ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಮಂಗಳೂರು: ವಿದ್ಯುತ್ ಸರಬರಾಜು ಕಂಪನಿಯು ತನ್ನ ಬಿಲ್ಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬಾರಿ ಮಾರ್ಪಾಡು ಮಾಡಿ P&G ಹೆಸರಿನಲ್ಲಿ 0.36 surcharge ಮಾಡುತ್ತಿದ್ದು ಬಳಕೆದಾರರು ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಬಿಲ್ ಪಾವತಿ ಮಾಡುತ್ತಾ ಬಂದಿದ್ದು ಕಳೆದ ಎರಡು ಮೂರು ತಿಂಗಳುಗಳಿಂದ ಈ…

    Spread the love

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

    Spread the love

    You Missed

    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    • By admin
    • July 8, 2025
    • 325 views
    ವಿದ್ಯುತ್ ಸರಬರಾಜು ಕಂಪನಿ ನೀಡುತ್ತಿರುವ ಬಿಲ್ಲುಗಳಲ್ಲಿ ಬಳಕೆದಾರರಿಗೆ ಮೂಡಿದೆ P&G ಶುಲ್ಕದ ಗೊಂದಲ!!!!

    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    • By admin
    • July 8, 2025
    • 137 views
    ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು  ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    • By admin
    • July 8, 2025
    • 52 views
    ಎತ್ತಿನಹೊಳೆ ಯೋಜನೆಗೆ ಬಾರಿ ಹಿನ್ನಡೆ, 423ಎಕರೆ ಅರಣ್ಯ ಬಳಕೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿ ನಿರಾಕರಣೆ

    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    • By admin
    • July 5, 2025
    • 53 views
    ಮಂಗಳೂರು ನಗರದಲ್ಲಿರುವ ಅಂಗನವಾಡಿ ಕೇಂದ್ರ ಈಗ ಸ್ಮಾರ್ಟ್ ಅಂಗನವಾಡಿ ಕೇಂದ್ರವಾಗಿ ಪರಿವರ್ತನೆ, ಜಿಲ್ಲಾ ಪತ್ರಕರ್ತರ ಸಂಘ ಹಾಗೂ ದಾನಿಗಳಿಂದ ನೆರವು

    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    • By admin
    • July 5, 2025
    • 39 views
    ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಅಧೀಕ್ಷಕರಾದ ಗೋಕುಲ್ ದಾಸ್ ಭೇಟಿ

    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ

    • By admin
    • July 5, 2025
    • 59 views
    ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಗಾಗಿ ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಅರ್ಜಿ ಆಹ್ವಾನ