ಲಕ್ಷದೀಪೋತ್ಸವದಲ್ಲಿ ಶಿಕ್ಷಣ, ಜಾಗೃತಿಯ ಭಕ್ತಿ ಸಂದೇಶ ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ: ಡಾ,ಕೆ.ಸುಧಾಕರ್

ಧರ್ಮಸ್ಥಳ: ದೀಪ ಬೆಳಕಿನ ಸಂಕೇತ. ಲಕ್ಷದೀಪೋತ್ಸವ ಬರೀ ಉತ್ಸವ ಅಲ್ಲ. ಶಿಕ್ಷಣ, ಮಾಹಿತಿ ಮತ್ತು ಜಾಗೃತಿಯೊಂದಿಗೆ ಭಕ್ತಿ ಮತ್ತು ಶರಣಾಗತಿ ಮೂಲಕ ದೇವರಿಗೆ ಕೃತಜ್ಞತೆ ಸಲ್ಲಿಸುವ ಉತ್ಸವವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ, ಕೆ.ಸುಧಾಕರ್ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಯುಕ್ತ ಶುಕ್ರವಾರ ಸಾಹಿತ್ಯ ಸಮ್ಮೇಳನದ 89ನೇ ಅಧಿವೇಶನ ಉದ್ಘಾಟಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಕಲೆ, ಸಾಹಿತ್ಯ, ಸಂಸ್ಕೃತಿ ಮತ್ತು ಜಾನಪದ ಸೊಗಡನ್ನು ಶ್ಲಾಘಿಸಿದ ಅವರು, ಸಾಹಿತ್ಯ ಕ್ಷೇತ್ರಕ್ಕೆ ಮಹಾಕವಿ ರತ್ನಾಕರವರ್ಣಿ, ಮಂಜೇಶ್ವರ ಗೋವಿಂದ ಪೈ, ಶಿವರಾಮ ಕಾರಂತ ಮೊದಲಾದವರು ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಯಕ್ಷಗಾನ, ಭೂತ ಕೋಲ, ಕಂಬಳ ಮೊದಲಾದ ಜಾನಪದ ಕ್ರೀಡೆಗಳು ಹಾಗೂ ಕಲೆಗಳನ್ನು ನೆನಪಿಸಿಕೊಂಡರು.

ಸಾಹಿತಿಗಳು ಸಮಾಜವನ್ನು ತಿದ್ದುವ ದಾರ್ಶನಿಕರು. ನಾನು ಸಾಹಿತಿ ಅಲ್ಲವಾದರೂ ಸಾಹಿತ್ಯ ಮತ್ತು ಸಾಹಿತಿಗಳ ಬಗ್ಗೆ ಅಭಿಮಾನ ಮತ್ತು ಗೌರವ ಇದೆ. ಸಾಹಿತ್ಯದಿಂದ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಎಂದ ಸಚಿವರು ಎಲ್ಲರಲ್ಲೂ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿರುವುದಕ್ಕೆ ವಿಷಾದಿಸಿದರು.

ಸಾಹಿತ್ಯಕ್ಕೆ ಕ್ಷೇತ್ರದಿಂದ ಪ್ರೋತ್ಸಾಹ ಎಸ್.ಡಿ.ಎಂ. ಪುಸ್ತಕ ಪ್ರಕಾಶನ ಮಾಲಿಕೆ ಮೂಲಕ ಅನೇಕ ಕೃತಿಗಳನ್ನು ಪ್ರಕಟಿಸಿ ಓದುವ ಹವ್ಯಾಸ ಬೆಳೆಸ ಪ್ರೋತ್ಸಾಹ ನೀಡಲಾಗುತ್ತದೆ ಎಂದು ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಧರ್ಮಸ್ಥಳದಿಂದ ಮಂಜುವಾಣಿ ಮತ್ತು ನಿರಂತರ ಎಂಬ ಎರಡು ಮಾಸ ಪತ್ರಿಕೆಗಳನ್ನು ಪ್ರಕಟಿಸಿ ಜ್ಞಾನ ದಾಸೋಹ ನೀಡಲಾಗುತ್ತದೆ. ಸುಜ್ಞಾನ ನಿಧಿ ಯೋಜನೆಯಡಿ 37,194 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸಲಾಗುತ್ತದೆ. ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ಗ್ರಂಥಾಲಯದ ಅನೇಕ ಪುರಾತನ ಹಸ್ತಪ್ರತಿಗಳು, ಅಮೂಲ್ಯ ಗ್ರಂಥಗಳ ಹಾಗೂ ಅನುವಾದಿತ ಕೃತಿಗಳ ಸಂಗ್ರಹವಿದೆ. ಆಸಕ್ತರು ಇದರ ಸದುಪಯೋಗ ಪಡೆಯಬಹುದು. ಭಾಷಾ ಸಾಮರಸ್ಯ, ಸಹಬಾಳ್ವೆ ಹಾಗೂ ಭಾಷಾಭಿಮಾನದ ಜತೆಗೆ ಸಾಹಿತ್ಯದ ಮೂಲಕ ಆರೋಗ್ಯಪೂರ್ಣ ಸಮಾಶ ನಿರ್ಮಾಣಕ್ಕೆ ಧರ್ಮಸ್ಥಳದಿಂದ ನಿರಂತರ ಪ್ರೋತ್ಸಾಹ, ಸಹಕಾರ ನೀಡಲಾಗುತ್ತದೆ ಎಂದರು. ಧರ್ಮ ಮತ್ತು ಸಾಹಿತ್ಯ ಸಮಸ್ತ ಮಾನವ ಸಮಾಜದ ಏಳಿಗೆಗೆ ಪೂರಕ ಮತ್ತು ಪ್ರೇರಕವಾಗಿದೆ. ವ್ಯಕ್ತಿ ಮತ್ತು ಸಮಾಜಕ್ಕೆ ಹಿತವನ್ನು ಉಂಟುಮಾಡುವುದೇ ಸಾಹಿತ್ಯ ಎಂದು ಹೆಗ್ಗಡೆ ಹೇಳಿದರು.

ಅಧ್ಯಕ್ಷತೆ ವಹಿಸಿದ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಮಾತನಾಡಿ, ಸಾಹಿತ್ಯದಿಂದ ಅಂತರಂಗದ ಶುದ್ದೀಕರಣವಾಗುತ್ತದೆ. ಸಾಹಿತ್ಯ ರಚನೆಯಲ್ಲಿ ಶಿ ತತ್ವದ ಧಾತು ಇರಬೇಕು. ಅಧ್ಯಾತ್ಮ ಸಾಹಿತ್ಯ ಮತ್ತು ರಂಜನೀಯ ಸಾಹಿತ್ಯದ ಮಧ್ಯೆ ಸಮನ್ವಯ ಅಗತ್ಯ. ಅಂತಃಕರಣದ ಶುದ್ದೀಕರಣದಿಂದ ಲೋಕದ ಶುದ್ದೀಕರಣವೂ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಐತಿಹಾಸಿಕ ಸಾಹಿತ್ಯ ಸೃಷ್ಟಿಯಲ್ಲಿ ಎದುರಾಗುವ ಸವಾಲುಗಳು ಎಂಬ ವಿಷಯದ ಬಗ್ಗೆ ಸಾಗರದ ಡಾ. ಗಜಾನನ ಶರ್ಮಾ, ಸಾಹಿತ್ಯ ಸಂವೇದನೆ ಮತ್ತು ಮಹಿಳಾ ಅಭಿವ್ಯಕ್ತಿ ವಿಷಯದಲ್ಲಿ ಚಿತ್ರದುರ್ಗದ ಡಾ. ಪಿ.ಚಂದ್ರಿಕಾ ಹಾಗೂ ಶಿಕ್ಷಣ ಮತ್ತು ಸಂಸ್ಕೃತಿ ರಕ್ಷಣೆಯಲ್ಲಿ ಸಾಹಿತ್ಯದ ಪಾತ್ರ ಎಂಬ ವಿಷಯದ ಬಗ್ಗೆ ಡಾ. ಕೆ.ಪಿ. ಪುತ್ತೂರಾಯ ಉಪನ್ಯಾಸ ನೀಡಿದರು.

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನವನ್ನು ಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿ ದರು. ಡಾ.ಡಿ.ವೀರೇಂದ್ರ ಹೆಗ್ಗಡೆ, ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ, ಡಾ. ಗಜಾನನ ಶರ್ಮಾ, ಡಾ. ಪಿ.ಚಂದ್ರಿಕಾ, ಡಾ. ಕೆ.ಪಿ. ಪುತ್ತೂರಾಯ, ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

ಇಂದು ಸಮವಸರಣ ಪೂಜೆ

ಹೊಸಕಟ್ಟೆ, ಕೆರೆಕಟ್ಟೆ, ಲಲಿತೋದ್ಯಾನ, ಕಂಚಿಮಾರುಕಟ್ಟೆ, ಗೌರಿಮಾರುಕಟ್ಟೆ ಉತ್ಸವಗಳೊಂದಿಗೆ ಐದು ದಿನಗಳ ಲಕ್ಷದೀಪೋತ್ಸವ ಸಮಾಪನಗೊಂಡಿದೆ. ಶನಿವಾರ ಸಂಜೆ 6.30ರಿಂದ ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ.

ಹೇಮಾವತಿ ವಿ. ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು. ಉಜಿರೆ ರುಡ್‌ಸೆಟ್ ಸಂಸ್ಥೆ ನಿರ್ದೇಶಕ ಎಂ.ಸುರೇಶ್ ವಂದಿಸಿದರು. ಎಸ್ ಡಿಎಂ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸಂಪತ್ ಕುಮಾರ್ ನಿರೂಪಣೆ ಮಾಡಿದರು.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ