ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.…

    Spread the love

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ,…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 4 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ