ಚೀನಾಗಿಂತಲೂ ಪುರಾತನ ನಾಗರಿಕತೆ ಭಾರತದ್ದು : ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ

ಬೆಂಗಳೂರು: ಭಾರತ ಸ್ವಾತಂತ್ರ್ಯ ಬಂದಾಗಿನಿಂದ ಹುಟ್ಟಿದ್ದಲ್ಲ, ಅದರ ಹಿಂದೆಯೇ ನಮ್ಮಲ್ಲಿ ಗುರು ಪರಂಪರೆ ಸಮೃದ್ಧವಾಗಿತ್ತು. ಚೀನಾಗಿಂತಲೂ ಪುರಾತನ ನಾಗರಿಕತೆ ನಮ್ಮದು. ಹಾಗಾಗಿ ನಾವು ನಮ್ಮ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ನೃಪತುಂಗ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶ್ರೀನಿವಾಸ್ ಬಳ್ಳಿ ಹೇಳಿದರು.

ದಿಶಾಭಾರತ್ ವತಿಯಿಂದ 77 ನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆಸಲಾಗುತ್ತಿರುವ ನನ್ನ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನೃಪತುಂಗ ರಸ್ತೆಯಲ್ಲಿರುವ ಮಿಥಿಕ್ ಸೊಸೈಟಿ ಸಭಾಂಗಣದಲ್ಲಿ ಪೋಸ್ಟರ್ ಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಶ್ರೀನಿವಾಸ್ ಬಳ್ಳಿ, ಭಾರತಕ್ಕೆ ಯುಗಯುಗಾಂತರ ಇತಿಹಾಸವಿದೆ. ಸಾವಿರಾರು ವರ್ಷಗಳಿಂದ ನಿರಂತರವಾಗಿ ಪರಕೀಯರ ಆಕ್ರಮಣದ ನಂತರವೂ ಭಾರತ ಗಟ್ಟಿಯಾಗಿ ನಿಂತಿರುವುದು ಅದರ ನೈಜ ಶಕ್ತಿಯನ್ನು ತೋರಿಸಿದೆ. ಈಗ ದೇಶಕ್ಕೊಂದು ದಿಶೆ ಬೇಕಾಗಿದೆ ಹಾಗಿದ್ದಾಗ ಮಾತ್ರ ಅದು ಉಳಿಯಲಿದೆ. ಸದ್ಯ ದೇಶ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ಸಹಜವಾಗಿ ಸುಂದರವಾಗಿರುವ ದೇಶವನ್ನು ಹಾಳು ಮಾಡುವ ಉದ್ದೇಶ ಸಹ ಹಲವರಿಗೆ. ಆದರೆ ಭಾರತ ಭಾರತವಾಗಿಯೇ ಉಳಿದಿದೆ. ಇಡೀ ಭಾರತ ಮೇಲೆ ಇತರ ದೇಶಗಳು ಆಕ್ರಮಣ ಮಾಡಿದರೂ ಹಿಮ್ಮೆಟಿಸಿದ ಕೀರ್ತಿ ಭಾರತಕ್ಕಿದೆ ಎಂದು ಹೇಳಿದರು. ಆಹಾರದ ವಿಷಯದಲ್ಲಿ ಸ್ವಾಲಂಭಿಯಾಗಿರುವ ಭಾರತ ಕೋಟ್ಯಂತರ ಕ್ವಿಂಟಲ್ ಅಕ್ಕಿಯನ್ನು ಇತರ ದೇಶಗಳಿಗೆ ಒದಗಿಸುತ್ತಿದ್ದೇವೆ. ಕೊರೋನಾ ಸಮಯದಲ್ಲಿ ಲಸಿಕೆ ಬೇಡಿಕೆಯನ್ನು ಜಗತ್ತಿಗೆ ಪೂರೈಸಿದೆ. ಡಿಜಿಟಲ್ ಕ್ರಾಂತಿಯಾಗಿರುವುದು ಸಹ ನಮ್ಮ ಭಾರತದಲ್ಲಿ. ಮುಂದುವರೆದ ದೇಶಗಳ ಮದ್ಯೆ ಭಾರತ ತಲೆ ಎತ್ತಿ ನಿಂತಿದೆ. ಚಂದ್ರಯಾನ ಮಂಗಳಯಾನ ಆದಿತ್ಯಯಾನವನ್ನು ಪೂರೈಸಿ ಹಲವು ಮುಂದುವರೆದ ದೇಶಗಳ ಮಧ್ಯೆ ತಲೆ ಘನತೆ ಮೆರೆದಿದೆ ಎಂದರು. ಹಿತಮಿತವಾಗಿ ಆಹಾರ ಸ್ವೀಕರಿಸುವಿಕೆ ನಮ್ಮ ಸಮಸ್ಕೃತಿಯಲ್ಲಿಯೇ ಇದೆ. ಯೋಗದ ವಿಷಯದಲ್ಲಿ ಭಾರತ ವಿಶ್ವ ಗುರುವಾಗಿದೆ. ನಮಗೆ ದೊಡ್ಡ ಗುರು ಪರಂಪರೆ ಸಹ ಬೆನ್ನೆಲುಬಾಗಿ ಇದೆ. ಸದ್ಯ ಈ ದೇಶಕ್ಕೊಂದು ದಿಶೆ ಬೇಕಾಗಿದೆ. ವಿದ್ಯಾರ್ಥಿಗಳಿಗೆ ಸರಿಯಾದ ದಿಶೆ ತೋರಿಸುವ ಅಗತ್ಯವಿದೆ. ಅರಿವನ್ನು ತೋರಿಸಬೇಕಿದೆ. ಆ ಕೆಲಸವನ್ನು ದಿಶಾ ಭಾರತ್ ಸಂಸ್ಥೆ ಮಾಡುತ್ತಿದೆ. ಕಳೆದ 20 ವರ್ಷಗಳಿಂದ ಸಾಕಷ್ಟು ಯುವಕರನ್ನು ಜಾಗೃತಿಗೊಳಿಸುವ ಕಾರ್ಯ ಮಾಡುತ್ತಿದೆ. ಮೈ ಭಾರತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಂದುವರೆಸಿರುವುದು ಅದರ ಬದ್ಧತೆಗೆ ಸಾಕ್ಷಿಯಾಗಿದೆ. ಹಾಗಾಗಿ ಇಂತಹ ಕಾರ್ಯಕ್ರಮ ಉದ್ಘಾಟಿಸಿರುವುದು ಸಂತಸ ತಂದಿದೆ ಎಂದು ಶ್ರೀನಿವಾಸ್ ಬಳ್ಳಿ ಹೇಳಿದರು.

ಮಹಾರಾಣಿ ಕ್ಲಸ್ಟರ್ ಯುನಿವರ್ಸಿಟಿಯ ಇತಿಹಾಸದ ಪ್ರೊಫೆಸರ್ ಡಾ. ವಿ ಅನುರಾಧ ಮಾತನಾಡಿ ಅನಾದಿ ಕಾಲದಲ್ಲಿ 16 ಸಾವಿರ ಮೈಲಿ ದೂರದಿಂದ ಭಾರತಕ್ಕೆ ಬಂದು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳು ಮಾಡುತ್ತಿದ್ದರು. ದಂತ, ನರ, ಮನಸ್ಸಿನ ವಿಜ್ಞಾನದ ಕುರಿತು ಅಭ್ಯಾಸ ಮಾಡುತ್ತಿದ್ದರು. ನೌಕಾಯಾನ ಶಾಸ್ತ್ರ, ಅಗ್ನಿಯ ಕುರಿತ ಅಧಯ್ಯನ ಸೇರಿ ಯಾವುದೇ ಜ್ಞಾನ ಪರಂಪರೆಯನ್ನು ಸರಿಯಾಗಿ ನೋಡಿದರೆ ಅದರ ಮೂಲ ಭಾರತದಿಂದಲೇ ಆರಂಭವಾಗುತ್ತದೆ. ಈ ನಿಟ್ಟಿನಲ್ಲಿ ಭಾರತೀಯತೆಯನ್ನು ಯುವಕರಲ್ಲಿ ಪ್ರಚುರಪಡಿಸಲು ದಿಶಾ ಭಾರತ ಸಾಕಷ್ಟು ಶ್ರಮಿಸುತ್ತಿದ್ದು, ಇನ್ನಷ್ಟು ಒಳ್ಳೆಯ ಕೆಲಸಗಳು ಸಂಸ್ಥೆಯಿಂದಾಗಲಿ ಎಂದು ಹಾರೈಸಿದರು.ಏನಿದು ಮೈ ಭಾರತ್ ಆನ್ಲೈನ್ ಕ್ಯಾಂಪೇನ್?ಮೈ ಭಾರತ್ ಆನ್ಲೈನ್ ಕ್ಯಾಂಪೇನ್ ಆಗಸ್ಟ್ 01 ರಿಂದ ಆಗಸ್ಟ್ 15 ರವರೆಗೆ ನಡೆಯಲಿದ್ದು ವಿವಿಧ ಸ್ಪರ್ಧೆಗಳು, ವಿವಿಧ ಉಪನ್ಯಾಸಗಳನ್ನು ಇದು ಹೊಂದಿರಲಿದೆ. ವಿದ್ಯಾರ್ಥಿ ಹಾಗೂ ಯುವ ಸಮೂಹದಲ್ಲಿ ದೇಶಭಕ್ತಿಯನ್ನು ಮೂಡಿಸುವ ಸಲುವಾಗಿ ಕಳೆದ ಐದು ವರ್ಷಗಳಿಂದ ದಿಶಾಭಾರತ್ ಮೈ ಭಾರತ್ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 8 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 10 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ