ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 32 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 28 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 77 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 37 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 147 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 226 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”