ಸಾರ್ವಜನಿಕ ಆಸ್ತಿ ಪಾಸ್ತಿಗೆ ತೊಡಕಾಗುವ ಕಲ್ಲುಗಣಿಗಾರಿಕೆ

✍🏻 ಆದರ್ಶ್ ಶೆಟ್ಟಿ ಉಪ್ಪಿನಂಗಡಿ

ಕಳೆದೊಂದು ದಶಕದ ಆಚೆಗೆ ಅಕ್ರಮ ಗಣಿಗಾರಿಕೆ ಎಂಬುವುದು ರಾಜ್ಯ ರಾಜಕಾರಣವನ್ನೇ ತಲ್ಲಣಗೊಳಿಸಿರುವುದಲ್ಲದೆ, ರಾಷ್ಟ್ರಮಟ್ಟದಲ್ಲೂ ಸಾಕಷ್ಟು ಸಂಚಲನ ಮೂಡಿಸಿತ್ತು. ಈ ವಿಚಾರವು ರಾಜ್ಯದ ಶಕ್ತಿ ಸೌಧದಲ್ಲೂ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿರುವುದಲ್ಲದೆ, ಪ್ರಭಾವಿ ರಾಜಕಾರಣಿಗಳು ಕೂಡ ಮಾಡಿದ ತಪ್ಪಿನ ಪ್ರಾಯಶ್ಚಿತಕ್ಕಾಗಿ ಜೈಲುವಾಸ ಅನುಭವಿಸಿ ಹೊರಬಂದಿರುವುದು ಹಳೆ ಕಥೆಯಾದರೆ,ಈ ಬಾರಿ ಸದ್ದು ಮಾಡುತ್ತಿರುವುದು ಅಕ್ರಮ ಕಲ್ಲು ಗಣಿಗಾರಿಕೆಯ ವಿಚಾರ.

ಅಕ್ರಮ ಕಲ್ಲು ಗಣಿಗಾರಿಕೆಯ ತೀವ್ರತೆ ಎಷ್ಟರಮಟ್ಟಿಗೆ ವ್ಯಾಪಿಸಿದೆಯೆಂದರೆ ಕಳೆದ ವರ್ಷ ಗ್ರಾಮೀಣ ಭಾಗದ ಸರಕಾರಿ ಶಾಲೆಯೊಂದರ ಅಣತಿ ದೂರದಲ್ಲಿ ಅಕ್ರಮವಾಗಿ ಸ್ಪೋಟಕ ಬಳಸಿ ಕಲ್ಲು ಗಣಿಗಾರಿಕೆ ನಡೆಸಿರುವುದರಿಂದ ಇದರ ತೀವ್ರತೆಗೆ ಶಾಲೆಯೇ ಅದುರಿ ಹೋಗಿ ವಿದ್ಯಾರ್ಥಿಗಳು ಆತಂಕದಲ್ಲೇ ಪಾಠ ಆಲಿಸಬೇಕಾದ ಸಂದಿಗ್ಧ ಸ್ಥಿತಿ ಬಂದೊದಗಿತ್ತು. ಗಂಭೀರತೆ ಅರಿತ ಮುಖ್ಯೋಪಾಧ್ಯಾಯರು ಸಂಬಂಧಪಟ್ಟವರಿಗೆ ದೂರು ಸಲ್ಲಿಸಿದ ಬೆನ್ನಲ್ಲೇ ದಂಧೆಯಲ್ಲಿ ತೊಡಗಿದ್ದ ಪ್ರಭಾವಿ ವ್ಯಕ್ತಿಗಳಿಂದ ಮತ್ತು ಗೂಂಡಾಗಳಿಂದ ಜೀವಬೆದರಿಕೆ ಎದುರಿಸಬೇಕಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಅತಿ ಎತ್ತರದ ಗುಡ್ಡಪ್ರದೇಶದ ಮೇಲಿರುವ ಇತಿಹಾಸ ಪ್ರಸಿದ್ಧ ಭೂಕೈಲಾಸನಾಥ ಪ್ರತೀತಿಯ ಕಾರೀಂಜೇಶ್ವರ ದೇವಾಲಯದ ಬಳಿ ಜಿಲೆಟಿನ್ ಬಳಸಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವುದರಿಂದ ಇದರ ಸ್ಪೋಟಕ್ಕೆ ದೇವಾಲಯದ ಸುತ್ತಮುತ್ತ ಬಿರುಕು ಉಂಟಾಗಿ ದೇವಾಲಯದ ಸ್ಥಿತಿ ಆತಂಕದಲ್ಲಿತ್ತು. ಮಂಡ್ಯ ಜಿಲ್ಲೆಯ ಮದ್ದೂರು, ಚಂದಳ್ಳಿ,ಕೋಳಿಗುಡ್ಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುವ ಈ ಕಲ್ಲು ಗಣಿಗಾರಿಕೆಯಿಂದ ಸುಂದರ ಇತಿಹಾಸ ಪ್ರಸಿದ್ಧ ಬೆಟ್ಟಗುಡ್ಡಗಳು ಬಗೆದು ನೆಲಸಮಗೊಂಡಿರುವುದು ಒಂದೆಡೆಯಾದರೆ ನದಿಗಳು ಮಲೀನಗೊಳ್ಳುವುದು, ಸ್ಫೋಟಕ್ಕೆ ರಾಸಾಯನಿಕ ವಸ್ತುಗಳ ಬಳಕೆಯಿಂದ ಧೂಳು ಮುಂತಾದ ಕಾರಣಕ್ಕೆ ಕೃಷಿ ಚಟುವಟಿಕೆಗಳಿಗೆ ಹಾನಿಯಾಗುತ್ತಿರುವುದು ಕಂಡು ಬರುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲೂ ಪ್ರಭಾವಿ ರಾಜಕಾರಣಿಯೋರ್ವರ ಪುತ್ರ ಅಕ್ರಮ ಕಲ್ಲು ಗಣಿಗಾರಿಕೆಯಲ್ಲಿ ತೊಡಗಿದ್ದು, ಇವುಗಳ ಪೈಕಿ ಗುತ್ತಿಗೆ ಪಡೆದುಕೊಂಡಿದ್ದರೂ ಫಹಣಿಯಲ್ಲಿ ನಮೂದಾಗದಿರುವುದು ಅಕ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇಂತಹ ದಂಧೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದು, ಕೆಲ ಜಿಲ್ಲಾಡಳಿತ, ಅರಣ್ಯ, ಕಂದಾಯ, ಗಣಿ ಇಲಾಖೆಗಳ ನೆರಳಿನಡಿಯಲ್ಲೇ ಸಾಗಿ ಇಲಾಖೆಗಳು ಕಣ್ಣಿದ್ದೂ ಕುರುಡಾಗುತ್ತಿವೆ. ಪ್ರಕೃತಿದತ್ತವಾಗಿ ಸಿಗುವ ಸಂಪನ್ಮೂಲಗಳಾದ ಕಾಡು ಭೂಮಿ, ನದಿ,ಕೆರೆ ಇವುಗಳನ್ನು ಒತ್ತುವರಿ ಮಾಡಿಕೊಂಡು ರಾಜಕಾರಣಿಗಳು ಇದ್ಯಾವುದನ್ನೂ ಬಿಡುತ್ತಿಲ್ಲ. ದೂರದ ತಮಿಳುನಾಡು, ಆಂಧ್ರಪ್ರದೇಶ,ಬಿಹಾರ ಸೇರಿದಂತೆ ಹೊರಜಿಲ್ಲೆಯ ಕಾರ್ಮಿಕರನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಂಡು ಸ್ಪೋಟ ನಡೆಸುವಂತಹ ಅಪಾಯಕಾರಿ ಕಾರ್ಯಗಳಿಗೆ ಬಳಸಿಕೊಂಡು ತಮ್ಮ ಆಯುಷ್ಯವನ್ನು ಇಲ್ಲೇ ಕಳೆದುಕೊಳ್ಳುವ ಕಾರ್ಮಿಕರು ಜೀವನಭದ್ರತೆಯಿಲ್ಲದೆ ಸ್ಪೋಟಕ್ಕೆ ಸಾವನ್ನಪ್ಪಿದ ನೂರಾರು ನಿದರ್ಶನಗಳಿವೆ.

ಇದಕ್ಕೆ ಪೂರಕವೆಂಬಂತೆ ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಅಬ್ಬಲಗೆರೆ ಹುಣಸೋಡು ಕಲ್ಲು ಗಣಿಗಾರಿಕೆ ಸ್ಥಳದಲ್ಲಿ ನಡೆದ ದುರಂತವೇ ಸಾಕ್ಷಿ. ಈಗಾಗಲೇ ಹಲವೆಡೆ ನಡೆಯುತ್ತಿರುವ ಕಾನೂನು ಬಾಹಿರ ಅಕ್ರಮ ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ ಮತ್ತು ಎಲ್ಲೆಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆಯೋ ಅದನ್ನು ತಡೆಯಲು ಬಿಗಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ತಿಳಿಸಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕಾದ ಹೊಣೆ ರಾಜ್ಯ ಸರಕಾರದ ಮೇಲಿದೆ. ಇಂತಹ ಚಟುವಟಿಕೆಯ ಹೆಸರಿನಲ್ಲಿ ನಡೆಯುವ ಗೂಂಡಾಗಿರಿ,ರೌಡಿಸಂ ಚಟುವಟಿಕೆಗಳಿಗೂ ಸರಕಾರ ಕಡಿವಾಣ ಹಾಕುವುದರೊಂದಿಗೆ ಅಪರಾಧ ಹಿನ್ನೆಯುಳ್ಳವರಿಗೆ ಇಂತಹ ಚಟುವಟಿಕೆಗಳಿಗೆ ಪರವಾನಗಿ ನೀಡದೆ, ಪ್ರಕೃತಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟವುಂಟುಮಾಡುವ, ಪ್ರಾಣ ಹಾನಿ ಉಂಟು ಮಾಡುವ ಸ್ಪೋಟಕ ಬಳಕೆಗೆ ಸರಕಾರ ಅಗತ್ಯ ಕಡಿವಾಣ ಹಾಕಬೇಕಾಗಿದೆ.


Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 285 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 94 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 91 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 79 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 64 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ