86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಆಯ್ಕೆ

ಹಾವೇರಿ: ಫೆಬ್ರವರಿ 26, 27 ಮತ್ತು 28 ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇಗೌಡ ಆಯ್ಕೆಯಾಗಿದ್ದಾರೆ. ಈ ಕುರಿತು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನುಬಳಿಗಾರ್ ತಿಳಿಸಿದ್ದಾರೆ.

ಸುಮಾರು 25ಎಕರೆ ಪ್ರದೇಶದಲ್ಲಿ ಗುದ್ದಲ್ಯಪ್ಪ ಹಳ್ಳಿಕೇರಿ ಕಾಲೇಜಿನ ಪಕ್ಕದಲ್ಲಿರುವ ವಿಶಾಲ ಮೈದಾನದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದಕ್ಕೆ ಕೋವಿಡ್ ನಿಯಮಗಳನ್ನು ಸಡಿಲಿಸಿ ಅನುಮತಿ ನೀಡುವಂತೆ ಸರ್ಕಾರಕ್ಕೆ ಕೋರಲಾಗಿದೆ. ಮೊದಲ ದಿನವೇ ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿದೆ ಎಂದಿದ್ದಾರೆ

READ ALSO