ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಇಲಾಖೆ ಕಾರ್ಯಕ್ರಮ ರೂಪಿಸಲಿದೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ತುಮಕೂರು: ನಗರದ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದರು.

ಬೆಳಿಗ್ಗೆಯೇ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಮಠದ ಮಕ್ಕಳಿಗೆ ಉಪಾಹಾರ ಬಡಿಸಿದರು. ಪರೀಕ್ಷೆ ಮಾಡಿದ್ದು ಸರಿಯೇ ಎಂದು ಮಕ್ಕಳನ್ನು ಪ್ರಶ್ನಿಸಿದರು. ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು. ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಿರುವುದನ್ನು ವೀಕ್ಷಿಸಿದರು.

ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶೇ 98.76ರಷ್ಟು ಮಕ್ಕಳ ಹಾಜರಾತಿ ಇತ್ತು. ಈ ಬಾರಿ ಕೊರೊನಾ ಭಯದಿಂದ ಮಕ್ಕಳ ಹಾಜರಾತಿ ಮತ್ತಷ್ಟು ಕಡಿಮೆ ಆಗುವ ಭೀತಿ ಕಾಡುತ್ತಿತ್ತು. ಆದರೆ ಸರ್ಕಾರ ಸುರಕ್ಷತಾ ಕ್ರಮಗಳನ್ನು ಕೈಗೊಂಡ ಕಾರಣ ಶೇ 98ರಷ್ಟು ಹಾಜರಾತಿ ಇದೆ ಎಂದು ತಿಳಿಸಿದರು.

ಇದುವರೆಗೂ ಕೋವಿಡ್ ಪ್ರಕರಣದಿಂದ ಪರೀಕ್ಷೆಗೆ 32 ವಿದ್ಯಾರ್ಥಿಗಳು ಹಾಜರಾಗಿಲ್ಲ. ಈ ಮಕ್ಕಳಿಗೆ ಆಗಸ್ಟ್‌ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದರು.

ಸಿದ್ಧಗಂಗಾ ಮಠದಲ್ಲಿ ನಿಜವಾದ ಶಿಕ್ಷಣ ಸೇವೆ ನಡೆಯುತ್ತಿದೆ. ಬೇರೆ ಬೇರೆ ಊರುಗಳಲ್ಲಿದ್ದ ಮಕ್ಕಳು ಅಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಇದ್ದರೂ ಮಠದ ಪರಿಸರದಲ್ಲೇ ಪರೀಕ್ಷೆ ಬರೆಯುವುದಕ್ಕೆ ಮಕ್ಕಳು ಬಂದಿದ್ದಾರೆ. ಇದನ್ನು ಗಮನಿಸಿದರೆ ಮಠದ ಶಿಕ್ಷಣ ಸೇವೆ ಎಂತಹದ್ದು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಆಗಸ್ಟ್ ಬಳಿಕ ಪ್ರಾರಂಭ: ರಾಜ್ಯದಲ್ಲಿ ಅನುದಾನ ಮತ್ತು ಅನುದಾನ ರಹಿತ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ವೇತನ ನೀಡುವ ಬಗ್ಗೆ ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಸಂಘದ ಪ್ರತಿನಿಧಿಗಳನ್ನು ಮುಖ್ಯಮಂತ್ರಿ ಬಳಿಗೆ ಕರೆತಂದು ಚರ್ಚಿಸಿದ್ದೇವೆ. ಬಡ್ಡಿ ರಹಿತ ಸಾಲ ಕೊಟ್ಟರೆ ಶಿಕ್ಷಕರಿಗೆ ವೇತನ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರೂಪುರೇಷೆ ಸಿದ್ಧಪಡಿಸುವಂತೆ ತಿಳಿಸಿದ್ದೇನೆ. ಅವರು ಬ್ಯಾಂಕ್‌ನವರ ಜತೆ ಮಾತುಕತೆ ನಡೆಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಂತರ ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಇಲಾಖೆ ಕಾರ್ಯಕ್ರಮ ರೂಪಿಸಲಿದೆ ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ, ಮುಖಂಡ ಚಿದಾನಂದ ಎಂ.ಗೌಡ, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಬಿಇಒ ಹನುಮನಾಯಕ್ ಇದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು