ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ ತಿದ್ದುಪಡಿ ಕಾಯಿದೆಗೆ ಅನುಮೋದನೆ ದೊರೆತಿದೆ. ಹೀಗಾಗಿ ಇನ್ನು ಮುಂದೆ ಯಾವುದೇ ಆದಾಯ ಮಿತಿ ಇಲ್ಲದೆ ಹಾಗೂ ಕೃಷಿ ಕುಟುಂಬದ ಹಿನ್ನೆಲೆ ಹೊಂದಿಲ್ಲದವರೂ ಸಹ ಕೃಷಿ ಜಮೀನು ಖರೀದಿ ಮಾಡಬಹುದು.

1974ರ ಕರ್ನಾಟಕ ಭೂ ಸುಧಾರಣಾ ಕಾಯ್ದೆ ಪ್ರಕಾರ ಈವರೆಗೆ ಕೃಷಿಕರು, ಕೃಷಿ ಮೂಲದ ಕುಟುಂಬದವರು ಮಾತ್ರ ರಾಜ್ಯದಲ್ಲಿ ಕೃಷಿ ಭೂಮಿ ಖರೀದಿಸಲು ಸಾಧ್ಯವಿತ್ತು.

ಕೃಷಿಕರಲ್ಲದವರು ಕೃಷಿ ಮಾಡಲು ಆಸಕ್ತಿ ಹೊಂದಿದ್ದರೂ ಕೃಷಿ ಭೂಮಿ ಖರೀದಿಸಲು ಕಾಯ್ದೆಯಲ್ಲಿ ಅವಕಾಶವಿರಲಿಲ್ಲ. ಇಂತಹವರಿಗೆ ಅವಕಾಶ ಮಾಡಿಕೊಡಲು ಕೇವಲ ಕೃಷಿ ಸಂಬಂಧಿ ಚಟುವಟಿಕೆಗೆ ಮಾತ್ರ ಬಳಸುವ ಷರತ್ತು ವಿಧಿಸಿ ಯಾರು ಬೇಕಾದರೂ ಖರೀದಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿಮೆ ಮಾಡದೆ ಬೀಳು ಬಿದ್ದಿರುವ ಲಕ್ಷಾಂತರ ಎಕರೆಯಲ್ಲಿ ಕೃಷಿ ಚಟುವಟಿಕೆ ಶುರುವಾಗಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಇದಕ್ಕೆ ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ತಿದ್ದುಪಡಿಯ ನಂತರ ಧನವಂತರು ಕೃಷಿ ಭೂಮಿ ಖರೀದಿಸಿ ಕ್ರಮೇಣ ರಿಯಲ್‌ ಎಸ್ಟೇಟ್‌ ಮುಂತಾದ ಅನ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಪಿಸಿದ್ದಾರೆ.

ಏನಿದು ಕಾಯಿದೆ ತಿದ್ದುಪಡಿ?

ಭೂ ಸುಧಾರಣೆ ಕಾಯ್ದೆಯಡಿ ಜಾರಿಯಲ್ಲಿರುವ 63ಎ, 79ಎ ಹಾಗೂ ಬಿ ಸೆಕ್ಷನ್‌ ಪ್ರಕಾರ ರೈತ ಹಿನ್ನೆಲೆ ಹೊಂದಿಲ್ಲದವರು ಹಾಗೂ ನಿರ್ದಿಷ್ಟಆದಾಯಕ್ಕಿಂತ ಹೆಚ್ಚು ಆದಾಯ ಹೊಂದಿರುವವರು ಕೃಷಿ ಜಮೀನು ಖರೀದಿಸಲು ಅವಕಾಶ ಇರಲಿಲ್ಲ. ಇದೀಗ ಮೂರು ಸೆಕ್ಷನ್‌ ರದ್ದುಪಡಿಸಿದ್ದು, ಇನ್ನು ಮುಂದೆ ಒಂದೇ ಕುಟುಂಬದಲ್ಲಿ 5 ಸದಸ್ಯರು ಇದ್ದರೆ 108 ಎಕರೆಗಿಂತ ಹೆಚ್ಚು ಜಮೀನು ಖರೀದಿಸುವಂತಿಲ್ಲ ಎಂದು ಮಾಡಲಾಗಿದೆ.

ಸರ್ಕಾರದ ವಾದವೇನು?

ಇತ್ತೀಚೆಗೆ ಐಟಿ-ಬಿಟಿ ಕಂಪನಿಯಲ್ಲಿ ಕೆಲಸ ಮಾಡುವವರು ಕೃಷಿಯತ್ತ ಆಕರ್ಷಿತರಾಗುತ್ತಿದ್ದಾರೆ. ಜತೆಗೆ ನಮ್ಮ ರಾಜ್ಯದಲ್ಲಿ ಹೊರತುಪಡಿಸಿ ಬೇರೆಲ್ಲೂ ಕೃಷಿ ಭೂಮಿ ಖರೀದಿಗೆ ಇಂತಹ ನಿರ್ಬಂಧವಿಲ್ಲ. ರಾಜ್ಯದಲ್ಲಿನ ನಿರ್ಬಂಧದಿಂದಾಗಿ ನೆರೆ ರಾಜ್ಯದಲ್ಲಿ ಭೂಮಿ ಖರೀದಿಸುತ್ತಿದ್ದಾರೆ. 79 ಎ, ಬಿನಲ್ಲಿ ಅನಗತ್ಯವಾಗಿ 83,174 ಪ್ರಕರಣಗಳು ದಾಖಲಾಗಿದ್ದವು. ಶೇ.1ರಷ್ಟುಸಹ ಸರ್ಕಾರದಿಂದ ವಶಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿಯೇ ಭೂಮಿ ಖರೀದಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂಬುದು ಸರ್ಕಾರದ ವಾದವಾಗಿದೆ.

Spread the love
  • Related Posts

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…

    Spread the love

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಡಬಲು ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ₹2 ಲಕ್ಷ ಅನುದಾನ ವಿತರಣೆ ಸಕಲೇಶಪುರ: ತಾಲೂಕಿನ ಮಡಬಲು ಗ್ರಾಮದ ಐತಿಹಾಸಿಕ ಹಾಗೂ ಭಕ್ತರ ಆರಾಧನಾ ಕೇಂದ್ರವಾಗಿರುವ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕಾಗಿ ಶ್ರೀ…

    Spread the love

    You Missed

    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    • By admin
    • June 16, 2026
    • 84 views
    ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು

    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    • By admin
    • June 16, 2026
    • 34 views
    ದೇವಸ್ಥಾನಗಳು ಭಜನೆ, ಸಂಸ್ಕಾರ ಮತ್ತು ಭಕ್ತಿಯ ಕೇಂದ್ರವಾಗಲಿ : ಡಾ. ನವೀನ್ ಚಂದ್ರ ಶೆಟ್ಟಿ

    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    • By admin
    • June 15, 2026
    • 111 views
    ಐಸ್ ಹಾಕಿ ರಾಷ್ಟ್ರೀಯ ಚಾಂಪಿಯನ್‌ಶಿಪ್: ಕುತ್ಲೂರಿನ ನಿಷ್ಕ್ ಹರೀಶ್ ಸಾಲಿಯಾನ್‌ಗೆ ರಾಷ್ಟ್ರೀಯ ಬೆಳ್ಳಿ ಪದಕ

    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    • By admin
    • June 15, 2026
    • 73 views
    ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಜಯಕೀರ್ತಿ HB ನಿಧನ

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 46 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 82 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ