‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರ ಕಾಯಿದೆ – 2020’ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು: ವಿಪಕ್ಷಗಳು ಹಾಗೂ ರೈತರ ತೀವ್ರ ವಿರೋಧದ ನಡುವೆಯೇ ಡಿ.9 ರಂದು ವಿಧಾನಪರಿಷತ್‌ನಲ್ಲಿ ಅಂಗೀಕರಿಸಿದ ‘ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ) ಕಾಯಿದೆ – 2020’ ವಿಧೇಯಕಕ್ಕೆ (ಎಪಿಎಂಸಿ ತಿದ್ದುಪಡಿ) ರಾಜ್ಯಪಾಲ ವಿ.ಆರ್‌. ವಾಲಾ ಅವರು ಅಂಕಿತ ಹಾಕಿದ್ದಾರೆ.

1966ರ ಕಾಯಿದೆಯನ್ನು ತಿದ್ದುಪಡಿ ಮಾಡಿದ್ದು ಕಾಯಿದೆಯ 27 (2) ನಿಯಮದ ಪ್ರಕಾರ ಮಾರುಕಟ್ಟೆಯ ಸಮಿತಿಯು ಮಾರುಕಟ್ಟೆಪ್ರಾಂಗಣಗಳಲ್ಲಿ ಅಧಿಸೂಚಿತ ಕೃಷಿ ಉತ್ಪನ್ನಗಳ ಮಾರಾಟವನ್ನು ನಿಯಂತ್ರಿಸಬೇಕು ಎಂಬ ನಿಯಮವನ್ನು ಉಳಿಸಿಕೊಳ್ಳಲಾಗಿದೆ. ಆದರೆ, 27(3) ನಿಯಮವನ್ನು ಕೈ ಬಿಟ್ಟಿದ್ದು ಈ ಮೂಲಕ ಮಾರುಕಟ್ಟೆಪ್ರಾಂಗಣದ ಹೊರಗಡೆ ನಡೆಯುವ ಕೃಷಿ ಉತ್ಪನ್ನ ಮಾರಾಟ ಅಥವಾ ವಹಿವಾಟುಗಳನ್ನು ನಿಯಂತ್ರಿಸುವ ಹಕ್ಕನ್ನು ಮಾರುಕಟ್ಟೆಸಮಿತಿಗಳಿಂದ ಕಿತ್ತುಕೊಳ್ಳಲಾಗಿದೆ.

117ನೇ ನಿಯಮದ ತಿದ್ದುಪಡಿಯಂತೆ ಎಪಿಎಂಸಿ ಮಾರುಕಟ್ಟೆಗಳಲ್ಲದೆ ಯಾವುದೇ ವ್ಯಕ್ತಿಯು ಸ್ಥಳೀಯ ನಿಯಮಗಳನ್ನು ಪಾಲಿಸಿ ಮಾರುಕಟ್ಟೆಸ್ಥಳವನ್ನು ಸೃಷ್ಟಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) (ಎರಡನೇ ತಿದ್ದುಪಡಿ)ಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ತೀವ್ರ ವಿರೋಧದ ನಡುವೆಯೇ ಎಪಿಎಂಸಿ ಸುಧಾರಣೆ ಕಾಯಿದೆ ರಾಜ್ಯದಲ್ಲಿ ಅಂತಿಮ ಅಂಗೀಕಾರ ಪಡೆದಂತಾಗಿದೆ.

ಈ ಮೂಲಕ ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರುವ ಹಾಗೂ ಖರೀದಿದಾರರು ಮುಕ್ತವಾಗಿ ಖರೀದಿ ಮಾಡುವ ಎಪಿಎಂಸಿ ತಿದ್ದುಪಡಿ ಕಾಯಿದೆ ಅನುಷ್ಠಾನಗೊಂಡಂತಾಗಿದೆ.

ಡಿ.9 ರಂದು ತಡರಾತ್ರಿವರೆಗೆ ಬಿಜೆಪಿ ಸರ್ಕಾರದ ತಿದ್ದುಪಡಿ ವಿಧೇಯಕವನ್ನು ವಿಧಾನಪರಿಷತ್‌ನಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಸದಸ್ಯರು ವಿರೋಧಿಸಿದ್ದರು. ತಡರಾತ್ರಿ ಧ್ವನಿಮತದ ಮೂಲಕ ಸರ್ಕಾರ ಅಂಗೀಕಾರ ಪಡೆದಿತ್ತು. ಈ ವೇಳೆ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌, ಎಪಿಎಂಸಿ ತಿದ್ದುಪಡಿಯಿಂದ ಯಾವುದೇ ಎಪಿಎಂಸಿಗಳನ್ನು ಮುಚ್ಚುವುದಿಲ್ಲ. ಎಪಿಎಂಸಿ ಆಸ್ತಿಗಳ್ನೂ ಪರಭಾರೆ ಮಾಡುವುದಿಲ್ಲ. ರೈತರಿಗೆ ಮುಕ್ತವಾಗಿ ಕೃಷಿ ಉತ್ಪನ್ನ ಮಾರಾಟ ಮಾಡಲು ತಿದ್ದುಪಡಿಯಿಂದ ಅವಕಾಶ ಸಿಗಲಿದೆ. ಜೊತೆಗೆ ಬೆಂಬಲ ಬೆಲೆ ವ್ಯವಸ್ಥೆಯನ್ನು ರದ್ದುಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

Spread the love
  • Related Posts

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಉಜಿರೆ: ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯಿತಿಯ ನಿಕಟಪೂರ್ವ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಶಾಲೆಯ ಪರಿಸರದಲ್ಲಿ ಇಂಗು ಗುಂಡಿಗಳ ನಿರ್ಮಾಣದಿಂದ…

    Spread the love

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    You Missed

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 5 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 7 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 6 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 13 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 7 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 9 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ