ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಇಲಾಖೆ ಕಾರ್ಯಕ್ರಮ ರೂಪಿಸಲಿದೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ತುಮಕೂರು: ನಗರದ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದರು.

ಬೆಳಿಗ್ಗೆಯೇ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದರು. ಮಠದ ಮಕ್ಕಳಿಗೆ ಉಪಾಹಾರ ಬಡಿಸಿದರು. ಪರೀಕ್ಷೆ ಮಾಡಿದ್ದು ಸರಿಯೇ ಎಂದು ಮಕ್ಕಳನ್ನು ಪ್ರಶ್ನಿಸಿದರು. ಕೇಂದ್ರಕ್ಕೆ ಭೇಟಿ ನೀಡಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು. ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಿರುವುದನ್ನು ವೀಕ್ಷಿಸಿದರು.

ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶೇ 98.76ರಷ್ಟು ಮಕ್ಕಳ ಹಾಜರಾತಿ ಇತ್ತು. ಈ ಬಾರಿ ಕೊರೊನಾ ಭಯದಿಂದ ಮಕ್ಕಳ ಹಾಜರಾತಿ ಮತ್ತಷ್ಟು ಕಡಿಮೆ ಆಗುವ ಭೀತಿ ಕಾಡುತ್ತಿತ್ತು. ಆದರೆ ಸರ್ಕಾರ ಸುರಕ್ಷತಾ ಕ್ರಮಗಳನ್ನು ಕೈಗೊಂಡ ಕಾರಣ ಶೇ 98ರಷ್ಟು ಹಾಜರಾತಿ ಇದೆ ಎಂದು ತಿಳಿಸಿದರು.

ಇದುವರೆಗೂ ಕೋವಿಡ್ ಪ್ರಕರಣದಿಂದ ಪರೀಕ್ಷೆಗೆ 32 ವಿದ್ಯಾರ್ಥಿಗಳು ಹಾಜರಾಗಿಲ್ಲ. ಈ ಮಕ್ಕಳಿಗೆ ಆಗಸ್ಟ್‌ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದರು.

ಸಿದ್ಧಗಂಗಾ ಮಠದಲ್ಲಿ ನಿಜವಾದ ಶಿಕ್ಷಣ ಸೇವೆ ನಡೆಯುತ್ತಿದೆ. ಬೇರೆ ಬೇರೆ ಊರುಗಳಲ್ಲಿದ್ದ ಮಕ್ಕಳು ಅಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಇದ್ದರೂ ಮಠದ ಪರಿಸರದಲ್ಲೇ ಪರೀಕ್ಷೆ ಬರೆಯುವುದಕ್ಕೆ ಮಕ್ಕಳು ಬಂದಿದ್ದಾರೆ. ಇದನ್ನು ಗಮನಿಸಿದರೆ ಮಠದ ಶಿಕ್ಷಣ ಸೇವೆ ಎಂತಹದ್ದು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಆಗಸ್ಟ್ ಬಳಿಕ ಪ್ರಾರಂಭ: ರಾಜ್ಯದಲ್ಲಿ ಅನುದಾನ ಮತ್ತು ಅನುದಾನ ರಹಿತ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ವೇತನ ನೀಡುವ ಬಗ್ಗೆ ಅನುದಾನ ಮತ್ತು ಅನುದಾನ ರಹಿತ ಶಾಲೆಗಳ ಸಂಘದ ಪ್ರತಿನಿಧಿಗಳನ್ನು ಮುಖ್ಯಮಂತ್ರಿ ಬಳಿಗೆ ಕರೆತಂದು ಚರ್ಚಿಸಿದ್ದೇವೆ. ಬಡ್ಡಿ ರಹಿತ ಸಾಲ ಕೊಟ್ಟರೆ ಶಿಕ್ಷಕರಿಗೆ ವೇತನ ನೀಡುವುದಾಗಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರೂಪುರೇಷೆ ಸಿದ್ಧಪಡಿಸುವಂತೆ ತಿಳಿಸಿದ್ದೇನೆ. ಅವರು ಬ್ಯಾಂಕ್‌ನವರ ಜತೆ ಮಾತುಕತೆ ನಡೆಸಿದ್ದಾರೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಂತರ ಅನುದಾನ ರಹಿತ ಶಾಲೆಗಳ ಸಮಸ್ಯೆ ಪರಿಹಾರಕ್ಕಾಗಿ ಇಲಾಖೆ ಕಾರ್ಯಕ್ರಮ ರೂಪಿಸಲಿದೆ ಎಂದರು.

ಶಾಸಕ ಜಿ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ವೈ.ಎನ್.ನಾರಾಯಣಸ್ವಾಮಿ, ಮುಖಂಡ ಚಿದಾನಂದ ಎಂ.ಗೌಡ, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಬಿಇಒ ಹನುಮನಾಯಕ್ ಇದ್ದರು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 207 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 53 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 51 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 112 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 48 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 89 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ