೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ‘ಹಿಂದೂ ರಾಷ್ಟ್ರ’ ಕುರಿತಾದ ವಿಚಾರ ಸಂಕೀರ್ಣದಲ್ಲಿ ಗಣ್ಯರ ಭಾಷಣ !

‘ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ಇವು ನಗರ ನಕ್ಸಲವಾದಿಗಳ
ಹಾಗೂ ಜಿಹಾದಿಗಳ ದೇಶವಿರೋಧಿ ಸಂಚು !
– ಕಪಿಲ ಮಿಶ್ರಾ, ಮಾಜಿ ಶಾಸಕ, ದೆಹಲಿ


ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ ಶಾಹೀನ್‌ಬಾಗ ಆಂದೋಲನ ಇವು ನಗರ ನಕ್ಸಲವಾದಿ ಹಾಗೂ ಜಿಹಾದಿಗಳು ಭಾರತದಲ್ಲಿ ಅರಾಜಕತೆಯನ್ನು ಸೃಷ್ಟಿಸಲು ಆಯೋಜನಾ ಬದ್ಧವಾಗಿ ರೂಪಿಸಿದ್ದ ದೊಡ್ಡ ದೇಶದ್ರೋಹಿ ಸಂಚಾಗಿತ್ತು, ಈಗ ‘ಆಮ್ ಆದಮಿ ಪಾರ್ಟಿ’ಯ ನಗರ ಸೇವಕ ತಾಹೀರ ಹುಸೇನ್ ದೆಹಲಿಯ ಗಲಭೆಯಲ್ಲಿ ತನ್ನ ಕೈವಾಡವಿತ್ತೆಂದು ಒಪ್ಪಿಕೊಂಡಿರುವುದು ಸ್ಪಷ್ಟವಾಗಿದೆ, ಇಂತಹ ಜ್ವಲಂತ ವಿಚಾರವನ್ನು ದೆಹಲಿಯ ಮಾಜಿ ಶಾಸಕ ಕಪಿಲ ಮಿಶ್ರಾ ಇವರು ಮಂಡಿಸಿದರು. ಅವರು 9 ನೇ ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ’ದಲ್ಲಿ ಮಾತನಾಡುತ್ತಿದ್ದರು.
ಈ ‘ಆನ್‌ಲೈನ್’ ಅಧಿವೇಶನವು ಹಿಂದೂ ಜನಜಾಗೃತಿ ಸಮಿತಿಯ ‘ಯೂ-ಟ್ಯೂಬ್’ ಚಾನೆಲ್ ಹಾಗೂ ‘ಹಿಂದೂ ಅಧಿವೇಶನ’ ಈ ‘ಫೇಸ್‌ಬುಕ್ ಪೇಜ್’ ಮೂಲಕ ಲೈವ್ ಪ್ರಸಾರವಾಗುತ್ತಿದ್ದು 56 ಸಾವಿರಕ್ಕಿಂತ ಹೆಚ್ಚು ಜನರು ಪ್ರತ್ಯಕ್ಷವಾಗಿ ನೋಡಿದರೆ, 2 ಲಕ್ಷ ಕ್ಕಿಂತ ಹೆಚ್ಚು ಜನರ ತನಕ ತಲುಪಿದೆ.

ಮುಂಬಯಿಯ ‘ಲಷ್ಕರ-ಎ-ಹಿಂದ್’ನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ. ಈಶ್ವರಪ್ರಸಾದ ಖಂಡೆಲವಾಲ ಇವರು ‘ಅರ್ಬನ್ ನಕ್ಸಲವಾದ : ಸಮಸ್ಯೆ ಹಾಗೂ ಉಪಾಯ’ ಈ ವಿಷಯದ ಬಗ್ಗೆ ಮಾತನಾಡುತ್ತಾ, ‘ನಗರ ನಕ್ಸಲವಾದವನ್ನು ಬಯಲಿಗೆಳೆಯುತ್ತ ಹಿಂದೂಗಳು ಸಂಘಟಿತರಾಗಿ ಪ್ರತಿಕಾರ ಮಾಡಬೇಕು’, ಎಂದು ಕರೆ ನೀಡಿದರು.

ಹಿಂದೂ ಜನಜಾಗೃತಿ ಸಮಿತಿಯ ಪೂರ್ವ ಹಾಗೂ ಪೂರ್ವೋತ್ತರ ಭಾರತದ ಮಾರ್ಗದರ್ಶಕರಾದ ಪೂ. ನೀಲೇಶ ಸಿಂಗಬಾಳ ಇವರು ‘ಹಿಂದೂ ರಾಷ್ಟ್ರದ ಪ್ರಸಾರ ಮಾಡಲು ನಡೆಸಲಾಗುತ್ತಿರುವ ಉಪಕ್ರಮ’ ಈ ವಿಷಯದ ಬಗ್ಗೆ ಮಾತನಾಡುತ್ತಾ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಹೇಗೆ ಪ್ರಸಾರ ಮಾಡಬೇಕು, ಎಂಬುದರ ಬಗ್ಗೆ ಪ್ರಭಾವಿಯಾಗಿ ಮಾರ್ಗದರ್ಶನವನ್ನು ಮಾಡಿದರು.


‘ಹಿಂದೂ ರಾಷ್ಟ್ರದ ಅವಶ್ಯಕತೆ ಹಾಗೂ ದಿಕ್ಕು’ ಈ ವಿಚಾರಸಂಕೀರ್ಣದಲ್ಲಿ ಗಣ್ಯರ ಹಿಂದೂ ರಾಷ್ಟ್ರದ ಬಗ್ಗೆ ವಿಚಾರಮಂಥನ !


ಇಂದು ಸಮಾನತೆ ಹಾಗೂ ಜಾತ್ಯತೀತ ಈ ತತ್ತ್ವಗಳನ್ನು ಹೇಳುತ್ತಾ ಸರಕಾರ ಹಿಂದೂಗಳ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುತ್ತಿದೆ; ಆದರೆ ಒಂದೇ ಒಂದು ಮಸೀದಿ ಅಥವಾ ಚರ್ಚ್‌ಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಹಿಂದೂಗಳಿಗೆ ಧಾರ್ಮಿಕ ಯಾತ್ರೆಗಳಿಗೆ ಸೌಲಭ್ಯಗಳನ್ನು ನೀಡುವುದಿಲ್ಲ; ಆದರೆ ಹಜ್ ಯಾತ್ರೆಗೆ ಕೋಟಿಗಟ್ಟಲೆ ರೂಪಾಯಿ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಹಿಂದೂಗಳಿಗೆ ಧಾರ್ಮಿಕ ಶಿಕ್ಷಣ ನೀಡುವ ಅಧಿಕಾರ ಇಲ್ಲ; ಆದರೆ ಅಲ್ಪಸಂಖ್ಯಾತರಿಗೆ ಧಾರ್ಮಿಕ ಶಿಕ್ಷಣಕ್ಕಾಗಿ ಅನುದಾನ ನೀಡಲಾಗುತ್ತದೆ. ಇದು ಬಹುಸಂಖ್ಯಾತ ಹಿಂದೂಗಳಿಗೆ ಮಾಡಿದ ಘೋರ ಅನ್ಯಾಯವೇ ಆಗಿದೆ. ಈ ಅನ್ಯಾಯವನ್ನು ದೂರಗೊಳಿಸಲು ಹಿಂದೂ ರಾಷ್ಟ್ರದ ಸ್ಥಾಪನೆಯ ಅವಶ್ಯಕತೆ ಇದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ಶ್ರೀ. ರಮೇಶ ಶಿಂದೆಯವರು ಈ ಸಮಯದಲ್ಲಿ ಹೇಳಿದರು.


ಈ ಸಮಯದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿ ಹಾಗೂ ‘ಹಿಂದೂ ಫ್ರಂಟ್ ಫಾರ್ ಜಸ್ಟೀಸ್’ನ ವಕ್ತಾರರಾದ ವಿಷ್ಣು ಶಂಕರ ಜೈನ್ ಇವರು ಮಾತನಾಡುತ್ತಾ, ಹಿಂದೂ ರಾಷ್ಟ್ರದ ಬೇಡಿಕೆ ಇದು ಸಂವಿಧಾನಿಕವೇ ಆಗಿದೆ; ಏಕೆಂದರೆ ಭಾರತದ ಮೂಲ ಸಂವಿಧಾನದ ಪ್ರಸ್ತಾವನೆಯಲ್ಲಿ ಪಂಥನಿರಪೇಕ್ಷ (ಸೆಕ್ಯೂಲರ್) ಹಾಗೂ ಸಮಾಜವಾದ ಈ ಎರಡೂ ಪದಗಳು ಇರಲಿಲ್ಲ. ತುರ್ತು ಪರಿಸ್ಥಿತಿಯ ಕಾಲಾವಧಿಯಲ್ಲಿ ವಿಪಕ್ಷಗಳು ಸೆರೆಮನೆಯಲ್ಲಿರುವಾಗ ಯಾವುದೇ ಚರ್ಚೆ ಮಾಡದೇ ಸಂವಿಧಾನಬಾಹಿರವಾಗಿ ಈ ಪದವನ್ನು ತುರುಕಿಸಲಾಯಿತು. ಅದನ್ನು ತುರುಕಿಸಿದಂತೆಯೇ ತೆಗೆಯಲೂ ಬಹುದು’‘ ಎಂದು ಹೇಳಿದರು.

ಈ ಸಮಯದಲ್ಲಿ ವಿಚಾರವಂತ ಹಾಗೂ ಲೇಖಕರಾದ ಶ್ರೀ. ವಿಕಾಸ ಸಾರಸ್ವತ ಇವರು ಹಿಂದೂ ರಾಷ್ಟ್ರದ ಸ್ಥಾಪನೆಯ ಅವಶ್ಯಕತೆಯ ಬಗ್ಗೆ ಹೇಳುತ್ತಿರುವಾಗ ‘ಎಲ್ಲಕ್ಕಿಂತ ಮೊದಲು ನಾವು ಶಿಷ್ಯರಾಗಬೇಕು’, ಎಂದು ಹೇಳಿದರು.

Spread the love
  • Related Posts

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್‌ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…

    Spread the love

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ…

    Spread the love

    You Missed

    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    • By admin
    • July 3, 2026
    • 28 views
    ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ

    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    • By admin
    • July 3, 2026
    • 28 views
    ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    • By admin
    • July 2, 2026
    • 52 views
    ಹೊನ್ನಾವರದಲ್ಲಿ ಮಳೆ ಅಬ್ಬರಕ್ಕೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭೂಕುಸಿತ – ಏಕಮುಖ ಸಂಚಾರ ಬಂದ್

    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    • By admin
    • July 2, 2026
    • 142 views
    ನವಜೀವನೋತ್ಸವದಲ್ಲಿ ವ್ಯಸನಮುಕ್ತ ಹಾಗೂ ಮೌಲ್ಯಯುತ ಜೀವನಕ್ಕೆ ಡಾ. ನವೀನ್ ಚಂದ್ರ ಶೆಟ್ಟಿ ಕರೆ

    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    • By admin
    • July 2, 2026
    • 50 views
    ದಕ್ಷಿಣ ಕನ್ನಡ ಹಾಲು ಒಕ್ಕೂಟದ, ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ
    • By admin
    • July 2, 2026
    • 9 views