ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ 2026ರಲ್ಲಿ ವಿವಿಧ ಗಣಪನ ಅಲಂಕಾರ ನೋಡೋಣ ಬನ್ನಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ ವತಿಯಿಂದ ಮುಂಡಾಜೆ ದೇವಸ್ಥಾನದಲ್ಲಿ ಆರಾಧಿಸಲ್ಪಟ್ಟ ಸುವರ್ಣ ಸಂಭ್ರಮದ ಗಣಪತಿ. ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಆರಾಧಿಸಲ್ಪಟ್ಟ…

    Spread the love

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 7 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 9 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 14 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 11 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ