಯಯಾನವನ್ನು ಪೂರೈಸಿ ಹಲವು ಮುಂದುವರೆದ ದೇಶಗಳ ಮಧ್ಯೆ ತಲೆ ಘನತೆ ಮೆರೆದಿದೆ ಎಂದರು. ಹಿತಮಿತವಾಗಿ ಆಹಾರ ಸ್ವೀಕರಿಸುವಿಕೆ ನಮ್ಮ ಸಮಸ್ಕೃತಿಯಲ್ಲಿಯೇ ಇದೆ. ಯೋಗದ ವಿಷಯದಲ್ಲಿ ಭಾರತ ವಿಶ್ವ ಗುರುವಾಗಿದೆ. ನಮಗೆ ದೊಡ್ಡ ಗುರು ಪರಂಪರೆ ಸಹ ಬೆನ್ನೆಲುಬಾಗಿ ಇದೆ. ಸದ್ಯ ಈ ದೇಶಕ್ಕೊಂದು ದಿಶೆ ಬೇಕಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ದಿಶೆ ತೋರಿಸುವ ಅಗತ್ಯವಿದೆ. ಅರಿವನ್ನು ತೋರಿಸಬೇಕಿದೆ. ಆ ಕೆಲಸವನ್ನು ದಿಶಾ ಭಾರತ್ ಸಂಸ್ಥೆ ಮಾಡುತ್ತಿದೆ. ಕಳೆದ 20 ವರ್ಷಗಳಿಂದ ಸಾಕಷ್ಟು ಯುವಕರನ್ನು ಜಾಗೃತಿಗೊಳಿಸುವ ಕಾರ್ಯ ಮಾಡುತ್ತಿದೆ. ಮೈ ಭಾರತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಂದುವರೆಸಿರುವುದು ಅದರ ಬದ್ಧತೆಗೆ ಸಾಕ್ಷಿಯಾಗಿದೆ. ಹಾಗಾಗಿ ಇಂತಹ ಕಾರ್ಯಕ್ರಮ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಶ್ರೀನಿವಾಸ್ ಬಳ್ಳಿ ಹೇಳಿದರು.

ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿಯ ಇತಿಹಾಸದ ಪ್ರೊಫೆಸರ್ ಡಾ. ವಿ ಅನುರಾಧ ಮಾತನಾಡಿ ಅನಾದಿ ಕಾಲದಲ್ಲಿ 16 ಸಾವಿರ ಮೈಲಿ ದೂರದಿಂದ ಭಾರತಕ್ಕೆ ಬಂದು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದರು. ದಂತ, ನರ, ಮನಸ್ಸಿನ ವಿಜ್ಞಾನದ ಕುರಿತು ಅಭ್ಯಾಸ ಮಾಡುತ್ತಿದ್ದರು. ನೌಕಾಯಾನ ಶಾಸ್ತ್ರ, ಅಗ್ನಿಯ ಕುರಿತ ಅಧಯ್ಯನ ಸೇರಿ ಯಾವುದೇ ಜ್ಞಾನ ಪರಂಪರೆಯನ್ನು ಸರಿಯಾಗಿ ನೋಡಿದರೆ ಅದರ ಮೂಲ ಭಾರತದಿಂದಲೇ ಆರಂಭವಾಗುತ್ತದೆ. ಈ ನಿಟ್ಟಿನಲ್ಲಿ ಭಾರತೀಯತೆಯನ್ನು ಯುವಕರಲ್ಲಿ ಪ್ರಚುರಪಡಿಸಲು ದಿಶಾ ಭಾರತ ಸಾಕಷ್ಟು ಶ್ರಮಿಸುತ್ತಿದ್ದು, ಇನ್ನಷ್ಟು ಒಳ್ಳೆಯ ಕೆಲಸಗಳು ಸಂಸ್ಥೆಯಿಂದಾಗಲಿ ಎಂದು ಹಾರೈಸಿದರು.ಏನಿದು ಮೈ ಭಾರತ್ ಆನ್ಲೈನ್ ಕ್ಯಾಂಪೇನ್?ಮೈ ಭಾರತ್ ಆನ್ಲೈನ್ ಕ್ಯಾಂಪೇನ್ ಆಗಸ್ಟ್ 01 ರಿಂದ ಆಗಸ್ಟ್ 15 ರವರೆಗೆ ನಡೆಯಲಿದ್ದು ವಿವಿಧ ಸ್ಪರ್ಧೆಗಳು, ವಿವಿಧ ಉಪನ್ಯಾಸಗಳನ್ನು ಇದು ಹೊಂದಿರಲಿದೆ. ವಿದ್ಯಾರ್ಥಿ ಹಾಗೂ ಯುವ ಸಮೂಹದಲ್ಲಿ ದೇಶಭಕ್ತಿಯನ್ನು ಮೂಡಿಸುವ ಸಲುವಾಗಿ ಕಳೆದ ಐದು ವರ್ಷಗಳಿಂದ ದಿಶಾಭಾರತ್ ಮೈ ಭಾರತ್ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 58 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 306 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️