ಅಡಿಕೆ ಖರೀದಿಸಿ ಹಣ ನೀಡದೆ ಪಂಗನಾಮ! ಅಡಿಕೆ ಖರೀದಿಸಿದ ವ್ಯಾಪಾರಿ ನಿಗೂಢ ನಾಪತ್ತೆ! ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಅಡಿಕೆ ವ್ಯಾಪಾರಿಯೊಬ್ಬರು ಅಡಿಕೆ ಬೆಳೆಗಾರರಿಂದ ಅಡಿಕೆ ಖರೀದಿಸಿ ಹಣ ನೀಡದೇ ವಂಚನೆ ಮಾಡಿರುವ ಘಟನೆ ಬಂದಾರು ಗ್ರಾಮದ ಪಾಣೆಕಲ್ಲು ಎಂಬಲ್ಲಿ ನಡೆದಿದೆ.

ತಾಲೂಕಿನ ಬಂದಾರು ಗ್ರಾಮದ ಪಾಣೆಕಲ್ಲು ಬಟ್ಲಡ್ಕ ಎಂಟರ್‌ ಪ್ರೈಸಸ್ಸ್‌ನ ಅಡಿಕೆ ವ್ಯಾಪಾರಸ್ಥ ಬಿ ಎಮ್‌ ರಫೀಕ್‌ ರವರೊಂದಿಗೆ ದೂರುದಾರ ಡಾಕಯ್ಯ ಗೌಡ ಕೊಯ್ಯೂರು ಇವರು ಸುಮಾರು 3 ವರ್ಷಗಳಿಂದ ಅಡಿಕೆ ನೀಡುತ್ತಾ ವ್ಯವಹಾರವನ್ನು ಮಾಡುತ್ತಾ ಬಂದಿರುತ್ತಾರೆ.

ಅಡಿಕೆಗೆ ಮಾರುಕಟ್ಟೆ ಧಾರಣೆಗೆ ಅನುಗುಣವಾಗಿ ದರ ನಿಗದಿಮಾಡುತ್ತಿದ್ದು ಅಗತ್ಯ ಬಂದಾಗ ಆತನಿಂದ ಹಣ ಪಡೆದುಕೊಳ್ಳುತ್ತಿದ್ದರು . 07-05-2020 ರಂದು ಐದು ಲಕ್ಷದ ಇಪ್ಪತ್ತೈದುಸಾವಿರದ ಐನೂರಾ ಎಂಬತ್ತೆಂಟು ರೂಪಾಯಿ ಮೊತ್ತದ ಅಡಿಕೆಯನ್ನು ಬಿ ಎಮ್‌ ರಫೀಕ್‌ ರವರಿಗೆ ಕೊಟ್ಟಿದ್ದು ಆ ಸಮಯ ಎರಡು ಲಕ್ಷದ ಇಪ್ಪತ್ತು ಸಾವಿರ ರೂಪಾಯಿಯನ್ನು ನೀಡಿದ್ದು ಉಳಿದ ಮೂರು ಲಕ್ಷದ ಐದು ಸಾವಿರದ ಐನೂರಾ ಎಂಬತ್ತೆಂಟು ರೂಪಾಯಿಯನ್ನು (3,05,588/-) ಒಂದು ವಾರ ಬಿಟ್ಟು ನೀಡುತ್ತೇನೆಂದು ತಿಳಿಸಿದ್ದು ಅದರಂತೆ ಮೇಲಿನ ವಿಶ್ವಾಸದಿಂದ ಒಪ್ಪಿಕೊಂಡು ಒಂದು ವಾರ ಬಿಟ್ಟು ಹೋದಾಗ ಮತ್ತೆ 10 ದಿನಗಳ ಕಾಲಾವಕಾಶ ಕೇಳಿದ್ದು ಅದರಂತೆ 26-05-2020 ರಂದು ಆತನ ಅಂಗಡಿಗೆ ಹೋದಾಗ ಆತನ ಅಂಗಡಿ ಮುಚ್ಚಿದ್ದು ಆತನಿಗೆ ದೂರವಾಣಿ ಕರೆಮಾಡಿದಾಗ ಕರೆ ಸ್ವೀಕರಿಸದೇ ಇದ್ದುದ್ದರಿಂದ ಆತನ ಮಗನಾದ ರಮೀಜಾ ನಲ್ಲಿ ವಿಚಾರಿಸಿದಾಗ ಆತನು ಕೂಡಾ ಆತನ ತಂದೆ ಎಲ್ಲಿರುತ್ತಾರೆ ಎಂದು ತಿಳಿಸಿದೇ ತಂದೆಯ ಮೋಸಕ್ಕೆ ಸಹಕರಿಸಿರುತ್ತಾನೆ ಎಂಬುದು ತಿಳಿದು ಬಂದಿದೆ.

ತಾಲೂಕಿನ ಬಂದಾರು, ಮೊಗ್ರು, ಕೊಯ್ಯೂರು, ಬೆಳಾಲು ಗ್ರಾಮದ 100ಕ್ಕೂ ಆಧಿಕ ಗ್ರಾಹಕರ ಮನವೊಲಿಸಿ ವಿಶ್ವಾಸದ ನೆಲೆಯಲ್ಲಿ ಮುಂಗಡ ಅಡಕೆ ಖರೀದಿಸಿ ಸುಮಾರು 1.5 ಕೋಟಿ ರೂಪಾಯಿಗಳನ್ನು ಕೊಡಲು ಬಾಕಿ ಇಟ್ಟುಕೊಂಡಿದ್ದ ಅಡಿಕೆ ವ್ಯಾಪಾರಿ ರಫೀಕ್ ಅವರು ಇದೀಗ ಒಂದು ವಾರದಿಂದ ನಾಪತ್ತೆಯಾಗಿದ್ದು ಗ್ರಾಹಕರ ಆತಂಕಕ್ಕೆ ಕಾರಣವಾಗಿದೆ.

ಈ ಬಗ್ಗೆ ಊರಿನಲ್ಲಿ ವಿಚಾರಿಸಿದಾಗ ರಮಾನಂದ ಭಟ್‌, ಗೋವಿಂದ, ದಿನೇಶ್‌ ಕಿಣಾಜೆ, ನಾರಾಯಣ ಮೈಂದಕೋಡಿ, ಪೂವಪ್ಪ ಗೌಡ ಉಮಿಯಾ, ಲಿಂಗಪ್ಪ ಗೌಡ ಕಜೆ, ನಾಣ್ಯಪ್ಪ ಗೌಡ ಡೆಂಬುಗ, ಲಿಂಗಪ್ಪ ಗೌಡ ಉಮಿಯಾ, ಕುಶಾಲಪ್ಪ ಗೌಡ ಬಂದಾರು,ಧನಂಜಯ ಉಗ್ರೋಡಿ ಹಾಗೂ ಇನ್ನು ಕೆಲವರಿಂದ ಕೂಡಾ ಅಡಿಕೆ ಖರೀದಿಸಿ ಹಣ ನೀಡದೇ ಮೋಸ ಮಾಡಿರುತ್ತಾರೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಧರ್ಮಸ್ಥಳ ಪೋಲೀಸ್ ಠಾಣೆಯಲ್ಲಿ ಡಾಕಯ್ಯ ಗೌಡ ಕೊಯ್ಯೂರುರವರು ನೀಡಿದ ದೂರಿನ ಅನ್ವಯ ಅಡಿಕೆ ವ್ಯಾಪಾರಿ ಬಿ.ಎಮ್‌ ರಫೀಕ್‌ ಹಾಗೂ ಆತನ ಮಗನಾದ ರಮೀಜಾ ವಿರುದ್ಧ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 95 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 58 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 185 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 191 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 97 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 113 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ