ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    You Missed

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 2 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 6 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 12 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 10 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 11 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ