ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ

ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ ಹೇಳಿದರು.

ದಿಶಾಭಾರತ್ ವತಿಯಿಂದ 77 ನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಲಾಗುತ್ತಿರುವ ನನ್ನ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶ್ರೀನಿವಾಸ್ ಬಳ್ಳಿ, ಭಾರತಕ್ಕೆ ಯುಗಯುಗಾಂತರ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ನಿರಂತರವಾಗಿ ಪರಕೀಯರ ಆಕ್ರಮಣದ ನಂತರವೂ ಭಾರತ ಗಟ್ಟಿಯಾಗಿ ನಿಂತಿರುವುದು ಅದರ ನೈಜ ಶಕ್ತಿಯನ್ನು ತೋರಿಸಿದೆ. ಈಗ ದೇಶಕ್ಕೊಂದು ದಿಶೆ ಬೇಕಾಗಿದೆ ಹಾಗಿದ್ದಾಗ ಮಾತ್ರ ಅದು ಉಳಿಯಲಿದೆ. ಸದ್ಯ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಹಜವಾಗಿ ಸುಂದರವಾಗಿರುವ ದೇಶವನ್ನು ಹಾಳು ಮಾಡುವ ಉದ್ದೇಶ ಸಹ ಹಲವರಿಗೆ. ಆದರೆ ಭಾರತ ಭಾರತವಾಗಿಯೇ ಉಳಿದಿದೆ. ಇಡೀ ಭಾರತ ಮೇಲೆ ಇತರ ದೇಶಗಳು ಆಕ್ರಮಣ ಮಾಡಿದರೂ ಹಿಮ್ಮೆಟಿಸಿದ ಕೀರ್ತಿ ಭಾರತಕ್ಕಿದೆ ಎಂದು ಹೇಳಿದರು. ಆಹಾರದ ವಿಷಯದಲ್ಲಿ ಸ್ವಾಲಂಭಿಯಾಗಿರುವ ಭಾರತ ಕೋಟ್ಯಂತರ ಕ್ವಿಂಟಲ್ ಅಕ್ಕಿಯನ್ನು ಇತರ ದೇಶಗಳಿಗೆ ಒದಗಿಸುತ್ತಿದ್ದೇವೆ. ಕೊರೋನಾ ಸಮಯದಲ್ಲಿ ಲಸಿಕೆ ಬೇಡಿಕೆಯನ್ನು ಜಗತ್ತಿಗೆ ಪೂರೈಸಿದೆ. ಡಿಜಿಟಲ್ ಕ್ರಾಂತಿಯಾಗಿರುವುದು ಸಹ ನಮ್ಮ ಭಾರತದಲ್ಲಿ. ಮುಂದುವರೆದ ದೇಶಗಳ ಮದ್ಯೆ ಭಾರತ ತಲೆ ಎತ್ತಿ ನಿಂತಿದೆ. ಚಂದ್ರಯಾನ ಮಂಗಳಯಾನ ಆದಿತ್ಯಯಾನವನ್ನು ಪೂರೈಸಿ ಹಲವು ಮುಂದುವರೆದ ದೇಶಗಳ ಮಧ್ಯೆ ತಲೆ ಘನತೆ ಮೆರೆದಿದೆ ಎಂದರು. ಹಿತಮಿತವಾಗಿ ಆಹಾರ ಸ್ವೀಕರಿಸುವಿಕೆ ನಮ್ಮ ಸಮಸ್ಕೃತಿಯಲ್ಲಿಯೇ ಇದೆ. ಯೋಗದ ವಿಷಯದಲ್ಲಿ ಭಾರತ ವಿಶ್ವ ಗುರುವಾಗಿದೆ. ನಮಗೆ ದೊಡ್ಡ ಗುರು ಪರಂಪರೆ ಸಹ ಬೆನ್ನೆಲುಬಾಗಿ ಇದೆ. ಸದ್ಯ ಈ ದೇಶಕ್ಕೊಂದು ದಿಶೆ ಬೇಕಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ದಿಶೆ ತೋರಿಸುವ ಅಗತ್ಯವಿದೆ. ಅರಿವನ್ನು ತೋರಿಸಬೇಕಿದೆ. ಆ ಕೆಲಸವನ್ನು ದಿಶಾ ಭಾರತ್ ಸಂಸ್ಥೆ ಮಾಡುತ್ತಿದೆ. ಕಳೆದ 20 ವರ್ಷಗಳಿಂದ ಸಾಕಷ್ಟು ಯುವಕರನ್ನು ಜಾಗೃತಿಗೊಳಿಸುವ ಕಾರ್ಯ ಮಾಡುತ್ತಿದೆ. ಮೈ ಭಾರತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಂದುವರೆಸಿರುವುದು ಅದರ ಬದ್ಧತೆಗೆ ಸಾಕ್ಷಿಯಾಗಿದೆ. ಹಾಗಾಗಿ ಇಂತಹ ಕಾರ್ಯಕ್ರಮ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಶ್ರೀನಿವಾಸ್ ಬಳ್ಳಿ ಹೇಳಿದರು.

ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿಯ ಇತಿಹಾಸದ ಪ್ರೊಫೆಸರ್ ಡಾ. ವಿ ಅನುರಾಧ ಮಾತನಾಡಿ ಅನಾದಿ ಕಾಲದಲ್ಲಿ 16 ಸಾವಿರ ಮೈಲಿ ದೂರದಿಂದ ಭಾರತಕ್ಕೆ ಬಂದು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದರು. ದಂತ, ನರ, ಮನಸ್ಸಿನ ವಿಜ್ಞಾನದ ಕುರಿತು ಅಭ್ಯಾಸ ಮಾಡುತ್ತಿದ್ದರು. ನೌಕಾಯಾನ ಶಾಸ್ತ್ರ, ಅಗ್ನಿಯ ಕುರಿತ ಅಧಯ್ಯನ ಸೇರಿ ಯಾವುದೇ ಜ್ಞಾನ ಪರಂಪರೆಯನ್ನು ಸರಿಯಾಗಿ ನೋಡಿದರೆ ಅದರ ಮೂಲ ಭಾರತದಿಂದಲೇ ಆರಂಭವಾಗುತ್ತದೆ. ಈ ನಿಟ್ಟಿನಲ್ಲಿ ಭಾರತೀಯತೆಯನ್ನು ಯುವಕರಲ್ಲಿ ಪ್ರಚುರಪಡಿಸಲು ದಿಶಾ ಭಾರತ ಸಾಕಷ್ಟು ಶ್ರಮಿಸುತ್ತಿದ್ದು, ಇನ್ನಷ್ಟು ಒಳ್ಳೆಯ ಕೆಲಸಗಳು ಸಂಸ್ಥೆಯಿಂದಾಗಲಿ ಎಂದು ಹಾರೈಸಿದರು.ಏನಿದು ಮೈ ಭಾರತ್ ಆನ್ಲೈನ್ ಕ್ಯಾಂಪೇನ್?ಮೈ ಭಾರತ್ ಆನ್ಲೈನ್ ಕ್ಯಾಂಪೇನ್ ಆಗಸ್ಟ್ 01 ರಿಂದ ಆಗಸ್ಟ್ 15 ರವರೆಗೆ ನಡೆಯಲಿದ್ದು ವಿವಿಧ ಸ್ಪರ್ಧೆಗಳು, ವಿವಿಧ ಉಪನ್ಯಾಸಗಳನ್ನು ಇದು ಹೊಂದಿರಲಿದೆ. ವಿದ್ಯಾರ್ಥಿ ಹಾಗೂ ಯುವ ಸಮೂಹದಲ್ಲಿ ದೇಶಭಕ್ತಿಯನ್ನು ಮೂಡಿಸುವ ಸಲುವಾಗಿ ಕಳೆದ ಐದು ವರ್ಷಗಳಿಂದ ದಿಶಾಭಾರತ್ ಮೈ ಭಾರತ್ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಮಡಿಕೇರಿ:- ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 66 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 61 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 228 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 83 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 159 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ