ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ

ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ ಹೇಳಿದರು.

ದಿಶಾಭಾರತ್ ವತಿಯಿಂದ 77 ನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಲಾಗುತ್ತಿರುವ ನನ್ನ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶ್ರೀನಿವಾಸ್ ಬಳ್ಳಿ, ಭಾರತಕ್ಕೆ ಯುಗಯುಗಾಂತರ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ನಿರಂತರವಾಗಿ ಪರಕೀಯರ ಆಕ್ರಮಣದ ನಂತರವೂ ಭಾರತ ಗಟ್ಟಿಯಾಗಿ ನಿಂತಿರುವುದು ಅದರ ನೈಜ ಶಕ್ತಿಯನ್ನು ತೋರಿಸಿದೆ. ಈಗ ದೇಶಕ್ಕೊಂದು ದಿಶೆ ಬೇಕಾಗಿದೆ ಹಾಗಿದ್ದಾಗ ಮಾತ್ರ ಅದು ಉಳಿಯಲಿದೆ. ಸದ್ಯ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಹಜವಾಗಿ ಸುಂದರವಾಗಿರುವ ದೇಶವನ್ನು ಹಾಳು ಮಾಡುವ ಉದ್ದೇಶ ಸಹ ಹಲವರಿಗೆ. ಆದರೆ ಭಾರತ ಭಾರತವಾಗಿಯೇ ಉಳಿದಿದೆ. ಇಡೀ ಭಾರತ ಮೇಲೆ ಇತರ ದೇಶಗಳು ಆಕ್ರಮಣ ಮಾಡಿದರೂ ಹಿಮ್ಮೆಟಿಸಿದ ಕೀರ್ತಿ ಭಾರತಕ್ಕಿದೆ ಎಂದು ಹೇಳಿದರು. ಆಹಾರದ ವಿಷಯದಲ್ಲಿ ಸ್ವಾಲಂಭಿಯಾಗಿರುವ ಭಾರತ ಕೋಟ್ಯಂತರ ಕ್ವಿಂಟಲ್ ಅಕ್ಕಿಯನ್ನು ಇತರ ದೇಶಗಳಿಗೆ ಒದಗಿಸುತ್ತಿದ್ದೇವೆ. ಕೊರೋನಾ ಸಮಯದಲ್ಲಿ ಲಸಿಕೆ ಬೇಡಿಕೆಯನ್ನು ಜಗತ್ತಿಗೆ ಪೂರೈಸಿದೆ. ಡಿಜಿಟಲ್ ಕ್ರಾಂತಿಯಾಗಿರುವುದು ಸಹ ನಮ್ಮ ಭಾರತದಲ್ಲಿ. ಮುಂದುವರೆದ ದೇಶಗಳ ಮದ್ಯೆ ಭಾರತ ತಲೆ ಎತ್ತಿ ನಿಂತಿದೆ. ಚಂದ್ರಯಾನ ಮಂಗಳಯಾನ ಆದಿತ್ಯಯಾನವನ್ನು ಪೂರೈಸಿ ಹಲವು ಮುಂದುವರೆದ ದೇಶಗಳ ಮಧ್ಯೆ ತಲೆ ಘನತೆ ಮೆರೆದಿದೆ ಎಂದರು. ಹಿತಮಿತವಾಗಿ ಆಹಾರ ಸ್ವೀಕರಿಸುವಿಕೆ ನಮ್ಮ ಸಮಸ್ಕೃತಿಯಲ್ಲಿಯೇ ಇದೆ. ಯೋಗದ ವಿಷಯದಲ್ಲಿ ಭಾರತ ವಿಶ್ವ ಗುರುವಾಗಿದೆ. ನಮಗೆ ದೊಡ್ಡ ಗುರು ಪರಂಪರೆ ಸಹ ಬೆನ್ನೆಲುಬಾಗಿ ಇದೆ. ಸದ್ಯ ಈ ದೇಶಕ್ಕೊಂದು ದಿಶೆ ಬೇಕಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ದಿಶೆ ತೋರಿಸುವ ಅಗತ್ಯವಿದೆ. ಅರಿವನ್ನು ತೋರಿಸಬೇಕಿದೆ. ಆ ಕೆಲಸವನ್ನು ದಿಶಾ ಭಾರತ್ ಸಂಸ್ಥೆ ಮಾಡುತ್ತಿದೆ. ಕಳೆದ 20 ವರ್ಷಗಳಿಂದ ಸಾಕಷ್ಟು ಯುವಕರನ್ನು ಜಾಗೃತಿಗೊಳಿಸುವ ಕಾರ್ಯ ಮಾಡುತ್ತಿದೆ. ಮೈ ಭಾರತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಂದುವರೆಸಿರುವುದು ಅದರ ಬದ್ಧತೆಗೆ ಸಾಕ್ಷಿಯಾಗಿದೆ. ಹಾಗಾಗಿ ಇಂತಹ ಕಾರ್ಯಕ್ರಮ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಶ್ರೀನಿವಾಸ್ ಬಳ್ಳಿ ಹೇಳಿದರು.

ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿಯ ಇತಿಹಾಸದ ಪ್ರೊಫೆಸರ್ ಡಾ. ವಿ ಅನುರಾಧ ಮಾತನಾಡಿ ಅನಾದಿ ಕಾಲದಲ್ಲಿ 16 ಸಾವಿರ ಮೈಲಿ ದೂರದಿಂದ ಭಾರತಕ್ಕೆ ಬಂದು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದರು. ದಂತ, ನರ, ಮನಸ್ಸಿನ ವಿಜ್ಞಾನದ ಕುರಿತು ಅಭ್ಯಾಸ ಮಾಡುತ್ತಿದ್ದರು. ನೌಕಾಯಾನ ಶಾಸ್ತ್ರ, ಅಗ್ನಿಯ ಕುರಿತ ಅಧಯ್ಯನ ಸೇರಿ ಯಾವುದೇ ಜ್ಞಾನ ಪರಂಪರೆಯನ್ನು ಸರಿಯಾಗಿ ನೋಡಿದರೆ ಅದರ ಮೂಲ ಭಾರತದಿಂದಲೇ ಆರಂಭವಾಗುತ್ತದೆ. ಈ ನಿಟ್ಟಿನಲ್ಲಿ ಭಾರತೀಯತೆಯನ್ನು ಯುವಕರಲ್ಲಿ ಪ್ರಚುರಪಡಿಸಲು ದಿಶಾ ಭಾರತ ಸಾಕಷ್ಟು ಶ್ರಮಿಸುತ್ತಿದ್ದು, ಇನ್ನಷ್ಟು ಒಳ್ಳೆಯ ಕೆಲಸಗಳು ಸಂಸ್ಥೆಯಿಂದಾಗಲಿ ಎಂದು ಹಾರೈಸಿದರು.ಏನಿದು ಮೈ ಭಾರತ್ ಆನ್ಲೈನ್ ಕ್ಯಾಂಪೇನ್?ಮೈ ಭಾರತ್ ಆನ್ಲೈನ್ ಕ್ಯಾಂಪೇನ್ ಆಗಸ್ಟ್ 01 ರಿಂದ ಆಗಸ್ಟ್ 15 ರವರೆಗೆ ನಡೆಯಲಿದ್ದು ವಿವಿಧ ಸ್ಪರ್ಧೆಗಳು, ವಿವಿಧ ಉಪನ್ಯಾಸಗಳನ್ನು ಇದು ಹೊಂದಿರಲಿದೆ. ವಿದ್ಯಾರ್ಥಿ ಹಾಗೂ ಯುವ ಸಮೂಹದಲ್ಲಿ ದೇಶಭಕ್ತಿಯನ್ನು ಮೂಡಿಸುವ ಸಲುವಾಗಿ ಕಳೆದ ಐದು ವರ್ಷಗಳಿಂದ ದಿಶಾಭಾರತ್ ಮೈ ಭಾರತ್ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 268 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ