ಲಂಚದ ಹಣಕ್ಕಾಗಿ ಪೀಡಿಸುತಿದ್ದ ಸರ್ವೆಯರ್ ACB ಬಲೆಗೆ

ಮಂಗಳೂರು: ಮಂಗಳೂರಿನ ಜನರನ್ನು ಲಂಚದ ಹಣಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ ( ಮಂಗಳೂರು ತಾಲೂಕಿನ ಪ್ರಭಾರ) ಗಂಗಾಧರ M ಇಂದು ಮಂಗಳೂರಿನ ACB ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮಂಗಳೂರಿನ ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಛೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆಗೆ single purmit ಅನುಮತಿಗಾಗಿ ಕೋರಿಕೆ ಪತ್ರ ಸಲ್ಲಿಸಿದ್ದರು, ಮಂಗಳೂರು ನಗರದ ಅರಣ್ಯ ಇಲಾಖೆ ಈ ಪತ್ರವನ್ನು ಕಂದಾಯ ಇಲಾಖೆಗೆ ಕಳಿಸಿತ್ತು,
ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್ ಸ್ಥಳ ಪರಿಶೀಲನೆ ನಡೆಸಲು 3000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು,
ಕಂದಾಯ ಇಲಾಖೆಗೆ ಕಟ್ಟಬೇಕಾದ 600 ರೂಪಾಯಿ ಜೊತೆಯಲ್ಲಿ ಈತನಿಗೆ 3000 ರೂಪಾಯಿ ಕೊಟ್ಟ ಉದ್ಯಮಿಗೆ ಇನ್ನೊಂದು ತಿಂಗಳು ಕಳೆದರೂ ಮರ ಇರುವ ಸ್ಥಳದ ನಕಾಶೆ ನೀಡಲು ಪುನಃ 30,000-00 ಡಿಮಾಂಡ್ ಇಟ್ಟಿದ್ದರು.

ಇದರಿಂದ ಮನ ನೊಂದ ಉದ್ಯಮಿ ಮಂಗಳೂರಿನ NECF ಸದಸ್ಯರ ಗಮನಕ್ಕೆ ತಂದರು ನಂತರ ಈ ವಿಚಾರವನ್ನು ಮಂಗಳೂರಿನ ACB ಇನ್ಸ್ಪೆಕ್ಟರ್ ಶ್ಯಾಮಸುಂದರ್ ರವರ ಗಮನಕ್ಕೆ ತರಲಾಯಿತು, 3 ದಿನಗಳ ಮುಂಜಾಗ್ರತಾ ಕಾರ್ಯಾಚರಣೆ ಮಾಡಿ ಇಂದು ಮಂಗಳವಾರ 5-30 ರ ಹೊತ್ತಿಗೆ ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಚೌಕಾಶಿ ಮಾಡೊ 20, 000-00 ರೂಪಾಯಿ ಲಂಚದ ಹಣ ತೆಗೆದು ಕೊಳ್ಳುವ ಸಮಯದಲ್ಲಿ ಸಾಕ್ಷಿ ಸಮೇತ ಸರ್ವೇಯರ್ ಗಂಗಾಧರ್ m ರವರನ್ನು ACB ತಂಡ ಬಂಧಿಸಿದೆ.

ಕಾರ್ಯಾಚರಣೆಯಲ್ಲಿ ACB DYSP ಪ್ರಕಾಶ್, ಇನ್ಸ್ಪೆಕ್ಟರ್ ಗಳಾದ ಶ್ಯಾಮಸುಂದರ್ ಮತ್ತು ಗುರುರಾಜ್, ಸಿಬಂಧಿಗಳಾದ- ಹರಿಪ್ರಸಾದ್, ರಾಧಾಕ್ರಷ್ಣ ಕೆ, ಗಂಗಣ್ಣ, ರಾಧಾಕೃಷ್ಣ, ಉಮೇಶ್, ಆದರ್ಶ, ರಾಕೇಶ್, ರಾಜೇಶ್, ಭರತ್, ಮೋಹನ್ ಸಾಲಿಯಾನ್ ಪಾಲ್ಗೊಂಡಿದ್ದರು,

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು