ಉಜಿರೆ ಬಾಲಕನ ಅಪಹರಣ 7ಲಕ್ಷಕ್ಕೆ ಸುಪಾರಿ! ಸುಪಾರಿಕೊಟ್ಟ ವಕ್ತಿಗಾಗಿ ಪೋಲೀಸರಿಂದ ಶೋಧ

ಮಂಗಳೂರು: ಉಜಿರೆಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದ್ದು. ಈ ಕೃತ್ಯ ನಡೆಸಲು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೊಬ್ಬನಿದ್ದು ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.

ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ರವರು, ಸುದ್ದಿಗೋಷ್ಠಿ ಕರೆದು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಕರಣದ ಬಗ್ಗೆ ಮೊದಲೇ ಮನೆಯವರಿಂದ ಮಾಹಿತಿ ಪಡೆದಿದ್ದೆವು. ಈ ವೇಳೆ, ಸಿಕ್ಕ ಮಾಹಿತಿ ಮತ್ತು ನಾವು ಸಂಗ್ರಹಿಸಿದ ಮಾಹಿತಿ ಆಧರಿಸಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದು ಚಿಕ್ಕಮಗಳೂರಿನ ಮೂಡಿಗೆರೆ, ಮಂಡ್ಯ ಜಿಲ್ಲೆಯ ಮಧುಗಿರಿ, ಹಾಸನ, ಬೆಂಗಳೂರಿಗೆ ತೆರಳಿತ್ತು. ಮಧುಗಿರಿಗೆ ತೆರಳಿದ್ದ ತಂಡಕ್ಕೆ ಒಂದಷ್ಟು ಮಾಹಿತಿಗಳು ಸಿಕ್ಕಿದ್ದವು ಎಂದು ಹೇಳಿದರು.

ಮಂಡ್ಯದ ರಂಜಿತ್ (22), ಹನುಮಂತ್ (21), ಮೈಸೂರಿನ ಗಂಗಾಧರ (25) ಮತ್ತು ಬೆಂಗಳೂರಿನ ಕಮಲ್ (22) ಪ್ರಮುಖ ಆರೋಪಿಗಳು. ಮಂಜುನಾಥ ಎಂಬಾತನ (24)ನ ನೆರವಿನಿಂದ ಕೋಲಾರದ ಮಹೇಶ್ (26) ಮನೆಯಲ್ಲಿ ಮಗುವನ್ನು ಇಟ್ಟಿದ್ದರು ಎಂದರು.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಹೇಶ್ ಆರೋಪಿಗಳಿಗೆ ಸಹಕರಿಸಿದ್ದರು.

ಬಂಧಿತ ಆರೋಪಿಗಳಲ್ಲಿ ನಾಲ್ಕು ಜನರಿಗೆ ಹೊರಗಿನ ವ್ಯಕ್ತಿ ಏಳು ಲಕ್ಷ ಕೊಡುವುದಾಗಿ ಸುಪಾರಿ ಕೊಟ್ಟಿದ್ದ. ಆತ ಈ ಕುಟುಂಬದ ಪರಿಚಯಸ್ಥ ಎಂಬ ಬಗ್ಗೆ ಮಾಹಿತಿಯಿದ್ದು ಆತನ ಮಾಹಿತಿ ಲಭ್ಯವಾಗಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ. ಸುಪಾರಿ ನೀಡಿದ ವ್ಯಕ್ತಿ ಸಿಕ್ಕ ಬಳಿಕ ಅಪಹರಣದ ಸ್ಪಷ್ಟ ಉದ್ದೇಶ ಗೊತ್ತಾಗಲಿದೆ

ಬಾಲಕನ ತಂದೆ, ಬಿಜೋಯ್ ನಾಲ್ಕು ವರ್ಷಗಳ ಹಿಂದೆ ಬಿಟ್ ಕಾಯಿನ್ ಖರೀದಿಸಿದ್ದರು. ಆದರೆ, ಆ ಬಳಿಕ ಮೌಲ್ಯ ಕುಸಿಯುತ್ತದೆ ಎಂದು ಮಾರಾಟ ಮಾಡಿದ್ದಾಗಿ ತಿಳಿಸಿದ್ದಾರೆ.

ಮಾಹಿತಿ ಪ್ರಕಾರ, ಬಿಜೋಯ್ ಬಿಟ್ ಕಾಯಿನ್ ವಹಿವಾಟು ನಡೆಸುತ್ತಿದ್ದಾರೆ. ಈ ಬಗ್ಗೆ ಗೊತ್ತಿದ್ದ ವ್ಯಕ್ತಿಯೇ ಬಿಜೋಯ್ ಬಳಿಯಿಂದ ಹಣ ಕೀಳುವುದಕ್ಕೆ ಪ್ಲಾನ್ ಮಾಡಿದ್ದಾನೆ. ಬಿಟ್ ಕಾಯಿನ್ ಮೌಲ್ಯ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ಒಂದಷ್ಟು ಹಣ ವಸೂಲಿ ಮಾಡುವ ಪ್ಲಾನ್ ಹೊಂದಿದ್ದ. ವ್ಯಕ್ತಿ ಯಾರೆನ್ನುವ ಬಗ್ಗೆ ಸ್ಪಷ್ಟ ಸುಳಿವು ಪೊಲೀಸರಿಗೆ ಲಭಿಸಿದ್ದು, ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸದಲ್ಲಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 138 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು