ರಸ್ತೆಯೋ, ಗುಂಡಿಗಳ ಸರಪಳಿಯೋ? ಹದಗೆಟ್ಟ ರಸ್ತೆಯ ಅಭಿವೃದ್ಧಿ ಮಾಡುವವರು ಯಾರು? ಹಲವು ವರ್ಷಗಳಿಂದ ಡಾಮರೀಕರಣ ಕಾಣದ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ; ಸಾರ್ವಜನಿಕರ ಆಕ್ರೋಶ

ಹಲವು ವರ್ಷಗಳಿಂದ ಡಾಮರೀಕರಣದ ಭಾಗ್ಯವಿಲ್ಲ; ಗುಂಡಿಗಳ ರಸ್ತೆಯಾಗಿ ಮಾರ್ಪಟ್ಟ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ, ಜೀವ ಕೈಯಲ್ಲಿ ಹಿಡಿದು ಸಂಚಾರ!

ಬೆಳ್ತಂಗಡಿ: ಧರ್ಮಸ್ಥಳ–ಪಜಿರಡ್ಕ ಸಂಪರ್ಕಿಸುವ ನೆತ್ರಾವತಿ–ಅಜುಕ್ಕುರಿ–ಮುಂಡಾಜೆ ಸಂಪರ್ಕ ರಸ್ತೆ ಕಳೆದ 17ವರ್ಷಗಳ ಹಿಂದೆ ಸಡಕ್ ಯೋಜನೆಯಡಿಯಲ್ಲಿ ರಸ್ತೆ ಕಾಮಗಾರಿ ಆಗಿದ್ದು ಇದೀಗ ಮತ್ತೆ ಹಲವು ವರ್ಷಗಳಿಂದ ಸಮರ್ಪಕ ಡಾಮರೀಕರಣ ಕಾಣದೆ ಸಂಪೂರ್ಣ ಗುಂಡಿಮಯವಾಗಿ ಮಾರ್ಪಟ್ಟಿದ್ದು, ಜನರು ಪ್ರತಿನಿತ್ಯ ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.

ಗುಂಡಿಗಳ ನಡುವೆ ಜೀವದ ಹಂಗಿನಲ್ಲಿ ಸಂಚಾರ; ರಸ್ತೆ ಅಭಿವೃದ್ಧಿ ಯಾವಾಗ?

ಮಳೆ ಸುರಿದರೆ ರಸ್ತೆಯೋ, ಕೆರೆಯೋ ಎಂಬ ಸ್ಥಿತಿ ನಿರ್ಮಾಣವಾಗುತ್ತದೆ. ರಸ್ತೆಯುದ್ದಕ್ಕೂ ಉಂಟಾಗಿರುವ ಆಳವಾದ ಗುಂಡಿಗಳಲ್ಲಿ ನೀರು ತುಂಬಿ ನಿಂತಿರುವುದರಿಂದ ವಾಹನ ಸವಾರರಿಗೆ ಗುಂಡಿಗಳ ಆಳ ಅಂದಾಜಿಸುವುದೇ ಕಷ್ಟವಾಗಿದೆ. ವಿಶೇಷವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಶಾಲಾ ವಿದ್ಯಾರ್ಥಿಗಳು ಅಪಘಾತದ ಭೀತಿಯಲ್ಲೇ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಈ ರಸ್ತೆ ಧರ್ಮಸ್ಥಳ, ಪಜಿರಡ್ಕ ಸೇರಿದಂತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದರೂ, ವರ್ಷದಿಂದ ವರ್ಷಕ್ಕೆ ರಸ್ತೆ ಹದಗೆಡುತ್ತಲೇ ಬಂದಿದೆ. ಚುನಾವಣೆ ವೇಳೆ ರಸ್ತೆ ಅಭಿವೃದ್ಧಿಯ ಭರವಸೆ ನೀಡುವ ಜನಪ್ರತಿನಿಧಿಗಳು, ನಂತರ ಈ ರಸ್ತೆಯತ್ತ ತಿರುಗಿಯೂ ನೋಡುವುದಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

ಹಲವು ಬಾರಿ ಮನವಿ ಸಲ್ಲಿಸಿದರೂ, ಅಲ್ಲಲ್ಲಿ ತೇಪೆ ಕಾಮಗಾರಿ ನಡೆಸಿ ಕೈತೊಳೆದುಕೊಳ್ಳಲಾಗುತ್ತಿದೆ. ಮಳೆ ಬಂದ ಕೆಲವೇ ದಿನಗಳಲ್ಲಿ ಆ ತೇಪೆಗಳೂ ಕಿತ್ತು ಹೋಗಿ ರಸ್ತೆ ಮತ್ತೆ ಹಳೆಯ ಸ್ಥಿತಿಗೆ ಮರಳುತ್ತಿದೆ. ಇದರಿಂದ ಸಾರ್ವಜನಿಕರ ಹಣವೂ ವ್ಯರ್ಥವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

17 ವರ್ಷಗಳಿಂದ ಶಾಶ್ವತ ಡಾಮರೀಕರಣದಿಂದ ವಂಚಿತವಾಗಿರುವ ಈ ರಸ್ತೆಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಹಾಗೂ ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ. ಮತ್ತೊಂದು ಅಪಘಾತ ಸಂಭವಿಸುವ ಮುನ್ನವೇ ರಸ್ತೆ ಅಭಿವೃದ್ಧಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಭರವಸೆ ಕೊಟ್ಟು ಕೈತೊಳೆದರೇ? ರಸ್ತೆ ಅಭಿವೃದ್ಧಿಗೆ ಮತ್ತೊಮ್ಮೆ ಜನಾಂದೋಲನದ ಎಚ್ಚರಿಕೆ!!!!

ಕಳೆದ ವರ್ಷವೂ ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದರು. ಆ ವೇಳೆ ಶೀಘ್ರವೇ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಮಾತಿನಲ್ಲೇ ಉಳಿದಿದ್ದು, ಇಂದಿಗೂ ರಸ್ತೆ ಹಿಂದಿನಂತೆಯೇ ಗುಂಡಿಮಯ ಸ್ಥಿತಿಯಲ್ಲಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪಕ್ಷಬೇಧ ಮರೆತು ಸ್ಥಳೀಯರು ಒಂದೇ ವೇದಿಕೆಯಲ್ಲಿ ಸೇರಿ ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಮತ್ತೊಂದು ಸುತ್ತಿನ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಈ ಬಾರಿಯಾದರೂ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ಶಾಶ್ವತ ಡಾಮರೀಕರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆಯನ್ನೂ ನಾಗರಿಕರು ನೀಡಿದ್ದಾರೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ