‘ಬ್ಯಾಂಕಿಂಗ್’ ವಂಚನೆ ತಪ್ಪಿಸಲು ಗ್ರಾಹಕರಿಗೆ ಕೇಂದ್ರ ಸರಕಾರದಿಂದ ಮಹತ್ವದ ಸೂಚನೆ!

ನವದೆಹಲಿ: ಡಿಜಿಟಲ್ ವಹಿವಾಟು ಹೆಚ್ಚಾದಂತೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸಹ ಏರಿಕೆಯಾಗುತ್ತಿವೆ. ವಂಚಕರು ವಿವಿಧ ರೀತಿಯಲ್ಲಿ ಬ್ಯಾಂಕ್ ಗ್ರಾಹಕರ ಖಾತೆಗಳ ಮಾಹಿತಿ ಪಡೆದು ಹಣ ಎಗರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯದ ಮಾಹಿತಿ ಮತ್ತು ತಂತ್ರಜ್ಞಾನ ರಕ್ಷಣಾ ವಿಭಾಗದ ಟ್ವಿಟ್ಟರ್ ಖಾತೆ ‘ಸೈಬರ್ ದೋಸ್ತ್’ ಮೂಲಕ ಮಹತ್ವದ ಸೂಚನೆಯನ್ನು ನೀಡಲಾಗಿದೆ.

ಬ್ಯಾಂಕಿಂಗ್ ವಹಿವಾಟುಗಳಿಗಾಗಿ ಮಾಡಿಕೊಂಡಿರುವ ಇ ಮೇಲ್ ಖಾತೆ ಮೂಲಕ ಯಾವುದೇ ಕಾರಣಕ್ಕೂ ಸಾಮಾಜಿಕ ಜಾಲತಾಣಗಳ ಖಾತೆಯನ್ನು ತೆರೆಯದಂತೆ ತಿಳಿಸಲಾಗಿದ್ದು, ಜೊತೆಗೆ ಆಟೋ ಫಿಲ್ ಫಾರ್ಮ್ ಇರುವ ಬ್ರೌಸರ್ ಗಳಲ್ಲಿ ಡೆಬಿಟ್ / ಕ್ರೆಡಿಟ್ ಕಾರ್ಡ್ ಸಂಖ್ಯೆ, ಸಿವಿವಿ ಸಂಖ್ಯೆ, ಕಾರ್ಡ್ ಎಕ್ಸ್ಪೈರಿ ಡೇಟ್ ಮೊದಲಾದ ಮಾಹಿತಿಗಳನ್ನು ಬಳಸಬೇಡಿ ಎಂದು ಸೂಚಿಸಲಾಗಿದೆ.

ಬ್ಯಾಂಕ್ ಗ್ರಾಹಕರು ಎರಡು ಇ ಮೇಲ್ ಖಾತೆಗಳನ್ನು ಹೊಂದುವುದು ಸೂಕ್ತ ಎಂದು ಸೈಬರ್ ದೋಸ್ತ್ ತಿಳಿಸಿದ್ದು, ಒಂದನ್ನು ದೈನಂದಿನ ಕಾರ್ಯಗಳಿಗೆ ಬಳಸಿದರೆ ಮತ್ತೊಂದು ಇ ಮೇಲ್ ಖಾತೆಯನ್ನು ಬ್ಯಾಂಕಿಂಗ್ ವಹಿವಾಟುಗಳಿಗೆ ಮಾತ್ರ ಬಳಸಬೇಕೆಂದು ತಿಳಿಸಲಾಗಿದೆ. ಬ್ಯಾಂಕಿಂಗ್ ವಹಿವಾಟಿಗೆ ಮಾಡಿಕೊಂಡಿರುವ ಇ-ಮೇಲ್, ಅನಿವಾರ್ಯ ಸಂದರ್ಭಗಳಲ್ಲಿ ಬಳಸಬೇಕಾಗಿ ಬಂದರೆ ನಂಬಿಕಾರ್ಹ ವ್ಯಕ್ತಿಗಳೊಂದಿಗೆ ಮಾತ್ರ ಸಂವಹನ ನಡೆಸಿ ಎಂದು ತಿಳಿಸಲಾಗಿದೆ.

ವಂಚಕರು ಬ್ಯಾಂಕಿಂಗ್ ಸಂಸ್ಥೆಗಳ ಇ-ಮೇಲ್ ಖಾತೆಯನ್ನೇ ಹೋಲುವಂತೆ ಖಾತೆಗಳನ್ನು ರಚಿಸಿ ಗ್ರಾಹಕರಿಗೆ ಮಹತ್ವದ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಕೇಳಿದ ವೇಳೆ ಯಾವುದೇ ಕಾರಣಕ್ಕೂ ಇವುಗಳ ವಿವರವನ್ನು ನೀಡಬೇಡಿ ಎಂದು ಸೈಬರ್ ದೋಸ್ತ್, ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದೆ.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 22 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 56 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 37 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ