೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ‘ಹಿಂದೂ ರಾಷ್ಟ್ರ’ ಕುರಿತಾದ ವಿಚಾರ ಸಂಕೀರ್ಣದಲ್ಲಿ ಗಣ್ಯರ ಭಾಷಣ !

‘ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ಇವು ನಗರ ನಕ್ಸಲವಾದಿಗಳ
ಹಾಗೂ ಜಿಹಾದಿಗಳ ದೇಶವಿರೋಧಿ ಸಂಚು !
– ಕಪಿಲ ಮಿಶ್ರಾ, ಮಾಜಿ ಶಾಸಕ, ದೆಹಲಿ


ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ ಶಾಹೀನ್‌ಬಾಗ ಆಂದೋಲನ ಇವು ನಗರ ನಕ್ಸಲವಾದಿ ಹಾಗೂ ಜಿಹಾದಿಗಳು ಭಾರತದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಆಯೋಜನಾ ಬದ್ಧವಾಗಿ ರೂಪಿಸಿದ್ದ ದೊಡ್ಡ ದೇಶದ್ರೋಹಿ ಸಂಚಾಗಿತ್ತು, ಈಗ ‘ಆಮ್ ಆದಮಿ ಪಾರ್ಟಿ’ಯ ನಗರ ಸೇವಕ ತಾಹೀರ ಹುಸೇನ್ ದೆಹಲಿಯ ಗಲಭೆಯಲ್ಲಿ ತನ್ನ ಕೈವಾಡವಿತ್ತೆಂದು ಒಪ್ಪಿಕೊಂಡಿರುವುದು ಸ್ಪಷ್ಟವಾಗಿದೆ, ಇಂತಹ ಜ್ವಲಂತ ವಿಚಾರವನ್ನು ದೆಹಲಿಯ ಮಾಜಿ ಶಾಸಕ ಕಪಿಲ ಮಿಶ್ರಾ ಇವರು ಮಂಡಿಸಿದರು. ಅವರು 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು.
ಈ ‘ಆನ್‌ಲೈನ್’ ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ‘ಹಿಂದೂ ಅಧಿವೇಶನ’ ಈ ‘ಫೇಸ್‌ಬುಕ್ ಪೇಜ್’ ಮೂಲಕ ಲೈವ್ ಪ್ರಸಾರವಾಗುತ್ತಿದ್ದು 56 ಸಾವಿರಕ್ಕಿಂತ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 2 ಲಕ್ಷ ಕ್ಕಿಂತ ಹೆಚ್ಚು ಜನರ ತನಕ ತಲುಪಿದೆ.

ಮುಂಬಯಿಯ ‘ಲಷ್ಕರ-ಎ-ಹಿಂದ್’ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಈಶ್ವರಪ್ರಸಾದ ಖಂಡೆಲವಾಲ ಇವರು ‘ಅರ್ಬನ್ ನಕ್ಸಲವಾದ : ಸಮಸ್ಯೆ ಹಾಗೂ ಉಪಾಯ’ ಈ ವಿಷಯದ ಬಗ್ಗೆ ಮಾತನಾಡುತ್ತಾ, ‘ನಗರ ನಕ್ಸಲವಾದವನ್ನು ಬಯಲಿಗೆಳೆಯುತ್ತ ಹಿಂದೂಗಳು ಸಂಘಟಿತರಾಗಿ ಪ್ರತಿಕಾರ ಮಾಡಬೇಕು’, ಎಂದು ಕರೆ ನೀಡಿದರು.

ಹಿಂದೂ ಜನಜಾಗೃತಿ ಸಮಿತಿಯ ಪೂರ್ವ ಹಾಗೂ ಪೂರ್ವೋತ್ತರ ಭಾರತದ ಮಾರ್ಗದರ್ಶಕರಾದ ಪೂ. ನೀಲೇಶ ಸಿಂಗಬಾಳ ಇವರು ‘ಹಿಂದೂ ರಾಷ್ಟ್ರದ ಪ್ರಸಾರ ಮಾಡಲು ನಡೆಸಲಾಗುತ್ತಿರುವ ಉಪಕ್ರಮ’ ಈ ವಿಷಯದ ಬಗ್ಗೆ ಮಾತನಾಡುತ್ತಾ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹೇಗೆ ಪ್ರಸಾರ ಮಾಡಬೇಕು, ಎಂಬುದರ ಬಗ್ಗೆ ಪ್ರಭಾವಿಯಾಗಿ ಮಾರ್ಗದರ್ಶನವನ್ನು ಮಾಡಿದರು.


‘ಹಿಂದೂ ರಾಷ್ಟ್ರದ ಅವಶ್ಯಕತೆ ಹಾಗೂ ದಿಕ್ಕು’ ಈ ವಿಚಾರಸಂಕೀರ್ಣದಲ್ಲಿ ಗಣ್ಯರ ಹಿಂದೂ ರಾಷ್ಟ್ರದ ಬಗ್ಗೆ ವಿಚಾರಮಂಥನ !


ಇಂದು ಸಮಾನತೆ ಹಾಗೂ ಜಾತ್ಯತೀತ ಈ ತತ್ತ್ವಗಳನ್ನು ಹೇಳುತ್ತಾ ಸರಕಾರ ಹಿಂದೂಗಳ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಿದೆ; ಆದರೆ ಒಂದೇ ಒಂದು ಮಸೀದಿ ಅಥವಾ ಚರ್ಚ್‌ಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಹಿಂದೂಗಳಿಗೆ ಧಾರ್ಮಿಕ ಯಾತ್ರೆಗಳಿಗೆ ಸೌಲಭ್ಯಗಳನ್ನು ನೀಡುವುದಿಲ್ಲ; ಆದರೆ ಹಜ್ ಯಾತ್ರೆಗೆ ಕೋಟಿಗಟ್ಟಲೆ ರೂಪಾಯಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಿಂದೂಗಳಿಗೆ ಧಾರ್ಮಿಕ ಶಿಕ್ಷಣ ನೀಡುವ ಅಧಿಕಾರ ಇಲ್ಲ; ಆದರೆ ಅಲ್ಪಸಂಖ್ಯಾತರಿಗೆ ಧಾರ್ಮಿಕ ಶಿಕ್ಷಣಕ್ಕಾಗಿ ಅನುದಾನ ನೀಡಲಾಗುತ್ತದೆ. ಇದು ಬಹುಸಂಖ್ಯಾತ ಹಿಂದೂಗಳಿಗೆ ಮಾಡಿದ ಘೋರ ಅನ್ಯಾಯವೇ ಆಗಿದೆ. ಈ ಅನ್ಯಾಯವನ್ನು ದೂರಗೊಳಿಸಲು ಹಿಂದೂ ರಾಷ್ಟ್ರದ ಸ್ಥಾಪನೆಯ ಅವಶ್ಯಕತೆ ಇದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಸಮಯದಲ್ಲಿ ಹೇಳಿದರು.


ಈ ಸಮಯದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಹಾಗೂ ‘ಹಿಂದೂ ಫ್ರಂಟ್ ಫಾರ್ ಜಸ್ಟೀಸ್’ನ ವಕ್ತಾರರಾದ ವಿಷ್ಣು ಶಂಕರ ಜೈನ್ ಇವರು ಮಾತನಾಡುತ್ತಾ, ಹಿಂದೂ ರಾಷ್ಟ್ರದ ಬೇಡಿಕೆ ಇದು ಸಂವಿಧಾನಿಕವೇ ಆಗಿದೆ; ಏಕೆಂದರೆ ಭಾರತದ ಮೂಲ ಸಂವಿಧಾನದ ಪ್ರಸ್ತಾವನೆಯಲ್ಲಿ ಪಂಥನಿರಪೇಕ್ಷ (ಸೆಕ್ಯೂಲರ್) ಹಾಗೂ ಸಮಾಜವಾದ ಈ ಎರಡೂ ಪದಗಳು ಇರಲಿಲ್ಲ. ತುರ್ತು ಪರಿಸ್ಥಿತಿಯ ಕಾಲಾವಧಿಯಲ್ಲಿ ವಿಪಕ್ಷಗಳು ಸೆರೆಮನೆಯಲ್ಲಿರುವಾಗ ಯಾವುದೇ ಚರ್ಚೆ ಮಾಡದೇ ಸಂವಿಧಾನಬಾಹಿರವಾಗಿ ಈ ಪದವನ್ನು ತುರುಕಿಸಲಾಯಿತು. ಅದನ್ನು ತುರುಕಿಸಿದಂತೆಯೇ ತೆಗೆಯಲೂ ಬಹುದು’‘ ಎಂದು ಹೇಳಿದರು.

ಈ ಸಮಯದಲ್ಲಿ ವಿಚಾರವಂತ ಹಾಗೂ ಲೇಖಕರಾದ ಶ್ರೀ. ವಿಕಾಸ ಸಾರಸ್ವತ ಇವರು ಹಿಂದೂ ರಾಷ್ಟ್ರದ ಸ್ಥಾಪನೆಯ ಅವಶ್ಯಕತೆಯ ಬಗ್ಗೆ ಹೇಳುತ್ತಿರುವಾಗ ‘ಎಲ್ಲಕ್ಕಿಂತ ಮೊದಲು ನಾವು ಶಿಷ್ಯರಾಗಬೇಕು’, ಎಂದು ಹೇಳಿದರು.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 19 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 25 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 80 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 26 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 54 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್

    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ

    • By admin
    • February 13, 2026
    • 39 views
    ಪುತ್ತೂರಿನಲ್ಲಿ ಲಕ್ಷ್ಯ ಡೇ ಕೇರ್ ಸೆಂಟರ್ ಹಾಗೂ ಲಕ್ಷ್ಯ ಕೌನ್ಸಲಿಂಗ್ ಸೆಂಟರ್ ಲೋಕಾರ್ಪಣೆ