ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 265 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 296 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 197 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ