ಲಂಚದ ಹಣಕ್ಕಾಗಿ ಪೀಡಿಸುತಿದ್ದ ಸರ್ವೆಯರ್ ACB ಬಲೆಗೆ

ಮಂಗಳೂರು: ಮಂಗಳೂರಿನ ಜನರನ್ನು ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ ( ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ M ಇಂದು ಮಂಗಳೂರಿನ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಛೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ single purmit ಅನುಮತಿಗಾಗಿ ಕೋರಿಕೆ ಪತ್ರ ಸಲ್ಲಿಸಿದ್ದರು, ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು,
ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು,
ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂಪಾಯಿ ಜೊತೆಯಲ್ಲಿ ಈತನಿಗೆ 3000 ರೂಪಾಯಿ ಕೊಟ್ಟ ಉದ್ಯಮಿಗೆ ಇನ್ನೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡಲು ಪುನಃ 30,000-00 ಡಿಮಾಂಡ್ ಇಟ್ಟಿದ್ದರು.

ಇದರಿಂದ ಮನ ನೊಂದ ಉದ್ಯಮಿ ಮಂಗಳೂರಿನ NECF ಸದಸ್ಯರ ಗಮನಕ್ಕೆ ತಂದರು ನಂತರ ಈ ವಿಚಾರವನ್ನು ಮಂಗಳೂರಿನ ACB ಇನ್ಸ್ಪೆಕ್ಟರ್ ಶ್ಯಾಮಸುಂದರ್ ರವರ ಗಮನಕ್ಕೆ ತರಲಾಯಿತು, 3 ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿ ಇಂದು ಮಂಗಳವಾರ 5-30 ರ ಹೊತ್ತಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡೊ 20, 000-00 ರೂಪಾಯಿ ಲಂಚದ ಹಣ ತೆಗೆದು ಕೊಳ್ಳುವ ಸಮಯದಲ್ಲಿ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ m ರವರನ್ನು ACB ತಂಡ ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ACB DYSP ಪ್ರಕಾಶ್, ಇನ್ಸ್ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂಧಿಗಳಾದ- ಹರಿಪ್ರಸಾದ್, ರಾಧಾಕ್ರಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು,

Spread the love
  • Related Posts

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಬೆಳ್ತಂಗಡಿ:ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. “ನಶೆ ಬೇಡ… ನಾಳೆಯ ಭವಿಷ್ಯ ಬೇಕು” ಹಾಗೂ…

    Spread the love

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ದೈತ್ಯ ಗಾತ್ರದ ಕಾಡಾನೆ ಕಂಡುಬಂದಿದೆ. ಘಾಟಿ ಭಾಗದಲ್ಲಿ ಆಗಾಗ ಕಾಣಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ…

    Spread the love

    You Missed

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 4 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 6 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 6 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 12 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 7 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 10 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ