ವಿಜಯನಗರವನ್ನು ರಾಜ್ಯದ 31ನೇ ಜಿಲ್ಲೆ ಎಂದು ಘೋಷಣೆ!

ಬೆಂಗಳೂರು: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಅಸ್ತು ಎಂದಿದೆ. ಸಚಿವ ಸಂಪುಟ ಸಭೆಯಲ್ಲಿಂದು ಅಧಿಕೃತವಾಗಿ ಅನುಮೋದನೆ ಪಡೆದುಕೊಂಡ ಬಳಿಕ ವಿಜಯನಗರ 31ನೇ ಜಿಲ್ಲೆ ಎಂದು ಸಚಿವ ಮಾಧುಸ್ವಾಮಿ ಅವರು ಘೋಷಣೆ ಮಾದಿದರು.

ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆ, ರೂಪುರೇಷೆಗಳ ಬಗ್ಗೆ ಚರ್ಚಿಸಲಾಗಿತ್ತು. ಈ ಬಗ್ಗೆ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದ್ದು, ಇದೀಗ ವಿಜಯನಗರ ನೂತನ ಜಿಲ್ಲೆ ಎಂದು ಅಧಿಕೃತಗೊಳಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದರು.

ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರೆಲ್ಲರಿಗೂ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟಕರವಾಗಿತ್ತು.

ಸುಮಾರು 200 ಕಿ.ಮೀ ದೂರ ಕ್ರಮಿಸಬೇಕಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಬೇಡಿಕೆಗೆಯನ್ನು ಮನ್ನಿಸಿ ಹೊಸ ಜಿಲ್ಲೆ ಉದಯಕ್ಕೆ ನಾಂದಿ ಹಾಡಿದೆ.

ನೂತನ ಜಿಲ್ಲೆಯ ಗಡಿಗಳ ರೂಪುರೇಷೆಗೆ ಸಚಿವ ಸಂಪುಟದಲ್ಲಿ ಸಮ್ಮತಿ ಸಿಕ್ಕಿದೆ. ಬಳ್ಳಾರಿ ಜಿಲ್ಲೆಯಿಂದ ವಿಭಜಿಸಿ ಹೊಸ ಜಿಲ್ಲೆ ರೂಪುಗೊಂಡಿದೆ.

ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಹೊಸಪೇಟೆ, ಹಗರಿಬೊಮ್ಮನಹಳ್ಳಿ,ಕೂಡ್ಲಿಗಿ, ಕೊಟ್ಟೂರು, ಹೂವಿನ ಹಡಗಲಿ ತಾಲೂಕುಗಳಿರಲಿವೆ.

ಬಳ್ಳಾರಿ 11 ಕಂದಾಯ ತಾಲೂಕು, 3 ಕಂದಾಯ ಉಪ ವಿಭಾಗಗಳನ್ನು ಹೊಂದಿರುವ ದೊಡ್ಡ ಜಿಲ್ಲೆಯಾಗಿತ್ತು.ಈಗ ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರುಗುಪ್ಪ, ಸಂಡೂರು ಹಾಗೂ ಕಂಪ್ಲಿ ತಾಲೂಕು ಉಳಿಸಿಕೊಳ್ಳಲಾಗುತ್ತದೆ.

ಆಡಳಿತ ದೃಷ್ಟಿಯಿಂದ ಬಳ್ಳಾರಿ ಜಿಲ್ಲೆ ವಿಭಜನೆಗೆ ಬಿಜೆಪಿ ಸರ್ಕಾರ ಮುಂದಾಗಿದ್ದು, ಗಾಲಿ ರೆಡ್ಡಿ ಸೋದರರು ವಿರೋಧ ವ್ಯಕ್ತಪಡಿಸಿದ್ದರೆ, ಆನಂದ್ ಸಿಂಗ್ ಬಣ ಸಹಮತ ವ್ಯಕ್ತಪಡಿಸಿದ್ದರು. ಸಾರ್ವಜನಿಕರಲ್ಲೂ ಪರ-ವಿರೋಧ ಚರ್ಚೆ ಮುಂದುವರೆದಿತ್ತು.

Spread the love
  • Related Posts

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    You Missed

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 22 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 17 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 36 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 56 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 37 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 44 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ