೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ‘ಹಿಂದೂ ರಾಷ್ಟ್ರ’ ಕುರಿತಾದ ವಿಚಾರ ಸಂಕೀರ್ಣದಲ್ಲಿ ಗಣ್ಯರ ಭಾಷಣ !

‘ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ಇವು ನಗರ ನಕ್ಸಲವಾದಿಗಳ
ಹಾಗೂ ಜಿಹಾದಿಗಳ ದೇಶವಿರೋಧಿ ಸಂಚು !
– ಕಪಿಲ ಮಿಶ್ರಾ, ಮಾಜಿ ಶಾಸಕ, ದೆಹಲಿ


ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ ಶಾಹೀನ್‌ಬಾಗ ಆಂದೋಲನ ಇವು ನಗರ ನಕ್ಸಲವಾದಿ ಹಾಗೂ ಜಿಹಾದಿಗಳು ಭಾರತದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಆಯೋಜನಾ ಬದ್ಧವಾಗಿ ರೂಪಿಸಿದ್ದ ದೊಡ್ಡ ದೇಶದ್ರೋಹಿ ಸಂಚಾಗಿತ್ತು, ಈಗ ‘ಆಮ್ ಆದಮಿ ಪಾರ್ಟಿ’ಯ ನಗರ ಸೇವಕ ತಾಹೀರ ಹುಸೇನ್ ದೆಹಲಿಯ ಗಲಭೆಯಲ್ಲಿ ತನ್ನ ಕೈವಾಡವಿತ್ತೆಂದು ಒಪ್ಪಿಕೊಂಡಿರುವುದು ಸ್ಪಷ್ಟವಾಗಿದೆ, ಇಂತಹ ಜ್ವಲಂತ ವಿಚಾರವನ್ನು ದೆಹಲಿಯ ಮಾಜಿ ಶಾಸಕ ಕಪಿಲ ಮಿಶ್ರಾ ಇವರು ಮಂಡಿಸಿದರು. ಅವರು 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು.
ಈ ‘ಆನ್‌ಲೈನ್’ ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ‘ಹಿಂದೂ ಅಧಿವೇಶನ’ ಈ ‘ಫೇಸ್‌ಬುಕ್ ಪೇಜ್’ ಮೂಲಕ ಲೈವ್ ಪ್ರಸಾರವಾಗುತ್ತಿದ್ದು 56 ಸಾವಿರಕ್ಕಿಂತ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 2 ಲಕ್ಷ ಕ್ಕಿಂತ ಹೆಚ್ಚು ಜನರ ತನಕ ತಲುಪಿದೆ.

ಮುಂಬಯಿಯ ‘ಲಷ್ಕರ-ಎ-ಹಿಂದ್’ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಈಶ್ವರಪ್ರಸಾದ ಖಂಡೆಲವಾಲ ಇವರು ‘ಅರ್ಬನ್ ನಕ್ಸಲವಾದ : ಸಮಸ್ಯೆ ಹಾಗೂ ಉಪಾಯ’ ಈ ವಿಷಯದ ಬಗ್ಗೆ ಮಾತನಾಡುತ್ತಾ, ‘ನಗರ ನಕ್ಸಲವಾದವನ್ನು ಬಯಲಿಗೆಳೆಯುತ್ತ ಹಿಂದೂಗಳು ಸಂಘಟಿತರಾಗಿ ಪ್ರತಿಕಾರ ಮಾಡಬೇಕು’, ಎಂದು ಕರೆ ನೀಡಿದರು.

ಹಿಂದೂ ಜನಜಾಗೃತಿ ಸಮಿತಿಯ ಪೂರ್ವ ಹಾಗೂ ಪೂರ್ವೋತ್ತರ ಭಾರತದ ಮಾರ್ಗದರ್ಶಕರಾದ ಪೂ. ನೀಲೇಶ ಸಿಂಗಬಾಳ ಇವರು ‘ಹಿಂದೂ ರಾಷ್ಟ್ರದ ಪ್ರಸಾರ ಮಾಡಲು ನಡೆಸಲಾಗುತ್ತಿರುವ ಉಪಕ್ರಮ’ ಈ ವಿಷಯದ ಬಗ್ಗೆ ಮಾತನಾಡುತ್ತಾ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹೇಗೆ ಪ್ರಸಾರ ಮಾಡಬೇಕು, ಎಂಬುದರ ಬಗ್ಗೆ ಪ್ರಭಾವಿಯಾಗಿ ಮಾರ್ಗದರ್ಶನವನ್ನು ಮಾಡಿದರು.


‘ಹಿಂದೂ ರಾಷ್ಟ್ರದ ಅವಶ್ಯಕತೆ ಹಾಗೂ ದಿಕ್ಕು’ ಈ ವಿಚಾರಸಂಕೀರ್ಣದಲ್ಲಿ ಗಣ್ಯರ ಹಿಂದೂ ರಾಷ್ಟ್ರದ ಬಗ್ಗೆ ವಿಚಾರಮಂಥನ !


ಇಂದು ಸಮಾನತೆ ಹಾಗೂ ಜಾತ್ಯತೀತ ಈ ತತ್ತ್ವಗಳನ್ನು ಹೇಳುತ್ತಾ ಸರಕಾರ ಹಿಂದೂಗಳ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಿದೆ; ಆದರೆ ಒಂದೇ ಒಂದು ಮಸೀದಿ ಅಥವಾ ಚರ್ಚ್‌ಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಹಿಂದೂಗಳಿಗೆ ಧಾರ್ಮಿಕ ಯಾತ್ರೆಗಳಿಗೆ ಸೌಲಭ್ಯಗಳನ್ನು ನೀಡುವುದಿಲ್ಲ; ಆದರೆ ಹಜ್ ಯಾತ್ರೆಗೆ ಕೋಟಿಗಟ್ಟಲೆ ರೂಪಾಯಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಿಂದೂಗಳಿಗೆ ಧಾರ್ಮಿಕ ಶಿಕ್ಷಣ ನೀಡುವ ಅಧಿಕಾರ ಇಲ್ಲ; ಆದರೆ ಅಲ್ಪಸಂಖ್ಯಾತರಿಗೆ ಧಾರ್ಮಿಕ ಶಿಕ್ಷಣಕ್ಕಾಗಿ ಅನುದಾನ ನೀಡಲಾಗುತ್ತದೆ. ಇದು ಬಹುಸಂಖ್ಯಾತ ಹಿಂದೂಗಳಿಗೆ ಮಾಡಿದ ಘೋರ ಅನ್ಯಾಯವೇ ಆಗಿದೆ. ಈ ಅನ್ಯಾಯವನ್ನು ದೂರಗೊಳಿಸಲು ಹಿಂದೂ ರಾಷ್ಟ್ರದ ಸ್ಥಾಪನೆಯ ಅವಶ್ಯಕತೆ ಇದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಸಮಯದಲ್ಲಿ ಹೇಳಿದರು.


ಈ ಸಮಯದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಹಾಗೂ ‘ಹಿಂದೂ ಫ್ರಂಟ್ ಫಾರ್ ಜಸ್ಟೀಸ್’ನ ವಕ್ತಾರರಾದ ವಿಷ್ಣು ಶಂಕರ ಜೈನ್ ಇವರು ಮಾತನಾಡುತ್ತಾ, ಹಿಂದೂ ರಾಷ್ಟ್ರದ ಬೇಡಿಕೆ ಇದು ಸಂವಿಧಾನಿಕವೇ ಆಗಿದೆ; ಏಕೆಂದರೆ ಭಾರತದ ಮೂಲ ಸಂವಿಧಾನದ ಪ್ರಸ್ತಾವನೆಯಲ್ಲಿ ಪಂಥನಿರಪೇಕ್ಷ (ಸೆಕ್ಯೂಲರ್) ಹಾಗೂ ಸಮಾಜವಾದ ಈ ಎರಡೂ ಪದಗಳು ಇರಲಿಲ್ಲ. ತುರ್ತು ಪರಿಸ್ಥಿತಿಯ ಕಾಲಾವಧಿಯಲ್ಲಿ ವಿಪಕ್ಷಗಳು ಸೆರೆಮನೆಯಲ್ಲಿರುವಾಗ ಯಾವುದೇ ಚರ್ಚೆ ಮಾಡದೇ ಸಂವಿಧಾನಬಾಹಿರವಾಗಿ ಈ ಪದವನ್ನು ತುರುಕಿಸಲಾಯಿತು. ಅದನ್ನು ತುರುಕಿಸಿದಂತೆಯೇ ತೆಗೆಯಲೂ ಬಹುದು’‘ ಎಂದು ಹೇಳಿದರು.

ಈ ಸಮಯದಲ್ಲಿ ವಿಚಾರವಂತ ಹಾಗೂ ಲೇಖಕರಾದ ಶ್ರೀ. ವಿಕಾಸ ಸಾರಸ್ವತ ಇವರು ಹಿಂದೂ ರಾಷ್ಟ್ರದ ಸ್ಥಾಪನೆಯ ಅವಶ್ಯಕತೆಯ ಬಗ್ಗೆ ಹೇಳುತ್ತಿರುವಾಗ ‘ಎಲ್ಲಕ್ಕಿಂತ ಮೊದಲು ನಾವು ಶಿಷ್ಯರಾಗಬೇಕು’, ಎಂದು ಹೇಳಿದರು.

Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 285 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 94 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 91 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 79 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 64 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 88 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ