ನಾಳೆ ವರ್ಗಾವಣೆಗೊಳ್ಳಲಿದೆ 8ನೇ ಕಂತಿನ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೊತ್ತ ನೇರ ರೈತರ ಖಾತೆಗೆ!

ನವದೆಹಲಿ: 8ನೇ ಕಂತಿನ ಪಿಎಂ ಕಿಸಾನ್​ ಸಮ್ಮಾನ್​ ನಿಧಿ ಯೋಜನೆಯ ಮೊತ್ತ ನಾಳೆ ರೈತರ ಖಾತೆಗಳಿಗೆ ವರ್ಗಾವಣೆಗೊಳ್ಳಲಿದೆ.

ಇದರ ಬೆನ್ನಲ್ಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ದೇಶದ ರೈತರೊಂದಿಗೆ ಸಂವಾದ ನಡೆಸಲಿದ್ದು, ಅದಕ್ಕೂ ಮೊದಲು 19,000 ಕೋಟಿ ರೂ.ಯನ್ನು 9.5 ಕೋಟಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಲಿದ್ದಾರೆ.

READ ALSO

ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಕಳೆದ ಕೆಲ ತಿಂಗಳಿಂದ ರೈತರ ಖಾತೆಗಳಿಗೆ ಪಿಎಂ ಕಿಸಾನ್ ಯೋಜನೆ ಹಣ ಜಮಾವಣೆ ಆಗಿರಲಿಲ್ಲ. ಆದರೆ ಶುಕ್ರವಾರ ಅನ್ನದಾತರ ಖಾತೆಗಳಿಗೆ ಹಣ ಬರಲಿದೆ ಎಂದು ತಿಳಿಸಿದ್ದಾರೆ.